ಬಸವಸಾಗರ ಜಲಾಶಯದ ನೀರು ತೆಲಂಗಾಣ ಪಾಲು: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ಸರ್ಕಾರದಿಂದ ಮತ್ತೊಂದು ಯಡವಟ್ಟು

Basava Sagar Reservoir: ಕರ್ನಾಟಕದಲ್ಲಿ ಬರದ ನಡುವೆಯೂ ಕಾವೇರಿ ನೀರು ತಮಿಳುನಾಡಿಗೆ ಹರಿಸಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ. ಎಐತರ ಬೆಳೆಗೆ ನೀರಿಲ್ಲ ಎಂದು ಹೇಳಿದ್ದ ಸರ್ಕಾರ ಇದೀಗ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ತೆಲಂಗಾಣಕ್ಕೆ ನೀರು ಬಿಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಸವಸಾಗರ ಜಲಾಶಯದ ನೀರು ತೆಲಂಗಾಣ ಪಾಲು: ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ಸರ್ಕಾರದಿಂದ ಮತ್ತೊಂದು ಯಡವಟ್ಟು
ಬಸವಸಾಗರ ಡ್ಯಾಂ
Follow us
| Updated By: ಗಣಪತಿ ಶರ್ಮ

Updated on: May 15, 2024 | 2:22 PM

ಯಾದಗಿರಿ, ಮೇ 15: ರಾಜ್ಯದಲ್ಲಿ ಭೀಕರ ಬರಗಾಲವಿದ್ದ ಸಂದರ್ಭದಲ್ಲಿಯೂ ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ಜನತೆಯ ಹಾಗೂ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಸರ್ಕಾರ (Congress Government) ಇದೀಗ ಮತ್ತೆ ಅಂಥದ್ದೇ ಯಡವಟ್ಟು ಮಾಡಿಕೊಂಡಿದೆ. ಯಾದಗಿರಿ (Yadgir) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂನಿಂದ (Basava Sagar Reservoir) ಕೃಷ್ಣಾ ನದಿಯ (Krishna River) ಮೂಲಕ ತೆಲಂಗಾಣಕ್ಕೆ ನೀರು ಹರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಆರ್​ಟಿಪಿಎಸ್​​ಗೆ ನೀರು ಹರಿಸುವ ನೆಪದಲ್ಲಿ ತೆಲಂಗಾಣಕ್ಕೆ ನೀರು ಹರಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ತೆಲಂಗಾಣಕ್ಕೆ ನೀರು ಬಿಡಲಾಗುತ್ತಿದೆ. ಡ್ಯಾಂನಲ್ಲಿ ನೀರು ಇಲ್ಲವೆಂದು ರೈತರ ಬೆಳೆಗೆ ನೀರು ಹರಿಸದ ಸರ್ಕಾರ ಈಗ ತೆಲಂಗಾಣಕ್ಕೆ ನೀರು ಬಿಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಡ್ಯಾಂ ನೀರು ಬಿಡುಗಡೆ ಮಾಡುವಂತೆ ರೈತರು ಸಾಕಷ್ಟು ಪ್ರತಿಭಟನೆಯನ್ನೂ ನಡೆಸಿದ್ದರು. ಆದರೆ, ನೀರಿನ ಕೊರತೆ ಇದೆ ಎಂಬ ನೆಪ ಹೇಳಿದ್ದ ಸರ್ಕಾರ ರೈತರಿಗೆ ನೀರು ಬಿಟ್ಟಿರಲಿಲ್ಲ. ಇದೀಗ ಕೊರತೆ ಇದ್ದರೂ ತೆಲಂಗಾಣಕ್ಕೆ ನೀರು ಹರಿಸುತ್ತಿದೆ ಎಂದು ಹೇಳಲಾಗಿದೆ.

ಬಸವಸಾಗರ ಡ್ಯಾಂ ಸಂಗ್ರಹ ಸಾಮರ್ಥ್ಯ

ಶಕ್ತಿ‌ ನಗರದಲ್ಲಿರುವ ಆರ್​​ಟಿಪಿಎಸ್ ವಿದ್ಯುತ್ ಸ್ಥಾವರಕ್ಕೆ ಎಂಬ ನೆಪದಲ್ಲಿ ಮೇ 12 ರ ರಾತ್ರಿಯಿಂದ ಇಲ್ಲಿವರಗೆ 1.25 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 14 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ.

ಯಾದಗಿರಿ ಹಾಗೂ ರಾಯಚೂರು ಗಡಿಭಾಗದ ಗುರ್ಜಾಪುರನಲ್ಲಿ ಆರ್​​​ಟಿಪಿಎಸ್​​​ಗೆ ನೀರು ಒದಗಿಸಲು ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ. ಈ ಬ್ಯಾರೇಜ್​​​ನಿಂದ ಹೇರಳವಾಗಿ ನೀರು ತೆಲಂಗಾಣ ಪಾಲಾಗುತ್ತಿದೆ.

ಇದನ್ನೂ ಓದಿ: ಮೇ 15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ತೆಲಂಗಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿರುವ ಕಾರಣ ಜುರಾಲಾ ಜಲಾಶಯಕ್ಕೆ ನೀರು ಹರಿಸಿತಾ ರಾಜ್ಯ ಸರ್ಕಾರ ಎಂಬ ಅನುಮಾನ ಈಗ ಬಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್