AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ

ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ.

Crime News: ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ
ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ
TV9 Web
| Edited By: ಸಾಧು ಶ್ರೀನಾಥ್​|

Updated on:Jun 04, 2022 | 6:39 PM

Share

ಯಾದಗಿರಿ: ಯಾದಗಿರಿ ನಗರದ ಹೊರ ಭಾಗದ ಮೆಡಿಕಲ್ ಕಾಲೇಜು ರಸ್ತೆಯಲ್ಲಿ ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬೈ ಮೂಲದ ಚಾಲಕ ಮುರಳೀಧರ್ ಮೃತಪಟ್ಟ ದುರ್ದೈವಿ. ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲಾರಿ ಚಾಲಕ ಬಲಿಯಾದ ಎಂದು ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಯುವ ಆಟೋ ಚಾಲಕನ ಹತ್ಯೆ:

ವಿಜಯಪುರ ನಗರದ ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಆಟೋ ಚಾಲಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೈಲ್ವೆ ಸ್ಟೇಷನ್ ನಿವಾಸಿ ವೀರೇಶ್ ಬಂಥನಾಳ(22) ಬರ್ಬರ ಹತ್ಯೆಗೀಡಾದವ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅರಸೀಕೆರೆ ಮಹಿಳಾ ತಹಶೀಲ್ದಾರ್ ನೇತೃತ್ವದಲ್ಲಿ ರಾತ್ರಿ ವೇಳೆ ದಾಳಿ, ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ ಹಚ್ಚಲಾಗಿದೆ. ಅರಸೀಕೆರೆ ತಹಶೀಲ್ದಾರ್​​​ ವಿದ್ಯಾ ನೇತೃತ್ವದಲ್ಲಿ ಅರಸೀಕೆರೆ ತಾಲೂಕಿನ ಹಲವು ಗೋಡೌನ್​ಗಳ ಮೇಲೆ ನಿನ್ನೆ ರಾತ್ರಿ ದಾಳಿ ನಡೆಸಲಾಗಿದ್ದು, ಒಟ್ಟು 50 ಮೆಟ್ರಿಕ್ ಟನ್​​​ಗಿಂತಲೂ ಅಧಿಕ ಪ್ರಮಾಣದ ಅಕ್ಕಿ ಜಪ್ತಿ ಮಾಡಲಾಗಿದೆ. ಡಿ. ಎಂ. ಕುರ್ಕೆ ಗ್ರಾಮದ ಹನುಮಂತಪ್ಪ ಎಂಬುವವರ ಗೋಡೌನ್​ ಕೋಳಿ ಫಾರಂನಲ್ಲಿ ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ಜಪ್ತಿಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:31 pm, Sat, 4 June 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ