AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಕ್ಕೇರಿದ ಈರುಳ್ಳಿ ದರ: ಬೆಲೆ ಏರಿಕೆಯ ನಡುವೆಯೂ ಸಿಗದ ರೈತರಿಗೆ ಲಾಭ

ರಾಜ್ಯದಲ್ಲಿ ಈರುಳ್ಳಿ ಬೆಲೆ ₹70-80ಕ್ಕೆ ಏರಿಕೆಯಾಗಿದ್ದು, ಶೀಘ್ರವೇ ₹100 ತಲುಪುವ ಸಾಧ್ಯತೆಯಿದೆ. ಯಾದಗಿರಿಯಲ್ಲಿ ಮುಂಗಾರು ಮಳೆ ವೈಫಲ್ಯದಿಂದ ಈರುಳ್ಳಿ ಬೆಳೆ ಸಂಪೂರ್ಣ ಕುಸಿದಿದೆ. ಗ್ರಾಹಕರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದರೆ, ರೈತರಿಗೆ ಬೆಳೆ ಇಲ್ಲದ ಕಾರಣ ಲಾಭ ಸಿಗದೆ ಸಂಕಷ್ಟದಲ್ಲಿದ್ದಾರೆ. ದಲ್ಲಾಳಿಗಳು ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಗಗನಕ್ಕೇರಿದ ಈರುಳ್ಳಿ ದರ: ಬೆಲೆ ಏರಿಕೆಯ ನಡುವೆಯೂ ಸಿಗದ ರೈತರಿಗೆ ಲಾಭ
ಸಾಂದರ್ಭಕಿ ಚಿತ್ರ
ಅಮೀನ್​ ಸಾಬ್​
| Edited By: |

Updated on:Aug 27, 2026 | 6:13 AM

Share

ಯಾದಗಿರಿ, ಆ.27: ರಾಜ್ಯಾದ್ಯಂತ ಈರುಳ್ಳಿ ದರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಶೀಘ್ರವೇ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 100 ರೂಪಾಯಿ ಗಡಿ ದಾಟುವ ಸಾಧ್ಯತೆಯಿದೆ. ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಬಿಸಿಗೆ ಗ್ರಾಹಕರು ಕಂಗಾಲಾಗಿದ್ದರೆ, ಇನ್ನೊಂದೆಡೆ ದರ ಏರಿಕೆಯಾಗಿದ್ದರೂ ಅದರ ನೇರ ಲಾಭ ಸಿಗದೆ ಅನ್ನದಾತರು ಕಣ್ಣೀರಿಡುತ್ತಿದ್ದಾರೆ.

ಯಾದಗಿರಿ ತಾಲೂಕಿನ ಗುಲಗುಂಜಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಬಾರಿಯ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಸಂಪೂರ್ಣ ಕುಸಿತ ಕಂಡಿದೆ. ಮಳೆ ಕೊರತೆಯಿಂದಾಗಿ ಹೊಲಗಳಲ್ಲಿ ಬೆಳೆಯೇ ಇಲ್ಲದಿರುವಾಗ ದರ ಹೆಚ್ಚಾಗಿರುವುದು ರೈತರ ದುರದೃಷ್ಟಕ್ಕೆ ಹಿಡಿದ ಕನ್ನಡಿಯಾಗಿದೆ.

ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಈರುಳ್ಳಿ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದಾಗಿ ಮಾರುಕಟ್ಟೆಗೆ 1 ಕೆಜಿ ಈರುಳ್ಳಿ ಖರೀದಿಸಲು ಬರುವ ಗ್ರಾಹಕರು ಅರ್ಧ ಕೆಜಿ ಖರೀದಿಸಿ ಮನೆಗೆ ಮರಳುವಂತಾಗಿದೆ. ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ಕೆಲವೇ ಕೆಲವು ರೈತರು ಬೋರ್‌ವೆಲ್ ನೀರನ್ನು ಬಳಸಿಕೊಂಡು ಅಲ್ಪಸ್ವಲ್ಪ ಪ್ರಮಾಣದಲ್ಲಿ ಈರುಳ್ಳಿ ಬೆಳೆಯಲು ಯತ್ನಿಸುತ್ತಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಯಾದಗಿರಿ ಭಾಗದ ರೈತರು ಎಕರೆಗೆ ಸುಮಾರು 100 ಕ್ವಿಂಟಲ್‌ವರೆಗೆ ಭರ್ಜರಿ ಈರುಳ್ಳಿ ಇಳುವರಿ ತೆಗೆದಿದ್ದರು. ಆದರೆ ಗಲ್ಫ್ ರಾಷ್ಟ್ರಗಳ ಯುದ್ಧದ ಪರಿಣಾಮ ಮಾರುಕಟ್ಟೆ ಕುಸಿದು, ಕ್ವಿಂಟಲ್‌ಗೆ ಕೇವಲ 500 ರೂ. ರಿಂದ 600 ರೂ. ಸಿಕ್ಕಿತ್ತು. ಶೇಖರಣಾ ಗೋದಾಮುಗಳ ವ್ಯವಸ್ಥೆ ಇಲ್ಲದ ಕಾರಣ ರೈತರು ಸಿಕ್ಕ ಸಣ್ಣ ಮೊತ್ತಕ್ಕೇ ಈರುಳ್ಳಿ ಮಾರಾಟ ಮಾಡಿ ನಷ್ಟ ಅನುಭವಿಸಿದ್ದರು.

ಇದನ್ನೂ ಓದಿ: ಮಳೆ ಕೊರತೆಯಿಂದ ತರಕಾರಿ ದರ ಏರಿಕೆ: ಗ್ರಾಹಕರು, ವ್ಯಾಪಾರಿಗಳು ಇಬ್ಬರು ಕಂಗಾಲು

ಈಗ ರೈತರ ಕೈಯಲ್ಲಿ ಬೆಳೆಯೇ ಇಲ್ಲದಿದ್ದಾಗ ದರ ಭಾರಿ ಏರಿಕೆಯಾಗಿದೆ. ವ್ಯಾಪಾರಿಗಳು ಹಾಗೂ ದಲ್ಲಾಳಿಗಳು ರೈತರಿಂದ ಕನಿಷ್ಠ ದರಕ್ಕೆ ಖರೀದಿಸಿದ್ದ ಈರುಳ್ಳಿಯನ್ನು ದಾಸ್ತಾನು ಮಾಡಿ, ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ರೈತರು ತೀವ್ರ ಆರೋಪ ಮಾಡಿದ್ದಾರೆ. ಬೆಳೆ ಕೈಯಲ್ಲಿದ್ದಾಗ ದರ ಇರುವುದಿಲ್ಲ, ದರ ಏರಿಕೆಯಾದಾಗ ಹೊಲದಲ್ಲಿ ಬೆಳೆಯೇ ಇರುವುದಿಲ್ಲ ಎಂಬುದು ರೈತರ ನಿರಂತರ ಅಳಲಾಗಿದೆ. ಈಗ ರೈತರ ಬಳಿ ಬೆಳೆಯಿದ್ದಿದ್ದರೆ ಕ್ವಿಂಟಲ್‌ಗೆ 5,000 ರೂ. ದಿಂದ 6,000 ರೂ. ದರ ಸಿಗುತ್ತಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 am, Thu, 27 August 26

Follow Us
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!