AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡಿ ಸಂಗ್ರಹಿಸಿದ 10 ಸಾವಿರ ರೂ. ನಾಣ್ಯಗಳಲ್ಲಿಯೇ ಠೇವಣಿ ಕಟ್ಟಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ, ನಾಣ್ಯ ಎಣಿಸಿ ಸಿಬ್ಬಂದಿ ಸುಸ್ತು

ನಾಮಪತ್ರ ಸಲ್ಲಿಸಿದ ಕೋಟಿ ಕೋಟಿ ಒಡೆಯರ ನಡುವೆ ಯಾದಗಿರಿ ಪಕ್ಷೇತರ ಅಭ್ಯರ್ಥಿಯೊಬ್ಬರು ಗಮನ ಸೆಳೆದಿದ್ದಾರೆ. ಭಿಕ್ಷೆ ಬೇಡಿ 10 ಸಾವಿರ ಸಂಗ್ರಹಿಸಿ ಡೆಪಾಸಿಟ್ ಮಾಡಿ ನಾಮಪತ್ರ ಸಲ್ಲಿಸಿದ್ದಾರೆ.

ಆಯೇಷಾ ಬಾನು
|

Updated on:Apr 19, 2023 | 1:04 PM

Share

ಯಾದಗಿರಿ: ವಿಧಾನಸಭಾ ಚುನಾವಣೆಗೆ ದಿನಗಣನೆ(Karnataka Assembly Elections 2023) ಶುರುವಾಗಿದೆ. ನಾಳೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನ. ಜೊತೆಗೆ ವರ್ಷದ ಮೊದಲ ಅಮವಾಸ್ಯೆ. ಹೀಗಾಗಿ ಇಂದೇ ರಾಜಕೀಯ ನಾಯಕರು ನಾಮಪತ್ರ ಸಲ್ಲಿಕೆಗೆ ಮುಗಿಬಿದ್ದಿದ್ದಾರೆ. ಅದರಲ್ಲೂ ನಾಮಪತ್ರ ಸಲ್ಲಿಸಿದ ಕೋಟಿ ಕೋಟಿ ಒಡೆಯರ ನಡುವೆ ಯಾದಗಿರಿ ಪಕ್ಷೇತರ ಅಭ್ಯರ್ಥಿಯೊಬ್ಬರು ಗಮನ ಸೆಳೆದಿದ್ದಾರೆ. ಭಿಕ್ಷೆ ಬೇಡಿ 10 ಸಾವಿರ ಸಂಗ್ರಹಿಸಿ ಡೆಪಾಸಿಟ್ ಮಾಡಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆ ಎದುರಿಸಲು ಕೋಟಿ, ಕೋಟಿ ಕರ್ಚು ಮಾಡಬೇಕು ಎನ್ನುವವರ ಮುಂದೆ ಏನೂ ಇಲ್ಲದೆಯೂ ಚುನಾವಣೆ ಎದುರಿಸಬಹುದು, ಮತದಾರರ ಮನ ಗೆಲ್ಲಬಹುದು ಎಂಬ ಸಂದೇಶ ಸಾರಲು ಹೊರಟಿದ್ದಾರೆ.

ಒಂದು ವರ್ಷದಲ್ಲಿ 10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ 10 ಸಾವಿರ ಸಂಗ್ರಹ

ಯಾದಗಿರಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಯಂಕಪ್ಪ ಎಂಬುವವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ತಾವು ಭಿಕ್ಷೆ ಬೇಡಿ ಸಂಗ್ರಹಿಸಿದ್ದ ಹಣವನ್ನು ಡೆಪಾಸಿಟಿ ಮಾಡಿದ್ದಾರೆ. ಕಳೆದ ಒಂದು ವರ್ಷದಿಂದ ಕ್ಷೇತ್ರದಾದ್ಯಂತ ಸಂಚರಿಸಿ ಭಿಕ್ಷೆ ಬೇಡಿ ಪ್ರತಿಯೊಂದು ಮನೆಯಿಂದ ಒಂದೊಂದು ರೂ. ಸಂಗ್ರಹಿಸಿ 10 ಸಾವಿರ ರೂ ವರೆಗೆ ನಾಣ್ಯಗಳನ್ನು ಜಮೇ ಮಾಡಿ ಯಾದಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಯಂಕಪ್ಪನವರು ನಾಮಪತ್ರ ಸಲ್ಲಿಸಿದ್ದಾರೆ. ಯಂಕಪ್ಪನವರು ಯಾದಗಿರಿ ಕ್ಷೇತ್ರದ ಮನೆ ಮನೆಗಳಲ್ಲಿ ಭಿಕ್ಷೆ ಬೇಡಿ ಊಟ ಮಾಡುತ್ತಿದ್ದರಂತೆ. ದೇವಸ್ಥಾನದಲ್ಲೇ ವಾಸವಿದ್ದರಂತೆ.

ಇದನ್ನೂ ಓದಿ: Karnataka Assembly Polls; ತಾತ ಸಿದ್ದರಾಮಯ್ಯ ಜೊತೆ ಕ್ಷೇತ್ರದಲ್ಲಿ ತಿರುಗಾಡಿ ರಾಜಕಾರಣ ತಿಳಿದುಕೊಳ್ಳುವ ಆಸಕ್ತಿ ಇದೆ: ಧವನ್ ರಾಕೇಶ್

ಇನ್ನು ಈ ಬಗ್ಗೆ ಮಾತನಾಡಿದ ಯಂಕಪ್ಪ, ನಾನು ದೇಶಕ್ಕಾಗಿ, ಸಮಾಜದ ಉದ್ಧಾರಕ್ಕಾಗಿ ಕ್ಷೇತ್ರದಾದ್ಯಂತ ಸಂಚಾರ ಮಾಡಿದ್ದೇನೆ. ನನ್ನ ಜೀವನವಿಡೀ ಮನೆಯ ಮೆಟ್ಟಿಲು ತುಳಿಯದೇ ಸಮಾಜದ ಸೇವೆ ಮಾಡುತ್ತೇನೆ. ನನ್ನ ವೈಯುಕ್ತಿಕ ಜೀವನವನ್ನು ತ್ಯಜಿಸಿ ರಾಜಕೀಯ ಪ್ರವೇಶಿಸುತ್ತಿದ್ದೇನೆ ಎಂದರು. ಮತ್ತೊಂದೆಡೆ ಯಂಕಪ್ಪ ತಂದಿದ್ದ ನಾಣ್ಯಗಳನ್ನ ಎಣಿಕೆ ಮಾಡಿ ಅಧಿಕಾರಿಗಳು ಸುಸ್ತಾದ್ರು.

ರಾಣಿಬೆನ್ನೂರಿನಲ್ಲೂ ನಾಣ್ಯ ಠೇವಣಿ ಮಾಡಿ ನಾಮಪತ್ರ ಸಲ್ಲಿಕೆ

ಯಾದಗಿರಿ ಮಾತ್ರವಲ್ಲದೆ ಹಾವೇರಿಯಲ್ಲಿಯೂ ಎಎಪಿ ಅಭ್ಯರ್ಥಿಯೊಬ್ಬರು ನಾಣ್ಯಗಳ ಮೂಲಕವೇ ಠೇವಣಿ ತುಂಬಿ ನಾಮಪತ್ರ ಸಲ್ಲಿಸಿದ್ದಾರೆ. ರಾಣೇಬೆನ್ನೂರಿನಲ್ಲಿ ಹನುಮಂತಪ್ಪ ಕಬ್ಬಾರ್‌ ಎಂಬುವವರು ಮೋಟೆಯಲ್ಲಿ ನಾಣ್ಯಗಳನ್ನು ತಂದು ಡೆಪಾಸಿಟ್ ಮಾಡಿದ್ದಾರೆ. ಮೊದಲು ನಾಣ್ಯವನ್ನು ಚುನಾವಣಾಧಿಕಾರಿಯೇ ಎಣಿಸಲು ಮುಂದಾಗಿದ್ದು ಬಳಿಕ ತಮ್ಮ ಸಿಬ್ಬಂದಿ ಸಹಾಯ ಪಡೆದಿದ್ದಾರೆ. ನಾಣ್ಯಗಳನ್ನು ಎಣಿಸಲು ಸಾಕಷ್ಟು ಸಮಯ ಬೇಕಿದ್ದರಿಂದ ನಾಣ್ಯ ಎಣಿಸುವ ಮೊದಲೇ ಅವರಿಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಯಿತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:55 pm, Wed, 19 April 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ