AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ನೀಡಿದ ಕೋವಿಡ್ ಪರಿಹಾರ ಚೆಕ್ ಬೌನ್ಸ್! ಸುತ್ತಿ ಸುತ್ತಿ ಸುಸ್ತಾದರೂ ಪರಿಹಾರ ಹಣ ಮಾತ್ರ ಕೈಗೆ ಸಿಗ್ತಿಲ್ಲ

ಅನಿತಾ ಚೆಕ್ ಹಿಡಿದು ಹಲವು ಬ್ಯಾಂಕ್ಗಳನ್ನು ಸುತ್ತುತಿದ್ದಾರೆ. ಆದ್ರೆ ಪರಿಹಾರ ಹಣ ಮಾತ್ರ ಕೈಗೆ ಸಿಗುತ್ತಿಲ್ಲ. ಬ್ಯಾಂಕ್ ಸಿಬ್ಬಂದಿ ಇತರೆ ಕಾರಣ ಎಂದು ಬರೆದು ಚೆಕ್ ವಾಪಸ್ ನೀಡಿ ಕಳಿಸುತ್ತಿದ್ದಾರೆ. ಮತ್ತೆ ಕೆಲವು ಕಡೆ ಸರಿಯಾದ ಸ್ಪಂದನೆಯೇ ಸಿಗದೆ ಕುಟುಂಬ ನೊಂದಿದೆ.

ಸರ್ಕಾರ ನೀಡಿದ ಕೋವಿಡ್ ಪರಿಹಾರ ಚೆಕ್ ಬೌನ್ಸ್! ಸುತ್ತಿ ಸುತ್ತಿ ಸುಸ್ತಾದರೂ ಪರಿಹಾರ ಹಣ ಮಾತ್ರ ಕೈಗೆ ಸಿಗ್ತಿಲ್ಲ
ಸರ್ಕಾರ ನೀಡಿದ ಕೋವಿಡ್ ಪರಿಹಾರ ಚೆಕ್ ಬೌನ್ಸ್! ಸುತ್ತಿ ಸುತ್ತಿ ಸುಸ್ತಾದರೂ ಪರಿಹಾರ ಹಣ ಮಾತ್ರ ಕೈಗೆ ಸಿಗ್ತಿಲ್ಲ
TV9 Web
| Edited By: ಆಯೇಷಾ ಬಾನು|

Updated on:Jan 21, 2022 | 10:57 AM

Share

ಯಾದಗಿರಿ: ಮಹಾಮಾರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ನೀಡಿದ್ದ ಪರಿಹಾರ ಚೆಕ್ ಈಗ ಯಾವುದೇ ಪ್ರಯೋಜನಕ್ಕೆ ಇಲ್ಲದಂತಾಗಿದೆ. ಕೈಯಲ್ಲಿ ಚೆಕ್ ಇದ್ದರೂ ಹಣ ಮಾತ್ರ ಸಿಗುತ್ತಿಲ್ಲ. ಪರಿಹಾರ ಹಣ ಸಿಗದೆ ಫಲಾನುಭವಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿತ್ತು. ಅದರಂತೆಯೇ ಶಾಸಕರ ಸಮ್ಮುಖದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಲಾಗಿತ್ತು. ಆದ್ರೆ ಈಗ ಇತರೆ ಕಾರಣ ಎಂದು ಬರೆದು ಚೆಕ್ ವಾಪಸ್ ನೀಡಿ ಬ್ಯಾಂಕ್ ಸಿಬ್ಬಂದಿ ಕಳಿಸುತ್ತಿದ್ದಾರೆ. ಹತ್ತಾರು ಬಾರಿ ಬ್ಯಾಂಕ್ಗಳಿಗೆ ಸುತ್ತಿದರೂ ಪ್ರಯೋಜನವಾಗದೆ ಪರದಾಡುತ್ತಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿಯ ಬಸಣ್ಣಗೌಡ ಎಂಬುವವರು ಕೊರೊನಾದಿಂದ ಮೃತಪಟ್ಟಿದ್ದರು. ಪರಿಹಾರಕ್ಕಾಗಿ ಅವರ ಮಗಳು ಅನಿತಾ ಎಲ್ಲಾ ದಾಖಲೆಗಳ ಅರ್ಜಿ ಸಲ್ಲಿಸಿದ್ದರು. ಅದರಂತೆ ಅನಿತಾ ಸೇರಿದಂತೆ ಉಳಿದ ಅರ್ಹ ಅರ್ಜಿದಾರರಿಗೆ ಡಿಸೆಂಬರ್ 17ರಂದು ಸುರಪುರ ಶಾಸಕ ರಾಜುಗೌಡ ಸಮ್ಮುಖದಲ್ಲಿ ಚೆಕ್ ನೀಡಲಾಗಿತ್ತು.

ಸದ್ಯ ಅನಿತಾ ಚೆಕ್ ಹಿಡಿದು ಹಲವು ಬ್ಯಾಂಕ್ಗಳನ್ನು ಸುತ್ತುತಿದ್ದಾರೆ. ಆದ್ರೆ ಪರಿಹಾರ ಹಣ ಮಾತ್ರ ಕೈಗೆ ಸಿಗುತ್ತಿಲ್ಲ. ಬ್ಯಾಂಕ್ ಸಿಬ್ಬಂದಿ ಇತರೆ ಕಾರಣ ಎಂದು ಬರೆದು ಚೆಕ್ ವಾಪಸ್ ನೀಡಿ ಕಳಿಸುತ್ತಿದ್ದಾರೆ. ಮತ್ತೆ ಕೆಲವು ಕಡೆ ಸರಿಯಾದ ಸ್ಪಂದನೆಯೇ ಸಿಗದೆ ಕುಟುಂಬ ನೊಂದಿದೆ.

ಹೆಸರಿಗೆ ಮಾತ್ರ ಕೋವಿಡ್ ಪರಿಹಾರ ಕೈಗೆ ಬರ್ತಾಯಿಲ್ಲ ಹಣ ಇನ್ನು ಇದೇ ರೀತಿ ಮತ್ತೊಂದು ಕುಟುಂಬ ಕೂಡ ಹಣಕ್ಕಾಗಿ ಅಲೆದಾಡಿ ಹೈರಾಣಾಗಿದೆ. ಚೆಕ್ ಪಡೆದ ದೇವಿಕೇರ ಗ್ರಾಮದ ಕುಟುಂಬ ಬ್ಯಾಂಕ್​ಗೆ ಅಲೆದು ಅಲೆದು ಬೇಸತ್ತಿದೆ. ಸುರಪುರ ತಾಲೂಕಿನ ದೇವಿಕೇರ ಗ್ರಾಮದ ನಾಗಪ್ಪ ಕೋವಿಡ್​ನಿಂದ ಮೃತಪಟ್ಟಿದ್ದರು. ಇವರ ಕುಟುಂಬಸ್ಥರಿಗೆ ಪರಿಹಾರದ ಚೆಕ್ ನೀಡಲಾಗಿತ್ಪತು. ಆದ್ರೆ ಎಷ್ಟೋ ಬ್ಯಾಂಕ್​ಗಳಿಗೆ ಅಲೆಯುತ್ತಿದ್ರು ಹಣ ಮತ್ರ ಜಮೆ ಆಗುತ್ತಿಲ್ಲ ಎಂದು ಕುಟುಂಬ ಅಳಲು ತೋಡಿಕೊಂಡಿದೆ.

ನಾನೇ ಕೆಲ‌ ಫಲನಾಭವಿಗಳಿಗೆ ಕಳೆದ ತಿಂಗಳು ಪರಿಹಾರ‌ದ‌ ಚೆಕ್ ವಿತರಣೆ ಮಾಡಿದ್ದೇನೆ. ಆದ್ರೆ ಜಾಲಿಬೆಂಚಿ ಹಾಗೂ ದೇವಿಕೇರದ ಕುಟುಂಬಗಳಿಗೆ ಚೆಕ್ ನೀಡಿದ್ರು ಹಣ ಖಾತೆಗೆ ಜಮಾ ಆಗಿಲ್ಲ ಎನ್ನುವ ವಿಚಾರ ಗೊತ್ತಾಗುತ್ತಿದಂತೆ ಬ್ಯಾಂಕ್ ಮ್ಯಾನೇಜರ್ ಗೆ ಮಾತಾಡಿದ್ದೇನೆ ಇದು ಬ್ಯಾಂಕ್ ನವರ ತಪ್ಪಿನಿಂದ ಆಗಿದ್ದು ಸರಿ ಪಡಿಸಲು ಹೇಳಿದ್ದೇನೆ ಎಂದು ಸುರಪುರದ ಬಿಜೆಪಿ ಶಾಸಕ ರಾಜುಗೌಡ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಯಾವುದೋ ಒಂದು ಜಿಲ್ಲೆಯಲ್ಲಿ ಚೆಕ್ ಬೌನ್ಸ್ ಆಗಿದೆ ಅನ್ನೋದು ಗಮನಕ್ಕೆ ಬಂದಿದೆ. ಯಾದಗಿರಿಯಲ್ಲಿ ಆ ರೀತಿಯಾಗಿದೆ ಪರಿಶೀಲನೆ ಮಾಡಿ ಕ್ರಮತೆಗೆದುಕೊಳ್ಳಲು ಹೇಳಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: South Africa vs India: ಇಂದು ಭಾರತ- ದಕ್ಷಿಣ ಆಫ್ರಿಕಾ ಎರಡನೇ ಏಕದಿನ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಹುಲ್ ಪಡೆ

Published On - 8:25 am, Fri, 21 January 22

Follow Us
Web contact
Web contact

TV9 Kannada

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!