AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ನಾಗನಗೌಡ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಕುಮಾರಸ್ವಾಮಿ: ಕಾಲಾಯ ತಸ್ಮೈ ನಮಃ ಎಂದ ಜೆಡಿಎಸ್ ಶಾಸಕ ಶರಣಗೌಡ

ಜೆಡಿಎಸ್​ನ ಮಾಜಿ ಶಾಸಕ ನಾಗನಗೌಡ ಕಂದಕೂರ್ ಅವರು ಜನವರಿ 28 ರಂದು ನಿಧನ ಹೊಂದಿದ್ದರು. ಇವರ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಭಾಗವಹಿಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಶರಣಗೌಡ ಕಂದಕೂರ, ಕಾಲಾಯ ತಸ್ಮೈ ನಮಃ ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ. ಸಮಯ ಬಂದಾಗ ನಾನು ಉತ್ತರ ಕೊಟ್ಟೇ ಕೊಡುತ್ತೇನೆ ಎಂದಿದ್ದಾರೆ.

ತಂದೆ ನಾಗನಗೌಡ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಕುಮಾರಸ್ವಾಮಿ: ಕಾಲಾಯ ತಸ್ಮೈ ನಮಃ ಎಂದ ಜೆಡಿಎಸ್ ಶಾಸಕ ಶರಣಗೌಡ
ತಂದೆ ನಾಗನಗೌಡ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಕುಮಾರಸ್ವಾಮಿ: ಕಾಲಾಯ ತಸ್ಮೈ ನಮಃ ಎಂದ ಜೆಡಿಎಸ್ ಶಾಸಕ ಶರಣಗೌಡ
ಅಮೀನ್​ ಸಾಬ್​
| Edited By: |

Updated on: Feb 24, 2024 | 8:26 PM

Share

ಯಾದಗಿರಿ, ಫೆ.24: ಮಾಜಿ ಶಾಸಕ ನಾಗನಗೌಡ (Nagana Gowda) ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಭಾಗವಹಿಸದ ಬಗ್ಗೆ ಗುರುಮಠಕಲ್‌ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ (Sharanagouda Kandakur) ಅವರು ಕೊನೆಗೂ ಮೌನ ಮುರಿದಿದ್ದಾರೆ. ಕುಮಾರಸ್ವಾಮಿ ಅವರು ಯಾಕೆ ಭಾಗವಹಿಸಿಲ್ಲ ಅಂತಾ ಅವರನ್ನೇ ಕೇಳಬೇಕು. ಕಾಲಾಯ ತಸ್ಮೈ ನಮಃ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ. ಸಮಯ ಬಂದಾಗ ನಾನು ಉತ್ತರ ಕೊಟ್ಟೇ ಕೊಡುತ್ತೇನೆ ಎಂದಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಶರಣಗೌಡ ಕಂದಕೂರ, ನಮ್ಮ ತಂದೆಯವರು ನಿಧನರಾಗಿ 20 ದಿನಗಳು ಆದಮೇಲೆ ಕುಮಾರಸ್ವಾಮಿ ಅವರು ದೂರವಾಣಿ ಕರೆ ಮಾಡಿದ್ದರು. ಬಂದು ಭೇಟಿಯಾಗಿ ಬ್ರದರ್ ಅಂತ ಹೇಳಿದ್ದರು. ಬರುತ್ತೇನೆ ಸರ್ ಅಂತ ಹೇಳಿದ್ದೆ. ನಿಖಿಲ್ ಕುಮಾರಸ್ವಾಮಿ ಅವರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದರು.

ಇದನ್ನೂ ಓದಿ: ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್; ಹೆಚ್​ಡಿ ಕುಮಾರಸ್ವಾಮಿ, ಅಮಿತ್ ಶಾ ಮಾತುಕತೆ

ರಾಜಕೀಯ ಹೊರತು ಆತ್ಮೀಯ ಸ್ನೇಹಿತರು, ಸಹೋದರತೆ ಮನೋಭಾವದಿಂದ ನಿಖಿಲ್ ಅವರ ಜೊತೆ ಇದ್ದೇವೆ. ನಮ್ಮ ತಂದೆ ಅವರ ಅಂತಿಮಯಾತ್ರೆಯಲ್ಲಿ ಕುಮಾರಸ್ವಾಮಿ ಅವರು ಯಾಕೇ ಭಾಗವಹಿಸಿಲ್ಲ ಅಂತಾ ಅವರನ್ನೇ ಕೇಳಬೇಕು. ಅದಕ್ಕೆ ನಾನೇನು ಹೇಳಲಿ? ಕಾಲಾಯ ತಸ್ಮೈ ನಮಃ, ಕಾಲವೇ ಉತ್ತರ ಕೊಡುತ್ತೆ ಎಂದರು.

ನಮ್ಮ ತಂದೆ ನಾಗನಗೌಡ ಹಾಗೂ ನಮ್ಮ ಇಡೀ ಕುಟುಂಬ ಜೆಡಿಎಸ್ ಪಕ್ಷದ ಸಂಘಟನೆಗಾಗಿ ಇಡೀ ಜೀವನವನ್ನೇ ಸವಿಸಿದ್ದೇವೆ. ಇದಕ್ಕೆ ಖಂಡಿತವಾಗಿ ಕಾಲವೇ ಉತ್ತರ ನೀಡುತ್ತೇನೆ. ಆ ಸಮಯ ಬಂದಾಗ ನಾನು ಉತ್ತರ ಕೊಟ್ಟೆ ಕೊಡುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್