AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಶೀಲ ಶಂಕಿಸಿ 2 ಮಕ್ಕಳ ಕೊಂದ ಪಾಪಿ: ಬದುಕುಳಿದ ಬಾಲಕನ ಸ್ಥಿತಿ ಗಂಭೀರ

ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕುಡುಗೋಲಿನಿಂದ ಕೊಚ್ಚಿ ತಂದೆಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ತಲೆಮರೆಸಿಕೊಂಡಿರೋ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.

ಪತ್ನಿ ಶೀಲ ಶಂಕಿಸಿ 2 ಮಕ್ಕಳ ಕೊಂದ ಪಾಪಿ: ಬದುಕುಳಿದ ಬಾಲಕನ ಸ್ಥಿತಿ ಗಂಭೀರ
ಪತ್ನಿ ಶೀಲ ಶಂಕಿಸಿ 2 ಮಕ್ಕಳ ಕೊಂದ ಪಾಪಿ
ಅಮೀನ್​ ಸಾಬ್​
| Edited By: |

Updated on:Sep 26, 2025 | 2:44 PM

Share

ಯಾದಗಿರಿ, ಸೆಪ್ಟೆಂಬರ್​ 26: ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕುಡುಗೋಲಿನಿಂದ ಕೊಚ್ಚಿ ತಂದೆಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ (Yadgir) ತಾಲೂಕಿನ ದುಗನೂರು ಕ್ಯಾಂಪ್ ನಲ್ಲಿ ನಡೆದಿದೆ. ಭಾರ್ಗವ್ (3) ಮತ್ತು ಸಾನ್ವಿ (5) ಮೃತ ಮಕ್ಕಳಾಗಿದ್ದು, ಮತ್ತೋರ್ವ ಬಾಲಕ ಹೇಮಂತ್ (8) ಸ್ಥಿತಿ ಚಿಂತಾಜನಕವಾಗಿದೆ. ಘಟನೆ ಬಳಿಕ ಆರೋಪಿ ಶರಣಪ್ಪ ಪರಾರಿಯಾಗಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.

ರಾತ್ರಿ ಕುಟುಂಬದ ಜೊತೆ ಕೂತು ಒಟ್ಟಿಗೆ ಊಟ ಮಾಡಿದ್ದ ಶರಣಪ್ಪ, ಪತ್ನಿ ಮತ್ತು ಮಕ್ಕಳ ಜೊತೆಗೇ ಮಲಗಿದ್ದ. ಬೆಳಗ್ಗೆ ಪತ್ನಿ ಜಯಮ್ಮ ಮತ್ತು ಆತನ ತಾಯಿ ಭೀಮವ್ವ ಬಹಿರ್ದೆಸೆಗೆ ಹೋದ ವೇಳೆ ಮನೆಯಲ್ಲಿದ್ದ ಕುಡುಗೋಲು ಬಳಸಿ ಶರಣಪ್ಪ ಮೂವವರು ಮಕ್ಕಳ ಮೇಲೆ ದಾಳಿ ಮಾಡಿದ್ದು, ಸ್ಥಳದಲ್ಲೇ ಇಬ್ಬರು ಮೃತ ಪಟ್ಟಿದ್ದಾರೆ. ಹಿರಿಯ ಮಗ ಹೇಮಂತ್​ ಬೆನ್ನಿಗೆ ಗಾಯವಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಹೇಮಂತನಿಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

2 ವರ್ಷಗಳ ಹಿಂದೆ ತವರು ಸೇರಿದ್ದ ಪತ್ನಿ

ಹತ್ತು ವರ್ಷಗಳ ಹಿಂದೆ ಜಯಮ್ಮಳ ಜೊತೆ ಶರಣಪ್ಪ ಮದುವೆ ಆಗಿದ್ದ. ಆರಂಭದ ವರ್ಷಗಳಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಇಬ್ಬರ ದಾಂಪತ್ಯಕ್ಕೆ ಸಾಕ್ಷಿಯೆಂಬಂತೆ ಮೂರು ಜನ ಮುದ್ದಾದ ಮಕ್ಕಳೂ ಇದ್ದರು. ಆದರೆ ಕಳೆದ ಎರಡು ವರ್ಷಗಳಿಂದ ವಿಪರೀತವಾಗಿ ಪತ್ನಿಯ ಶೀಲ ಶಂಕಿಸುತ್ತಿದ್ದ ಶರಣಪ್ಪ, ಜಯಮ್ಮ ಯಾರ ಜೊತೆಗೆ ಮಾತಾಡಿದ್ರೂ ಅನುಮಾನ ಪಡುತ್ತಿದ್ದ. ಇರುವ ಮೂವರು ಮಕ್ಕಳು ತನಗೆ ಹುಟ್ಟಿಲ್ಲ ಎನ್ನುತ್ತಿದ್ದ. ಇದೇ ಕಾರಣಕ್ಕೆ ಜೀವ ಭಯದಿಂದ ಎರಡು ವರ್ಷಗಳ ಹಿಂದೆ ಮಕ್ಕಳ ಜೊತೆ ಜಯಮ್ಮ ತವರು ಸೇರಿದ್ದರು. ರಾಜಿ ಪಂಚಾಯತಿ ಬಳಿಕ ಕಳೆದ 15 ದಿನಗಳ ಹಿಂದೆಯಷ್ಟೇ ಪತಿ ಮನೆಗೆ ವಾಪಸ್​ ಬಂದಿದ್ದರು.

ಇದನ್ನೂ ಓದಿ: ರಕ್ಷಣೆಗಾಗಿ ಯಾರ ಕೂಗಲಿ: ತಂಗಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್​​ಮೇಲ್ ಮಾಡಿದ ಸ್ವಂತ ಅಣ್ಣಂದಿರು

ಇಬ್ಬರು ಮಕ್ಕಳನ್ನ ಕಳೆದುಕೊಂಡಿರುವ ತಾಯಿ ಜಯಮ್ಮ ರೋದನೆ ಮುಗಿಲು ಮುಟ್ಟಿದ್ದರೆ, ಪಾಪಿ ಶರಣಪ್ಪನೇ ಕೊಲೆ ಮಾಡಿ ಓಡಿ ಹೋಗಿದ್ದಾನೆ ಅವನು ಸಿಕ್ರೆ ಅಲ್ಲೇ ಸಾಯಿಸಬೇಕು ಅಂತ ಆರೋಪಿಯ ತಾಯಿ ಭೀಮವ್ವ ಕಣ್ಣೀರು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರೂ ಆಗಮಿಸಿದ್ದು, ಮನೆಯಲ್ಲಿ ನಿರವ ಮೌನ ಆವರಿಸಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ತಂಡ ರಚಿಸಿ ಹುಡುಕಾಟ ನಡೆಸಲಾಗ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:38 pm, Fri, 26 September 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ