AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ

ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ.

Crime News: ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ
ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಸಾವು, ಗೋಳಗುಮ್ಮಟದ ಎದುರು ಯುವ ಆಟೋ ಚಾಲಕನ ಹತ್ಯೆ
TV9 Web
| Edited By: |

Updated on:Jun 04, 2022 | 6:39 PM

Share

ಯಾದಗಿರಿ: ಯಾದಗಿರಿ ನಗರದ ಹೊರ ಭಾಗದ ಮೆಡಿಕಲ್ ಕಾಲೇಜು ರಸ್ತೆಯಲ್ಲಿ ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬೈ ಮೂಲದ ಚಾಲಕ ಮುರಳೀಧರ್ ಮೃತಪಟ್ಟ ದುರ್ದೈವಿ. ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಸಾಮಾಗ್ರಿ ತಂದಿದ್ದ ಚಾಲಕ ಅವಘಡಕ್ಕೆ ತುತ್ತಾಗಿದ್ದಾನೆ. ಅನ್ ಲೋಡ್ ಮಾಡಿ, ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲಾರಿ ಚಾಲಕ ಬಲಿಯಾದ ಎಂದು ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಯುವ ಆಟೋ ಚಾಲಕನ ಹತ್ಯೆ:

ವಿಜಯಪುರ ನಗರದ ಗೋಳಗುಮ್ಮಟ ಸ್ಮಾರಕದ ಎದುರು ಹಾಡಹಗಲೇ ಆಟೋ ಚಾಲಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೈಲ್ವೆ ಸ್ಟೇಷನ್ ನಿವಾಸಿ ವೀರೇಶ್ ಬಂಥನಾಳ(22) ಬರ್ಬರ ಹತ್ಯೆಗೀಡಾದವ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅರಸೀಕೆರೆ ಮಹಿಳಾ ತಹಶೀಲ್ದಾರ್ ನೇತೃತ್ವದಲ್ಲಿ ರಾತ್ರಿ ವೇಳೆ ದಾಳಿ, ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ ಹಚ್ಚಲಾಗಿದೆ. ಅರಸೀಕೆರೆ ತಹಶೀಲ್ದಾರ್​​​ ವಿದ್ಯಾ ನೇತೃತ್ವದಲ್ಲಿ ಅರಸೀಕೆರೆ ತಾಲೂಕಿನ ಹಲವು ಗೋಡೌನ್​ಗಳ ಮೇಲೆ ನಿನ್ನೆ ರಾತ್ರಿ ದಾಳಿ ನಡೆಸಲಾಗಿದ್ದು, ಒಟ್ಟು 50 ಮೆಟ್ರಿಕ್ ಟನ್​​​ಗಿಂತಲೂ ಅಧಿಕ ಪ್ರಮಾಣದ ಅಕ್ಕಿ ಜಪ್ತಿ ಮಾಡಲಾಗಿದೆ. ಡಿ. ಎಂ. ಕುರ್ಕೆ ಗ್ರಾಮದ ಹನುಮಂತಪ್ಪ ಎಂಬುವವರ ಗೋಡೌನ್​ ಕೋಳಿ ಫಾರಂನಲ್ಲಿ ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ಜಪ್ತಿಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:31 pm, Sat, 4 June 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ