AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಸಾಗರ ಜಲಾಶಯದ ನೀರು ತೆಲಂಗಾಣ ಪಾಲು: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ಸರ್ಕಾರದಿಂದ ಮತ್ತೊಂದು ಯಡವಟ್ಟು

Basava Sagar Reservoir: ಕರ್ನಾಟಕದಲ್ಲಿ ಬರದ ನಡುವೆಯೂ ಕಾವೇರಿ ನೀರು ತಮಿಳುನಾಡಿಗೆ ಹರಿಸಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ. ಎಐತರ ಬೆಳೆಗೆ ನೀರಿಲ್ಲ ಎಂದು ಹೇಳಿದ್ದ ಸರ್ಕಾರ ಇದೀಗ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ತೆಲಂಗಾಣಕ್ಕೆ ನೀರು ಬಿಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಸವಸಾಗರ ಜಲಾಶಯದ ನೀರು ತೆಲಂಗಾಣ ಪಾಲು: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ಸರ್ಕಾರದಿಂದ ಮತ್ತೊಂದು ಯಡವಟ್ಟು
ಬಸವಸಾಗರ ಡ್ಯಾಂ
ಅಮೀನ್​ ಸಾಬ್​
| Edited By: |

Updated on: May 15, 2024 | 2:22 PM

Share

ಯಾದಗಿರಿ, ಮೇ 15: ರಾಜ್ಯದಲ್ಲಿ ಭೀಕರ ಬರಗಾಲವಿದ್ದ ಸಂದರ್ಭದಲ್ಲಿಯೂ ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ಜನತೆಯ ಹಾಗೂ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಸರ್ಕಾರ (Congress Government) ಇದೀಗ ಮತ್ತೆ ಅಂಥದ್ದೇ ಯಡವಟ್ಟು ಮಾಡಿಕೊಂಡಿದೆ. ಯಾದಗಿರಿ (Yadgir) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂನಿಂದ (Basava Sagar Reservoir) ಕೃಷ್ಣಾ ನದಿಯ (Krishna River) ಮೂಲಕ ತೆಲಂಗಾಣಕ್ಕೆ ನೀರು ಹರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಆರ್​ಟಿಪಿಎಸ್​​ಗೆ ನೀರು ಹರಿಸುವ ನೆಪದಲ್ಲಿ ತೆಲಂಗಾಣಕ್ಕೆ ನೀರು ಹರಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ತೆಲಂಗಾಣಕ್ಕೆ ನೀರು ಬಿಡಲಾಗುತ್ತಿದೆ. ಡ್ಯಾಂನಲ್ಲಿ ನೀರು ಇಲ್ಲವೆಂದು ರೈತರ ಬೆಳೆಗೆ ನೀರು ಹರಿಸದ ಸರ್ಕಾರ ಈಗ ತೆಲಂಗಾಣಕ್ಕೆ ನೀರು ಬಿಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಡ್ಯಾಂ ನೀರು ಬಿಡುಗಡೆ ಮಾಡುವಂತೆ ರೈತರು ಸಾಕಷ್ಟು ಪ್ರತಿಭಟನೆಯನ್ನೂ ನಡೆಸಿದ್ದರು. ಆದರೆ, ನೀರಿನ ಕೊರತೆ ಇದೆ ಎಂಬ ನೆಪ ಹೇಳಿದ್ದ ಸರ್ಕಾರ ರೈತರಿಗೆ ನೀರು ಬಿಟ್ಟಿರಲಿಲ್ಲ. ಇದೀಗ ಕೊರತೆ ಇದ್ದರೂ ತೆಲಂಗಾಣಕ್ಕೆ ನೀರು ಹರಿಸುತ್ತಿದೆ ಎಂದು ಹೇಳಲಾಗಿದೆ.

ಬಸವಸಾಗರ ಡ್ಯಾಂ ಸಂಗ್ರಹ ಸಾಮರ್ಥ್ಯ

ಶಕ್ತಿ‌ ನಗರದಲ್ಲಿರುವ ಆರ್​​ಟಿಪಿಎಸ್ ವಿದ್ಯುತ್ ಸ್ಥಾವರಕ್ಕೆ ಎಂಬ ನೆಪದಲ್ಲಿ ಮೇ 12 ರ ರಾತ್ರಿಯಿಂದ ಇಲ್ಲಿವರಗೆ 1.25 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 14 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ.

ಯಾದಗಿರಿ ಹಾಗೂ ರಾಯಚೂರು ಗಡಿಭಾಗದ ಗುರ್ಜಾಪುರನಲ್ಲಿ ಆರ್​​​ಟಿಪಿಎಸ್​​​ಗೆ ನೀರು ಒದಗಿಸಲು ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ. ಈ ಬ್ಯಾರೇಜ್​​​ನಿಂದ ಹೇರಳವಾಗಿ ನೀರು ತೆಲಂಗಾಣ ಪಾಲಾಗುತ್ತಿದೆ.

ಇದನ್ನೂ ಓದಿ: ಮೇ 15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ತೆಲಂಗಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿರುವ ಕಾರಣ ಜುರಾಲಾ ಜಲಾಶಯಕ್ಕೆ ನೀರು ಹರಿಸಿತಾ ರಾಜ್ಯ ಸರ್ಕಾರ ಎಂಬ ಅನುಮಾನ ಈಗ ಬಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?