AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಪ್ರಾಣ ಬಿಟ್ಟೇವು, ದೂರವಾಗಲಾರೆವು ಎಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣು

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಾದಗಿರಿ: ಪ್ರಾಣ ಬಿಟ್ಟೇವು, ದೂರವಾಗಲಾರೆವು ಎಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣು
ಪ್ರೇಮಿಗಳು (ಎಡಚಿತ್ರ) ಪೊಲೀಸ್​ ಠಾಣೆ (ಬಲಚಿತ್ರ)
TV9 Web
| Updated By: ವಿವೇಕ ಬಿರಾದಾರ|

Updated on:Feb 18, 2023 | 1:03 PM

Share

ಯಾದಗಿರಿ: ಯೌವನದಲ್ಲಿ ಮೂಡಿದ ಮೊದಲ ಪ್ರೀತಿ ಎಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ. ಮೊದಲ ಪ್ರೀತಿ ನಿಜವಾದ ಪ್ರೀತಿಯಾಗಿದ್ದರೇ ಎಂದಿಗೂ ದೂರವಾಗುವುದಿಲ್ಲ, ದೂರ ಮಾಡಲು ಪ್ರಯತ್ನಪಟ್ಟರೇ ಪ್ರಾಣ ಬಿಡುತ್ತಾರೆ ಹೊರತು, ಪ್ರೀತಿಸಿದ ಪ್ರಿಯತಮೆ, ಪ್ರಿಯಕರನನ್ನು ಎಂದಿಗೂ ದೂರ ಮಾಡಲು ಆಗುವುದಿಲ್ಲ. ಅದೆಷ್ಟೋ ಪ್ರೇಮಿಗಳು (Lovers) ತಮ್ಮನ್ನು, ಒಂದಾಗಲು ಸಮಾಜ, ಕುಟುಂಬ ಬಿಡಲಿಲ್ಲವೆಂದು ಪ್ರಾಣ ಕಳೆದುಕೊಂಡಿದ್ದನ್ನು ಇತಿಹಾಸ ಪುಟಗಳಲ್ಲಿ ಓದಿದ್ದೇವೆ, ನಮ್ಮ ಸುತ್ತಮುತ್ತ ಅನೇಕ ಘಟನೆಗಳನ್ನು ಕಂಡಿದ್ದೇವೆ ಹಾಗೂ ಕೇಳಿದ್ದೇವೆ. ಇದರಂತೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುವರ್ಣ(20) ಹಾಗೂ ಈಶಪ್ಪ(22) ಮೃತ ದುರ್ದೈವಿಗಳು.

ಈಶಪ್ಪ ಮತ್ತು ಸುವರ್ಣ ಕಳೆದ ಐದಾರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. 2 ವರ್ಷದ ಹಿಂದೆ ಬೇರೆ ಯುವಕನ ಜೊತೆ ಸುವರ್ಣಳ ವಿವಾಹವಾಗಿತ್ತು. ಸುವರ್ಣ ಬೆಂಗಳೂರು ನಗರದಲ್ಲಿ ಪತಿ ಜೊತೆ ವಾಸವಿದ್ದಳು. ನಿನ್ನೆ (ಫೆ.17) ಪತಿಗೆ ತಿಳಿಸದೇ ಹುರುಸಗುಂಡಗಿ ಗ್ರಾಮಕ್ಕೆ ಬಂದಿದ್ದಳು. ಇಂದು (ಫೆ.18) ಅದೇನಾಯಿತು ಏನೋ ಬೆಳಿಗ್ಗೆ ವಿಷ ಸೇವಿಸಿ ಸುವರ್ಣ ಮತ್ತು ಈಶಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Sat, 18 February 23

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​