AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಪರೀಕ್ಷೆ ಅಕ್ರಮ: ಮತ್ತೊಂದು ವಾಟ್ಸ್​ಆ್ಯಪ್ ಚಾಟ್ ಬಯಲು, ಕೋಡ್​ವರ್ಡ್ ಹೇಗಿದೆ ಗೊತ್ತಾ?

ಯಾದಗಿರಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಮತ್ತೊಂದು ವಾಟ್ಸಪ್ ಚಾಟ್ ಬಯಲಾಗಿದೆ. ಇನ್ನೊಂದೆಡೆ, ಕಲಬುರಗಿಯಲ್ಲೂ ನಡೆದ ಈ ಪರೀಕ್ಷಾ ಅಕ್ರಮದ ಕಿಂಗ್​ಪಿನ್​ ಆರ್​ಡಿ ಪಾಟೀಲ್​ ಆನ್‌ಲೈನ್‌ ಗೇಮ್​ಗಳಲ್ಲಿ ಹಣ ಹೂಡಿಕೆ ಮಾಡಿ ಆಟ ಆಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಕೆಇಎ ಪರೀಕ್ಷೆ ಅಕ್ರಮ: ಮತ್ತೊಂದು ವಾಟ್ಸ್​ಆ್ಯಪ್ ಚಾಟ್ ಬಯಲು, ಕೋಡ್​ವರ್ಡ್ ಹೇಗಿದೆ ಗೊತ್ತಾ?
ವಾಟ್ಸ್​ಆ್ಯಪ್​ನಿಂದ ಎಫ್​ಡಿಎ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗೆ ಕೋಡ್​​ವರ್ಡ್ ಮೂಲಕ ಉತ್ತರಗಳನ್ನು ಕಳುಹಿಸಿದ ಆರೋಪಿ
Follow us
ಅಮೀನ್​ ಸಾಬ್​
| Updated By: Rakesh Nayak Manchi

Updated on: Nov 18, 2023 | 10:44 AM

ಯಾದಗಿರಿ, ನ.18: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಮತ್ತೊಂದು ವಾಟ್ಸಪ್ ಚಾಟ್ ಬಯಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ಕೋಡ್​ವರ್ಡ್ ಮೂಲಕ ಪ್ರಶ್ನೆಗಳಿಗೆ ಉತ್ತರಗಳನ್ನು ಕಳುಹಿಸಿದ ಚಾಟ್​​ ಪ್ರತಿ ಟಿವಿ9ಗೆ ಲಭ್ಯವಾಗಿದೆ.

ಅಕ್ರಮದ ಪ್ರಮುಖ ಆರೋಪಿ ಸಿದ್ದರಾಮ ಅಲಿಯಸ್ ಪುಟ್ಟು ಮೊಬೈಲ್​ನಿಂದ ಬಂದಿದ್ದ ಉತ್ತರಗಳ ಪ್ರತಿ ಇದಾಗಿದೆ. ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲೇ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆಯಲ್ಲಿದ್ದ ಅಕ್ಷರಗಳ ಆಧಾರದಲ್ಲಿ ಉತ್ತರಗಳು ಬಂದಿವೆ.

ಇದನ್ನೂ ಓದಿ: ಬಗೆದಷ್ಟು ಬಯಲಾಗುತ್ತಿದೆ ಆರ್​ಡಿ ಪಾಟೀಲ್ ಅಕ್ರಮ; ಕೆಇಎ ಪರೀಕ್ಷೆಯ ಮಾಸ್ಟರ್ ಪ್ಲಾನ್ ಹೇಗಿತ್ತು ಗೊತ್ತಾ?

ಏಳು ಅಕ್ಷರದ ಉತ್ತರವಿದ್ದರೆ ಏಳು ಅಂತ ಬರೆದು ವಾಟ್ಸ್​ಆ್ಯಪ್​ ಮೂಲಕ ಕಳುಹಿಸಲಾಗಿದೆ. ಸಾಮಾನ್ಯ ಜ್ಞಾನ, ಕನ್ನಡ ಹಾಗೂ ಕಂಪ್ಯೂಟರ್ ಮೂರು ವಿಷಯಗಳ ಉತ್ತರಗಳನ್ನು ಈ ಕೋಡ್​​ವರ್ಡ್ ಮೂಲಕ ರವಾನೆ ಮಾಡಿದ್ದಾರೆ. ಈ ಆರೋಪಿ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಗ್ಯಾಂಗ್​ಗೆ ಸೇರಿದವ ಎನ್ನಲಾಗುತ್ತಿದೆ.

ಆನ್​ಲೈನ್​ನಲ್ಲಿ ಗೇಮ್ ಆಡುವ ಆರ್​ಡಿ ಪಾಟೀಲ್

ಕೆಇಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್​ಗೆ ಆನ್‌ಲೈನ್‌ ಗೇಮ್​ಗಳಲ್ಲಿ ಹಣ ಹೂಡಿಕೆ ಮಾಡಿ ಆಟ ಆಡುವ ಚಾಳಿ ಹೊಂದಿದ್ದನು ಎಂದು ತಿಳಿದುಬಂದಿದೆ. ಆನ್ ಲೈನ್​ನಲ್ಲಿ ಕ್ಯಾಸಿನೊದಲ್ಲಿ ಆರ್ ಡಿ ಪಾಟೀಲ್ ಗೇಮ್ ಆಡುತ್ತಿದ್ದನು. MPC 91 ನಲ್ಲಿ ನಿತ್ಯವು ಆಟವಾಡುತ್ತಿದ್ದ.

ಆನ್‌ಲೈನ್ ಗೇಮ್‌ಗಾಗಿ ಮೂರು ಮೊಬೈಲ್ ನಂಬರ್ ಅನ್ನು ಬಳಕೆ ಮಾಡಿಕೊಳ್ಳುತ್ತಿದ್ದನು. ಕೆಲವೇ ತಿಂಗಳಲ್ಲಿ 30 ಲಕ್ಷಕ್ಕೂ ಅಧಿಕ ಹಣವನ್ನು ಹೂಡಿಕೆ ಮಾಡಿದ್ದನು. ಆ ಮೂಲಕ ಮೂರು ಅಕೌಂಟ್​ಗಳಲ್ಲಿನ ಅಕ್ರಮವಾಗಿ ಬಂದ ಹಣವನ್ನು ಬೇಕಾಬಿಟ್ಟಿಯಾಗಿ ಖರ್ಚು ಮಾಡುತ್ತಿದ್ದನು. ಈ ಎಲ್ಲಾ ವಿಚಾರಗಳು ಅಪಾರ್ಟ್ಮೆಂಟ್‌ನಲ್ಲಿ‌ ಸಿಕ್ಕ ಮೊಬೈಲ್‌ ಪರಿಶೀಲನೆ ವೇಳೆ ಬಯಲಿಗೆ ಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?