AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು; ಈ ಬಗ್ಗೆ ಬಾಲ ಬಿಚ್ಚಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ಕೊಟ್ಟ ಶಾಸಕ ರಾಜುಗೌಡ

ಕಳೆದ ನಾಲ್ಕು ಐದು ದಿನಗಳ ಹಿಂದೆ ನೂರಾರು ಪೊಲೀಸರ ಭದ್ರತೆಯಲ್ಲಿ ಐದು ಮಂದಿ ಮಹಿಳೆಯರು ದೇಗುಲ ಪ್ರವೇಶ ಮಾಡಿದ್ರು. ಹೂವಿನಹಳ್ಳಿ ಗ್ರಾಮದಿಂದ ನಡೆದುಕೊಂಡು ಬಂದು ಅಂಬಲಿಹಾಳ್ ಆಂಜನೇಯ ದರ್ಶನ ಪಡೆದಿದ್ರು. ಶಾಸಕ ರಾಜುಗೌಡ ಧೈರ್ಯ ಹೇಳಿದ ಬಳಿಕ ಸಾಮೂಹಿಕವಾಗಿ ದೇಗುಲ ಪ್ರವೇಶ ಮಾಡಿದ್ದಾರೆ.

ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು; ಈ ಬಗ್ಗೆ ಬಾಲ ಬಿಚ್ಚಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ಕೊಟ್ಟ ಶಾಸಕ ರಾಜುಗೌಡ
ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು
TV9 Web
| Edited By: |

Updated on:Jun 01, 2022 | 5:31 PM

Share

ಯಾದಗಿರಿ: ಅಂಬಲಿಹಾಳ್ ಗ್ರಾಮದಲ್ಲಿ ಆಂಜನೇಯ ದೇವಸ್ಥಾನಕ್ಕೆ ದಲಿತರ ಪ್ರವೇಶ ಪ್ರಕರಣಕ್ಕೆ ಸಂಬಂಧಿಸಿ ಅಂದು ಐದು ಜನ ಇಂದು ಸಾಮೂಹಿಕವಾಗಿ ದಲಿತರು ದೇಗುಲ ಪ್ರವೇಶ ಮಾಡಿದ್ದಾರೆ. ಇಡೀ ದಲಿತ ಸಮೂದಾಯದ ಮಹಿಳೆಯರು ಪುರುಷರು ಸೇರಿ ನೂರಕ್ಕೂ ಅಧಿಕ ಜನರು ದೇಗುಲ ಪ್ರವೇಶ ಮಾಡಿದ್ದಾರೆ.

ಕಳೆದ ನಾಲ್ಕು ಐದು ದಿನಗಳ ಹಿಂದೆ ನೂರಾರು ಪೊಲೀಸರ ಭದ್ರತೆಯಲ್ಲಿ ಐದು ಮಂದಿ ಮಹಿಳೆಯರು ದೇಗುಲ ಪ್ರವೇಶ ಮಾಡಿದ್ರು. ಹೂವಿನಹಳ್ಳಿ ಗ್ರಾಮದಿಂದ ನಡೆದುಕೊಂಡು ಬಂದು ಅಂಬಲಿಹಾಳ್ ಆಂಜನೇಯ ದರ್ಶನ ಪಡೆದಿದ್ರು. ಶಾಸಕ ರಾಜುಗೌಡ ಧೈರ್ಯ ಹೇಳಿದ ಬಳಿಕ ಸಾಮೂಹಿಕವಾಗಿ ದೇಗುಲ ಪ್ರವೇಶ ಮಾಡಿದ್ದಾರೆ. ಎರಡು ಗ್ರಾಮದಲ್ಲಿ ಶಾಂತಿ ಸಭೆ ಮಾಡಿ ಯಾದಗಿರಿ ಜಿಲ್ಲೆಯ ಸುರಪುರದ ಬಿಜೆಪಿ ಶಾಸಕ ರಾಜುಗೌಡ ಧೈರ್ಯ ಹೇಳಿದ್ದರು. ಇದನ್ನೂ ಓದಿ: ಪಿಎಸ್​​ಐ ನೇಮಕಾತಿ ಅಕ್ರಮ: ಬ್ಲೂಟೂತ್ ಸರಬರಾಜು ಮಾಡ್ತಿದ್ದ ರುದ್ರಗೌಡ ಪಾಟೀಲ್​ನ ಮತ್ತಿಬ್ಬರು ಆಪ್ತರು ಅರೆಸ್ಟ್

ಇನ್ನು ಯಾದಗಿರಿ ಜಿಲ್ಲೆ ಸುರಪುರದ ಹೂವಿನಳ್ಳಿಯಲ್ಲಿ ಶಾಸಕ ರಾಜುಗೌಡ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಹೂವಿನಹಳ್ಳಿ ಗ್ರಾಮದ ದಲಿತರು ಭಯಭೀತರಾಗಿದ್ದರು. ಮೇ 28 ರಂದು ಪೋಲಿಸರ ಭದ್ರತೆಯಲ್ಲಿ ದಲಿತರ ದೇವಸ್ಥಾನ ಪ್ರವೇಶ ನಡೆದ ಘಟನೆಯಿಂದ ಆಘಾತವಾಗಿದೆ. ಅಂಬಲಿಹಾಳ್ ಗ್ರಾಮಸ್ಥರ ಜೊತೆ ಸಭೆ ನಡೆಸಿ ಮನವೊಲಿಸುವ ಕಾರ್ಯ ಮಾಡಿದ್ದೇನೆ. ಅಂಬಲಿಹಾಳ್ ಮತ್ತು ಹೂವಿನಳ್ಳಿ ಗ್ರಾಮಸ್ಥರ ಜೊತೆ ಸಭೆ ನಡೆಸಿ ಧೈರ್ಯ ತುಂಬಿದ್ದೇನೆ. ಮುಂದೆ ಯಾರಾದ್ರು ಬಾಲ ಬಿಚ್ಚಿದ್ರೆ ಅವರು ಅನುಭವಿಸ್ತಾರೆ ಎಂದು ಪರೋಕ್ಷವಾಗಿ ಸವರ್ಣೀಯರನ್ನ ಶಾಸಕ ರಾಜುಗೌಡ ವಾರ್ನ್ ಮಾಡಿದ್ದಾರೆ. ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತವರನ್ನು ಕೃಷ್ಣಾಜನ್ಮ ಸ್ಥಳಕ್ಕೆ ಕಳಸಿಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಏನೇ ಇದ್ರು ಎರಡು ಊರು ಒಂದಾಗಿ, ಜಾತಿ, ಭೇದ ಭಾವವಿಲ್ಲದೇ ನಡೆಯಬೇಕು ಎಂದರು. ಇದನ್ನೂ ಓದಿ: ‘ರಾಷ್ಟ್ರಭಾಷೆ ಕುರಿತ ಚರ್ಚೆ ಪ್ರಧಾನಿ ಮಾತಿನೊಂದಿಗೆ ಮುಕ್ತಾಯವಾಗಿರುವುದು ಸಂತಸ ತಂದಿದೆ’: ಸುದೀಪ್​

Published On - 5:31 pm, Wed, 1 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್