AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ನೀಡಿದ ಕೋವಿಡ್ ಪರಿಹಾರ ಚೆಕ್ ಬೌನ್ಸ್! ಸುತ್ತಿ ಸುತ್ತಿ ಸುಸ್ತಾದರೂ ಪರಿಹಾರ ಹಣ ಮಾತ್ರ ಕೈಗೆ ಸಿಗ್ತಿಲ್ಲ

ಅನಿತಾ ಚೆಕ್ ಹಿಡಿದು ಹಲವು ಬ್ಯಾಂಕ್ಗಳನ್ನು ಸುತ್ತುತಿದ್ದಾರೆ. ಆದ್ರೆ ಪರಿಹಾರ ಹಣ ಮಾತ್ರ ಕೈಗೆ ಸಿಗುತ್ತಿಲ್ಲ. ಬ್ಯಾಂಕ್ ಸಿಬ್ಬಂದಿ ಇತರೆ ಕಾರಣ ಎಂದು ಬರೆದು ಚೆಕ್ ವಾಪಸ್ ನೀಡಿ ಕಳಿಸುತ್ತಿದ್ದಾರೆ. ಮತ್ತೆ ಕೆಲವು ಕಡೆ ಸರಿಯಾದ ಸ್ಪಂದನೆಯೇ ಸಿಗದೆ ಕುಟುಂಬ ನೊಂದಿದೆ.

ಸರ್ಕಾರ ನೀಡಿದ ಕೋವಿಡ್ ಪರಿಹಾರ ಚೆಕ್ ಬೌನ್ಸ್! ಸುತ್ತಿ ಸುತ್ತಿ ಸುಸ್ತಾದರೂ ಪರಿಹಾರ ಹಣ ಮಾತ್ರ ಕೈಗೆ ಸಿಗ್ತಿಲ್ಲ
ಸರ್ಕಾರ ನೀಡಿದ ಕೋವಿಡ್ ಪರಿಹಾರ ಚೆಕ್ ಬೌನ್ಸ್! ಸುತ್ತಿ ಸುತ್ತಿ ಸುಸ್ತಾದರೂ ಪರಿಹಾರ ಹಣ ಮಾತ್ರ ಕೈಗೆ ಸಿಗ್ತಿಲ್ಲ
TV9 Web
| Edited By: ಆಯೇಷಾ ಬಾನು|

Updated on:Jan 21, 2022 | 10:57 AM

Share

ಯಾದಗಿರಿ: ಮಹಾಮಾರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ನೀಡಿದ್ದ ಪರಿಹಾರ ಚೆಕ್ ಈಗ ಯಾವುದೇ ಪ್ರಯೋಜನಕ್ಕೆ ಇಲ್ಲದಂತಾಗಿದೆ. ಕೈಯಲ್ಲಿ ಚೆಕ್ ಇದ್ದರೂ ಹಣ ಮಾತ್ರ ಸಿಗುತ್ತಿಲ್ಲ. ಪರಿಹಾರ ಹಣ ಸಿಗದೆ ಫಲಾನುಭವಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿತ್ತು. ಅದರಂತೆಯೇ ಶಾಸಕರ ಸಮ್ಮುಖದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಲಾಗಿತ್ತು. ಆದ್ರೆ ಈಗ ಇತರೆ ಕಾರಣ ಎಂದು ಬರೆದು ಚೆಕ್ ವಾಪಸ್ ನೀಡಿ ಬ್ಯಾಂಕ್ ಸಿಬ್ಬಂದಿ ಕಳಿಸುತ್ತಿದ್ದಾರೆ. ಹತ್ತಾರು ಬಾರಿ ಬ್ಯಾಂಕ್ಗಳಿಗೆ ಸುತ್ತಿದರೂ ಪ್ರಯೋಜನವಾಗದೆ ಪರದಾಡುತ್ತಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿಯ ಬಸಣ್ಣಗೌಡ ಎಂಬುವವರು ಕೊರೊನಾದಿಂದ ಮೃತಪಟ್ಟಿದ್ದರು. ಪರಿಹಾರಕ್ಕಾಗಿ ಅವರ ಮಗಳು ಅನಿತಾ ಎಲ್ಲಾ ದಾಖಲೆಗಳ ಅರ್ಜಿ ಸಲ್ಲಿಸಿದ್ದರು. ಅದರಂತೆ ಅನಿತಾ ಸೇರಿದಂತೆ ಉಳಿದ ಅರ್ಹ ಅರ್ಜಿದಾರರಿಗೆ ಡಿಸೆಂಬರ್ 17ರಂದು ಸುರಪುರ ಶಾಸಕ ರಾಜುಗೌಡ ಸಮ್ಮುಖದಲ್ಲಿ ಚೆಕ್ ನೀಡಲಾಗಿತ್ತು.

ಸದ್ಯ ಅನಿತಾ ಚೆಕ್ ಹಿಡಿದು ಹಲವು ಬ್ಯಾಂಕ್ಗಳನ್ನು ಸುತ್ತುತಿದ್ದಾರೆ. ಆದ್ರೆ ಪರಿಹಾರ ಹಣ ಮಾತ್ರ ಕೈಗೆ ಸಿಗುತ್ತಿಲ್ಲ. ಬ್ಯಾಂಕ್ ಸಿಬ್ಬಂದಿ ಇತರೆ ಕಾರಣ ಎಂದು ಬರೆದು ಚೆಕ್ ವಾಪಸ್ ನೀಡಿ ಕಳಿಸುತ್ತಿದ್ದಾರೆ. ಮತ್ತೆ ಕೆಲವು ಕಡೆ ಸರಿಯಾದ ಸ್ಪಂದನೆಯೇ ಸಿಗದೆ ಕುಟುಂಬ ನೊಂದಿದೆ.

ಹೆಸರಿಗೆ ಮಾತ್ರ ಕೋವಿಡ್ ಪರಿಹಾರ ಕೈಗೆ ಬರ್ತಾಯಿಲ್ಲ ಹಣ ಇನ್ನು ಇದೇ ರೀತಿ ಮತ್ತೊಂದು ಕುಟುಂಬ ಕೂಡ ಹಣಕ್ಕಾಗಿ ಅಲೆದಾಡಿ ಹೈರಾಣಾಗಿದೆ. ಚೆಕ್ ಪಡೆದ ದೇವಿಕೇರ ಗ್ರಾಮದ ಕುಟುಂಬ ಬ್ಯಾಂಕ್​ಗೆ ಅಲೆದು ಅಲೆದು ಬೇಸತ್ತಿದೆ. ಸುರಪುರ ತಾಲೂಕಿನ ದೇವಿಕೇರ ಗ್ರಾಮದ ನಾಗಪ್ಪ ಕೋವಿಡ್​ನಿಂದ ಮೃತಪಟ್ಟಿದ್ದರು. ಇವರ ಕುಟುಂಬಸ್ಥರಿಗೆ ಪರಿಹಾರದ ಚೆಕ್ ನೀಡಲಾಗಿತ್ಪತು. ಆದ್ರೆ ಎಷ್ಟೋ ಬ್ಯಾಂಕ್​ಗಳಿಗೆ ಅಲೆಯುತ್ತಿದ್ರು ಹಣ ಮತ್ರ ಜಮೆ ಆಗುತ್ತಿಲ್ಲ ಎಂದು ಕುಟುಂಬ ಅಳಲು ತೋಡಿಕೊಂಡಿದೆ.

ನಾನೇ ಕೆಲ‌ ಫಲನಾಭವಿಗಳಿಗೆ ಕಳೆದ ತಿಂಗಳು ಪರಿಹಾರ‌ದ‌ ಚೆಕ್ ವಿತರಣೆ ಮಾಡಿದ್ದೇನೆ. ಆದ್ರೆ ಜಾಲಿಬೆಂಚಿ ಹಾಗೂ ದೇವಿಕೇರದ ಕುಟುಂಬಗಳಿಗೆ ಚೆಕ್ ನೀಡಿದ್ರು ಹಣ ಖಾತೆಗೆ ಜಮಾ ಆಗಿಲ್ಲ ಎನ್ನುವ ವಿಚಾರ ಗೊತ್ತಾಗುತ್ತಿದಂತೆ ಬ್ಯಾಂಕ್ ಮ್ಯಾನೇಜರ್ ಗೆ ಮಾತಾಡಿದ್ದೇನೆ ಇದು ಬ್ಯಾಂಕ್ ನವರ ತಪ್ಪಿನಿಂದ ಆಗಿದ್ದು ಸರಿ ಪಡಿಸಲು ಹೇಳಿದ್ದೇನೆ ಎಂದು ಸುರಪುರದ ಬಿಜೆಪಿ ಶಾಸಕ ರಾಜುಗೌಡ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಯಾವುದೋ ಒಂದು ಜಿಲ್ಲೆಯಲ್ಲಿ ಚೆಕ್ ಬೌನ್ಸ್ ಆಗಿದೆ ಅನ್ನೋದು ಗಮನಕ್ಕೆ ಬಂದಿದೆ. ಯಾದಗಿರಿಯಲ್ಲಿ ಆ ರೀತಿಯಾಗಿದೆ ಪರಿಶೀಲನೆ ಮಾಡಿ ಕ್ರಮತೆಗೆದುಕೊಳ್ಳಲು ಹೇಳಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: South Africa vs India: ಇಂದು ಭಾರತ- ದಕ್ಷಿಣ ಆಫ್ರಿಕಾ ಎರಡನೇ ಏಕದಿನ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಹುಲ್ ಪಡೆ

Published On - 8:25 am, Fri, 21 January 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು