AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಪರೀಕ್ಷಾ ಅಕ್ರಮ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ, ಸರ್ಕಾರ ಎಂಬ ಹೆಸರಿನ ಮೇಲೆ ಅಭ್ಯರ್ಥಿಗಳಿಗೆ ಫೋನ್ ಕರೆ

ಯಾದಗಿರಿ ಜಿಲ್ಲೆಯ ಐದು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿತ್ತು. ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಹೋಗಿ 11 ಜನ ಬಂಧನವಾಗಿದ್ದರು. ಹೊರಗಿದ್ದು ಪರೀಕ್ಷೆ ಬರೆಯುವವರಿಗೆ ಸಹಾಯ ಮಾಡಲು ಹೋಗಿ ಐದು ಜನ ಅರೆಸ್ಟ್ ಆಗಿದ್ದರು. 16 ಜನರನ್ನ ಬಂಧಿಸಿ ವಿಚಾರಣೆ ನಡೆಸುತ್ತಿರುವ ವೇಳೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

ಕೆಇಎ ಪರೀಕ್ಷಾ ಅಕ್ರಮ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ, ಸರ್ಕಾರ ಎಂಬ ಹೆಸರಿನ ಮೇಲೆ ಅಭ್ಯರ್ಥಿಗಳಿಗೆ ಫೋನ್ ಕರೆ
ಸರ್ಕಾರ ಎಂಬ ಹೆಸರಿನ ಆಡಿಯೋ ಕಾಲ್​
ಅಮೀನ್​ ಸಾಬ್​
| Updated By: ವಿವೇಕ ಬಿರಾದಾರ|

Updated on: Nov 06, 2023 | 10:49 AM

Share

ಯಾದಗಿರಿ ನ.06: ಯಾದಗಿರಿಯಲ್ಲಿ (Yadgiri) ಕೆಇಎ ನೇಮಕಾತಿ ಪರೀಕ್ಷಾ (KEA Exam) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆ ವೇಳೆ ಪೊಲೀಸರಿಗೆ ಮತ್ತೊಂದು ಸ್ಫೋಟಕ ಮಾಹಿತಿ ದೊರೆತಿದೆ. ಪ್ರಕರಣದ 16 ಜನ ಆರೋಪಿಗಳಲ್ಲಿ ಓರ್ವನು, “ಸರ್ಕಾರ” ಎಂದು ನಂಬರ್​ ಸೇವ್​ ಮಾಡಿಕೊಂಡಿದ್ದಾನೆ. ಸರ್ಕಾರ ಎಂಬ ನಂಬರ್​​ನಿಂದ ಪರೀಕ್ಷೆ ನಡೆಯುವ ಒಂದು ದಿನ ಮೊದಲು ಆರೋಪಿಗೆ ವಾಟ್ಸಪ್ ಕಾಲ್ ಬಂದಿದೆ.

ಈ ಸರ್ಕಾರ ಎಂಬ ಹೆಸರಿನ ವ್ಯಕ್ತಿಯೇ ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಎಂಬ ಶೆಂಕೆ ವ್ಯಕ್ತವಾಗಿದೆ. ಸರ್ಕಾರ ಎಂಬ ಹೆಸರಿನ ವ್ಯಕ್ತಿ ಆಡಿಯೋ ಕಾಲ್ ಮಾಡಿ ಅಕ್ರಮದ ಬಗ್ಗೆ ಮಾಹಿತಿ ನೀಡುತ್ತಿದ್ದನು. ಈ ಸರ್ಕಾರ ಎಂಬ ಹೆಸರಿನ ನಂಬರ್ ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ಮೂಲದ್ದು ಎಂದು ಪೊಲೀಸ್​ ಮೂಲಗಳಿಂದ ಟಿವಿ9 ಡಿಟಿಜಿಟಲ್​​ಗೆ ತಿಳಿದುಬಂದಿದೆ.

ಯಾದಗಿರಿ ಜಿಲ್ಲೆಯ ಐದು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿತ್ತು. ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಹೋಗಿ 11 ಜನ ಬಂಧನವಾಗಿದ್ದರು. ಹೊರಗಿದ್ದು ಪರೀಕ್ಷೆ ಬರೆಯುವವರಿಗೆ ಸಹಾಯ ಮಾಡಲು ಹೋಗಿ ಐದು ಜನ ಅರೆಸ್ಟ್ ಆಗಿದ್ದರು. 16 ಜನರನ್ನ ಬಂಧಿಸಿ ವಿಚಾರಣೆ ನಡೆಸುತ್ತಿರುವ ವೇಳೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: KEA exam scam: ಬಗೆದಷ್ಟೂ ಬಯಲಾಗುತ್ತಲೇ ಇದೆ ಕೆಇಎ ಪರೀಕ್ಷಾ ಅಕ್ರಮಗಳು! ಲೇಟೆಸ್ಟ್ ಇದು

ಕಿಂಗ್‌ಪಿನ್ ಆರ್.ಡಿ ಪಾಟೀಲ್ ಜೊತೆ ಡಿಲ್ ಮಾಡಿಕೊಂಡಿದ್ದ ಪೋಷಕರ ಪೀಕಲಾಟ

ಇನ್ನು ಪ್ರಕರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಜೊತೆ ಡಿಲ್ ಮಾಡಿಕೊಂಡಿದ್ದ ಪೋಷಕರಿಗೆ ಪೀಕಲಾಟ ಶುರುವಾಗಿದೆ. ಅತ್ತ ಮಕ್ಕಳಿಗೆ ನೌಕರಿಯು ಇಲ್ಲದೇ, ಹಣವೂ ಇಲ್ಲದೇ ಪೋಷಕರು ಅಲೆದಾಡುತ್ತಿದ್ದಾರೆ. ಹಣ ವಾಪಾಸು ಕೊಡುವಂತೆ ಅಭ್ಯರ್ಥಿಗಳ ಪೋಷಕರು ಬೀದರ್‌ನ ಹುಮನಬಾದ್ ರಸ್ತೆಯಲ್ಲಿ ಆರ್‌ಡಿ ಪಾಟೀಲ್​​ ಕಾರನ್ನು ಆರ್‌ಡಿ ಪಾಟೀಲ್‌ಗೆ ಅಡ್ಡಗಟ್ಟಿದ್ದರು.

ಐದು ನಿಮಿಷದಲ್ಲಿ ಹಣ ವಾಪಾಸು ಮಾಡುವೆಯೆಂದು ಆರ್.ಡಿ. ಪಾಟೀಲ್​ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಅಂದು ಅಲ್ಲಿಂದ ಎಸ್ಕೇಪ್ ಆಗಿದ್ದವ, ಇಲ್ಲಿಯವರೆಗೂ ನಾಪತ್ತೆಯಾಗಿದ್ದಾನೆ. ಪೋಷಕರು 25 ರಿಂದ 40 ಲಕ್ಷ ರೂಪಾಯಿವರೆಗೆ ಡಿಲ್ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ