AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಮಹಿಳೆ‌ ಮೇಲೆ ಲೇಡಿ ಪಿಎಸ್ಐ ದರ್ಪ; ಗುರುಮಿಠಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು

ಹಿಂಗಾರು ಬಿತ್ತನೆಯ ಬೀಜ ಪಡೆಯಲು ಬಂದಿದ್ದ ವೇಳೆ ಸಾಲಾಗಿ ನಿಂತಿಲ್ಲ ಎನ್ನುವ ಕಾರಣಕ್ಕೆ ಜಾಡಿಸಿ ತಳ್ಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಲೇಡಿ ಪಿಎಸ್ಐ ದರ್ಪಕ್ಕೆ ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗಿದೆ.

ರೈತ ಮಹಿಳೆ‌ ಮೇಲೆ ಲೇಡಿ ಪಿಎಸ್ಐ ದರ್ಪ; ಗುರುಮಿಠಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಪಿಎಸ್ಐ ಗಂಗಮ್ಮ
TV9 Web
| Updated By: preethi shettigar|

Updated on:Sep 29, 2021 | 10:39 AM

Share

ಯಾದಗಿರಿ: ರೈತ ಮಹಿಳೆಯ ಮೇಲೆ ಮಹಿಳಾ ಪಿಎಸ್‌ಐ ದರ್ಪ ತೋರಿಸಿದ್ದು, ಲೇಡಿ ಪಿಎಸ್‌ಐ ತಳ್ಳಿದ್ದ ಹಿನ್ನೆಲೆ ರೈತ ಮಹಿಳೆ ಗಾಯಗೊಂಡಿದ್ದಾರೆ. ಮಹಿಳೆ ಕೈ, ಬೆನ್ನಿನ ಭಾಗದಲ್ಲಿ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳು ಮಹಿಳೆ ಗುರುಮಿಠಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿ ಜಿಲ್ಲೆ ಗುರುಮಿಠಕಲ್ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಿನ್ನೆ ಪಿಎಸ್‌ಐ ಮಹಿಳೆಯನ್ನು ತಳ್ಳಿದ್ದಾರೆ.

ಶೆಂಗಾ ಬೀಜ ಪಡೆಯಲು ಬಂದಿದ್ದ ಮಹಿಳೆಯನ್ನು ಲೇಡಿ ಪಿಎಸ್ಐ ತಳ್ಳಿದ್ದು, ಮಾರುದ್ದ ಕುರ್ಚಿ ಮುರಿಯುವ ಹಾಗೆ ಹೋಗಿ ಮಹಿಳೆ ಬಿದ್ದಿದ್ದಾಳೆ. ಗುರುಮಠಕಲ್‌ ಠಾಣೆಯ ಪಿಎಸ್ಐ ಗಂಗಮ್ಮ ರೈತ ಮಹಿಳೆ ಮಣೆಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ಹಿಂಗಾರು ಬಿತ್ತನೆಯ ಬೀಜ ಪಡೆಯಲು ಬಂದಿದ್ದ ವೇಳೆ ಸಾಲಾಗಿ ನಿಂತಿಲ್ಲ ಎನ್ನುವ ಕಾರಣಕ್ಕೆ ಜಾಡಿಸಿ ತಳ್ಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಲೇಡಿ ಪಿಎಸ್ಐ ದರ್ಪಕ್ಕೆ ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗಿದೆ.

ಬೇಕೆಂದು ಮಹಿಳೆಯನ್ನು ತಳ್ಳಿಲ್ಲ ಎಂದ ಪಿಎಸ್ಐ ರೈತ ಮಹಿಳೆ ಮೇಲೆ ಮಹಿಳಾ ಪಿಎಸ್ಐ ದರ್ಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾದಗಿರಿ ಎಸ್‌ಪಿ ಡಾ.ವೇದಮೂರ್ತಿ ಪ್ರತಿಕ್ರಿಯೆ ನೀಡಿದ್ದು, ತನಿಖೆ ನಡೆಯುತ್ತಿದೆ. ಪಿಎಸ್‌ಐ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ. ತನಿಖೆ ವೇಳೆ ಬೇಕೆಂದು ಮಹಿಳೆಯನ್ನು ತಳ್ಳಿಲ್ಲ ಎಂದು ಮಹಿಳಾ ಪಿಎಸ್ಐ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ರೈತ ಸಂಪರ್ಕ ಕೇಂದ್ರದ ಬಳಿ ಜನ ಕ್ಯೂನಲ್ಲಿ ನಿಂತಿದ್ದರು. ಈ ವೇಳೆ ಮಹಿಳೆ ಏಕಾಏಕಿ ಮುಂದೆ ನುಗ್ಗಿ ಬಂದಿದ್ದರು. ಇದೇ ಕಾರಣಕ್ಕೆ ಕ್ಯೂನಲ್ಲಿ ಇದ್ದ ಜನ ಗಲಾಟೆ ಮಾಡಿದರು. ಈ ವೇಳೆ ಮಹಿಳೆಯನ್ನು ಹಿಂದಕ್ಕೆ ಹೋಗಲು ಹೇಳಿದರು. ಮಹಿಳೆ ಹೋಗದ ಹಿನ್ನೆಲೆ ಪಿಎಸ್‌ಐ ತಳ್ಳಿದ್ದಾರೆ. ಹೀಗಾಗಿ ಮಹಿಳಾ ಪಿಎಸ್‌ಐಗೆ ಎಚ್ಚರಿಕೆ ನೀಡಿದ್ದೇನೆ ಎಂದು ಯಾದಗಿರಿ ಎಸ್‌ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

ಇದನ್ನೂ ಓದಿ: KGF: ಕೆಜಿಎಫ್ ಪೊಲೀಸ್​ ವರಿಷ್ಠಾಧಿಕಾರಿ ಗನ್ ಮ್ಯಾನ್ ಮೇಲೆ ಹಲ್ಲೆ; ಐವರು ದುಷ್ಕರ್ಮಿಗಳು ಅಂದರ್​ ಆದರು

ಮೈಸೂರು: ಪಾರ್ಕ್​ನಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಬುದ್ಧಿ ಹೇಳಿದ ಕಾನ್ಸ್​ಟೇಬಲ್​ ಮೇಲೆ ಹಲ್ಲೆ

Published On - 9:32 am, Wed, 29 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ