AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು; ಈ ಬಗ್ಗೆ ಬಾಲ ಬಿಚ್ಚಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ಕೊಟ್ಟ ಶಾಸಕ ರಾಜುಗೌಡ

ಕಳೆದ ನಾಲ್ಕು ಐದು ದಿನಗಳ ಹಿಂದೆ ನೂರಾರು ಪೊಲೀಸರ ಭದ್ರತೆಯಲ್ಲಿ ಐದು ಮಂದಿ ಮಹಿಳೆಯರು ದೇಗುಲ ಪ್ರವೇಶ ಮಾಡಿದ್ರು. ಹೂವಿನಹಳ್ಳಿ ಗ್ರಾಮದಿಂದ ನಡೆದುಕೊಂಡು ಬಂದು ಅಂಬಲಿಹಾಳ್ ಆಂಜನೇಯ ದರ್ಶನ ಪಡೆದಿದ್ರು. ಶಾಸಕ ರಾಜುಗೌಡ ಧೈರ್ಯ ಹೇಳಿದ ಬಳಿಕ ಸಾಮೂಹಿಕವಾಗಿ ದೇಗುಲ ಪ್ರವೇಶ ಮಾಡಿದ್ದಾರೆ.

ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು; ಈ ಬಗ್ಗೆ ಬಾಲ ಬಿಚ್ಚಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ಕೊಟ್ಟ ಶಾಸಕ ರಾಜುಗೌಡ
ಸಾಮೂಹಿಕವಾಗಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತರು
TV9 Web
| Edited By: |

Updated on:Jun 01, 2022 | 5:31 PM

Share

ಯಾದಗಿರಿ: ಅಂಬಲಿಹಾಳ್ ಗ್ರಾಮದಲ್ಲಿ ಆಂಜನೇಯ ದೇವಸ್ಥಾನಕ್ಕೆ ದಲಿತರ ಪ್ರವೇಶ ಪ್ರಕರಣಕ್ಕೆ ಸಂಬಂಧಿಸಿ ಅಂದು ಐದು ಜನ ಇಂದು ಸಾಮೂಹಿಕವಾಗಿ ದಲಿತರು ದೇಗುಲ ಪ್ರವೇಶ ಮಾಡಿದ್ದಾರೆ. ಇಡೀ ದಲಿತ ಸಮೂದಾಯದ ಮಹಿಳೆಯರು ಪುರುಷರು ಸೇರಿ ನೂರಕ್ಕೂ ಅಧಿಕ ಜನರು ದೇಗುಲ ಪ್ರವೇಶ ಮಾಡಿದ್ದಾರೆ.

ಕಳೆದ ನಾಲ್ಕು ಐದು ದಿನಗಳ ಹಿಂದೆ ನೂರಾರು ಪೊಲೀಸರ ಭದ್ರತೆಯಲ್ಲಿ ಐದು ಮಂದಿ ಮಹಿಳೆಯರು ದೇಗುಲ ಪ್ರವೇಶ ಮಾಡಿದ್ರು. ಹೂವಿನಹಳ್ಳಿ ಗ್ರಾಮದಿಂದ ನಡೆದುಕೊಂಡು ಬಂದು ಅಂಬಲಿಹಾಳ್ ಆಂಜನೇಯ ದರ್ಶನ ಪಡೆದಿದ್ರು. ಶಾಸಕ ರಾಜುಗೌಡ ಧೈರ್ಯ ಹೇಳಿದ ಬಳಿಕ ಸಾಮೂಹಿಕವಾಗಿ ದೇಗುಲ ಪ್ರವೇಶ ಮಾಡಿದ್ದಾರೆ. ಎರಡು ಗ್ರಾಮದಲ್ಲಿ ಶಾಂತಿ ಸಭೆ ಮಾಡಿ ಯಾದಗಿರಿ ಜಿಲ್ಲೆಯ ಸುರಪುರದ ಬಿಜೆಪಿ ಶಾಸಕ ರಾಜುಗೌಡ ಧೈರ್ಯ ಹೇಳಿದ್ದರು. ಇದನ್ನೂ ಓದಿ: ಪಿಎಸ್​​ಐ ನೇಮಕಾತಿ ಅಕ್ರಮ: ಬ್ಲೂಟೂತ್ ಸರಬರಾಜು ಮಾಡ್ತಿದ್ದ ರುದ್ರಗೌಡ ಪಾಟೀಲ್​ನ ಮತ್ತಿಬ್ಬರು ಆಪ್ತರು ಅರೆಸ್ಟ್

ಇನ್ನು ಯಾದಗಿರಿ ಜಿಲ್ಲೆ ಸುರಪುರದ ಹೂವಿನಳ್ಳಿಯಲ್ಲಿ ಶಾಸಕ ರಾಜುಗೌಡ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಹೂವಿನಹಳ್ಳಿ ಗ್ರಾಮದ ದಲಿತರು ಭಯಭೀತರಾಗಿದ್ದರು. ಮೇ 28 ರಂದು ಪೋಲಿಸರ ಭದ್ರತೆಯಲ್ಲಿ ದಲಿತರ ದೇವಸ್ಥಾನ ಪ್ರವೇಶ ನಡೆದ ಘಟನೆಯಿಂದ ಆಘಾತವಾಗಿದೆ. ಅಂಬಲಿಹಾಳ್ ಗ್ರಾಮಸ್ಥರ ಜೊತೆ ಸಭೆ ನಡೆಸಿ ಮನವೊಲಿಸುವ ಕಾರ್ಯ ಮಾಡಿದ್ದೇನೆ. ಅಂಬಲಿಹಾಳ್ ಮತ್ತು ಹೂವಿನಳ್ಳಿ ಗ್ರಾಮಸ್ಥರ ಜೊತೆ ಸಭೆ ನಡೆಸಿ ಧೈರ್ಯ ತುಂಬಿದ್ದೇನೆ. ಮುಂದೆ ಯಾರಾದ್ರು ಬಾಲ ಬಿಚ್ಚಿದ್ರೆ ಅವರು ಅನುಭವಿಸ್ತಾರೆ ಎಂದು ಪರೋಕ್ಷವಾಗಿ ಸವರ್ಣೀಯರನ್ನ ಶಾಸಕ ರಾಜುಗೌಡ ವಾರ್ನ್ ಮಾಡಿದ್ದಾರೆ. ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತವರನ್ನು ಕೃಷ್ಣಾಜನ್ಮ ಸ್ಥಳಕ್ಕೆ ಕಳಸಿಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಏನೇ ಇದ್ರು ಎರಡು ಊರು ಒಂದಾಗಿ, ಜಾತಿ, ಭೇದ ಭಾವವಿಲ್ಲದೇ ನಡೆಯಬೇಕು ಎಂದರು. ಇದನ್ನೂ ಓದಿ: ‘ರಾಷ್ಟ್ರಭಾಷೆ ಕುರಿತ ಚರ್ಚೆ ಪ್ರಧಾನಿ ಮಾತಿನೊಂದಿಗೆ ಮುಕ್ತಾಯವಾಗಿರುವುದು ಸಂತಸ ತಂದಿದೆ’: ಸುದೀಪ್​

Published On - 5:31 pm, Wed, 1 June 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?