AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಮಹಿಳೆಯ ಮೇಲೆ ಮಹಿಳಾ ಪಿಎಸ್‌ಐ ದರ್ಪ ಪ್ರಕರಣ; ಟಿವಿ9ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಪಿಎಸ್ಐ ವರ್ಗಾವಣೆ

ಟಿವಿ9 ನಲ್ಲಿ ವರದಿ ಪ್ರಸಾರವಾದ ಬೆನ್ನೆಲೆ ಗುರುಮಠಕಲ್‌ ಠಾಣೆ ಪಿಎಸ್‌ಐ ಗಂಗಮ್ಮನನ್ನು ನಾರಾಯಣಪುರ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ರೈತ ಮಹಿಳೆಯ ಮೇಲೆ ಮಹಿಳಾ ಪಿಎಸ್‌ಐ ದರ್ಪ ಪ್ರಕರಣ; ಟಿವಿ9ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಪಿಎಸ್ಐ ವರ್ಗಾವಣೆ
ಪಿಎಸ್ಐ ಗಂಗಮ್ಮ
TV9 Web
| Edited By: |

Updated on:Sep 29, 2021 | 1:46 PM

Share

ಯಾದಗಿರಿ: ರೈತ ಮಹಿಳೆಯ ಮೇಲೆ ಮಹಿಳಾ ಪಿಎಸ್‌ಐ ದರ್ಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟಿವಿ9 ಡಿಜಿಟಲ್​ನಲ್ಲಿ ಸುದ್ದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾದ ಬೆನ್ನೆಲೆ ಗುರುಮಠಕಲ್‌ ಠಾಣೆ ಪಿಎಸ್‌ಐ ಗಂಗಮ್ಮನನ್ನು ಯಾದಗಿರಿ ಜಿಲ್ಲೆಯ ನಾರಾಯಣಪುರ ಠಾಣೆಗೆ ವರ್ಗಾವಣೆ ಮಾಡಿ ಎಸ್​ಪಿ ಡಾ.ವೇದಮೂರ್ತಿ ಆದೇಶ ಹೊರಡಿಸಿದ್ದಾರೆ. ಜನರ ಜತೆ ಶಿಸ್ತಿನಿಂದ ವರ್ತಿಸದ ಕಾರಣ ನೀಡಿ ವರ್ಗಾವಣೆ ಮಾಡಲಾಗಿದ್ದು, ಇಷ್ಟೇ ಅಲ್ಲದೇ ತನಿಖೆ ವೇಳೆ ತಪ್ಪು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್​ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

ರೈತ ಮಹಿಳೆಯ ಮೇಲೆ ಮಹಿಳಾ ಪಿಎಸ್‌ಐ ದರ್ಪ ರೈತ ಮಹಿಳೆಯ ಮೇಲೆ ಮಹಿಳಾ ಪಿಎಸ್‌ಐ ದರ್ಪ ತೋರಿಸಿದ್ದು, ಲೇಡಿ ಪಿಎಸ್‌ಐ ತಳ್ಳಿದ್ದ ಹಿನ್ನೆಲೆ ರೈತ ಮಹಿಳೆ ಗಾಯಗೊಂಡಿದ್ದಾರೆ. ಮಹಿಳೆ ಕೈ, ಬೆನ್ನಿನ ಭಾಗದಲ್ಲಿ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳು ಮಹಿಳೆ ಗುರುಮಿಠಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿ ಜಿಲ್ಲೆ ಗುರುಮಿಠಕಲ್ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಿನ್ನೆ ಪಿಎಸ್‌ಐ ಮಹಿಳೆಯನ್ನು ತಳ್ಳಿದ್ದಾರೆ.

ಶೆಂಗಾ ಬೀಜ ಪಡೆಯಲು ಬಂದಿದ್ದ ಮಹಿಳೆಯನ್ನು ಲೇಡಿ ಪಿಎಸ್ಐ ತಳ್ಳಿದ್ದು, ಮಾರುದ್ದ ಕುರ್ಚಿ ಮುರಿಯುವ ಹಾಗೆ ಹೋಗಿ ಮಹಿಳೆ ಬಿದ್ದಿದ್ದಾಳೆ. ಗುರುಮಠಕಲ್‌ ಠಾಣೆಯ ಪಿಎಸ್ಐ ಗಂಗಮ್ಮ ರೈತ ಮಹಿಳೆ ಮಣೆಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ಹಿಂಗಾರು ಬಿತ್ತನೆಯ ಬೀಜ ಪಡೆಯಲು ಬಂದಿದ್ದ ವೇಳೆ ಸಾಲಾಗಿ ನಿಂತಿಲ್ಲ ಎನ್ನುವ ಕಾರಣಕ್ಕೆ ಜಾಡಿಸಿ ತಳ್ಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಲೇಡಿ ಪಿಎಸ್ಐ ದರ್ಪಕ್ಕೆ ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗಿದೆ.

ಬೇಕೆಂದು ಮಹಿಳೆಯನ್ನು ತಳ್ಳಿಲ್ಲ ಎಂದ ಪಿಎಸ್ಐ ರೈತ ಮಹಿಳೆ ಮೇಲೆ ಮಹಿಳಾ ಪಿಎಸ್ಐ ದರ್ಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾದಗಿರಿ ಎಸ್‌ಪಿ ಡಾ.ವೇದಮೂರ್ತಿ ಪ್ರತಿಕ್ರಿಯೆ ನೀಡಿದ್ದು, ತನಿಖೆ ನಡೆಯುತ್ತಿದೆ. ಪಿಎಸ್‌ಐ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ. ತನಿಖೆ ವೇಳೆ ಬೇಕೆಂದು ಮಹಿಳೆಯನ್ನು ತಳ್ಳಿಲ್ಲ ಎಂದು ಮಹಿಳಾ ಪಿಎಸ್ಐ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ರೈತ ಸಂಪರ್ಕ ಕೇಂದ್ರದ ಬಳಿ ಜನ ಕ್ಯೂನಲ್ಲಿ ನಿಂತಿದ್ದರು. ಈ ವೇಳೆ ಮಹಿಳೆ ಏಕಾಏಕಿ ಮುಂದೆ ನುಗ್ಗಿ ಬಂದಿದ್ದರು. ಇದೇ ಕಾರಣಕ್ಕೆ ಕ್ಯೂನಲ್ಲಿ ಇದ್ದ ಜನ ಗಲಾಟೆ ಮಾಡಿದರು. ಈ ವೇಳೆ ಮಹಿಳೆಯನ್ನು ಹಿಂದಕ್ಕೆ ಹೋಗಲು ಹೇಳಿದರು. ಮಹಿಳೆ ಹೋಗದ ಹಿನ್ನೆಲೆ ಪಿಎಸ್‌ಐ ತಳ್ಳಿದ್ದಾರೆ. ಹೀಗಾಗಿ ಮಹಿಳಾ ಪಿಎಸ್‌ಐಗೆ ಎಚ್ಚರಿಕೆ ನೀಡಿದ್ದೇನೆ ಎಂದು ಯಾದಗಿರಿ ಎಸ್‌ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

ಇದನ್ನೂ ಓದಿ:

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ; ಗೋಣಿಬೀಡು ಠಾಣೆಯ ಪಿಎಸ್​ಐ ಅರ್ಜುನ್​ಗೆ 14 ದಿನಗಳ ನ್ಯಾಯಾಂಗ ಬಂಧನ

ರೈತ ಮಹಿಳೆ‌ ಮೇಲೆ ಲೇಡಿ ಪಿಎಸ್ಐ ದರ್ಪ; ಗುರುಮಿಠಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು

Published On - 1:36 pm, Wed, 29 September 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು