ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ; ಯಾದಗಿರಿ ಡಿಹೆಚ್​​​ಒ ಅಮಾನತು

ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ. ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ; ಯಾದಗಿರಿ ಡಿಹೆಚ್​​​ಒ ಅಮಾನತು
ಯಾದಗಿರಿ ಡಿಹೆಚ್​​​ಒ ಅಮಾನತು
Follow us
| Updated By: ಆಯೇಷಾ ಬಾನು

Updated on: Aug 04, 2024 | 9:47 AM

ಯಾದಗಿರಿ, ಆಗಸ್ಟ್.04: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಹಿನ್ನೆಲೆ ಯಾದಗಿರಿ ಡಿಹೆಚ್​​​ಒ (Yadgir DHO) ಡಾ.ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತು ಜೊತೆಗೆ ವರ್ಗಾವಣೆ ಮಾಡಲಾಗಿದೆ.

ಡಿಎಚ್ಒ ಯಿಂದ ನೇರವಾಗಿ ಕಲಬುರಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ದೂರು ಹಿನ್ನೆಲೆ ಕಳೆದ ಕೆಲ ತಿಂಗಳ ಹಿಂದೆ DHO ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಯಾದಗಿರಿಯ ಕಚೇರಿ, ಮನೆ, ಕಲಬುರಗಿ ಮನೆ ಮೇಲೆ ದಾಳಿ ನಡೆದಿತ್ತು. ಸದ್ಯ ಇದೀಗ ಅಮಾನತು ಮಾಡಲಾಗಿದೆ.

ಇದನ್ನು ಓದಿ: ಅಮಾವಾಸ್ಯೆ ನಡುವೆ ಪತಿಯ ಅಟ್ಟಹಾಸ; ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಪತಿ

ಕೇಂದ್ರೀಯ ವಿವಿ ಕುಲಪತಿ, ಕುಲಸಚಿವರ ವಿರುದ್ಧ ಎಫ್​ಐಆರ್

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ‌ ಬಳಿಯಿರುವ ಕೇಂದ್ರಿಯ ವಿಶ್ವವಿದ್ಯಾಲಯ ಕುಲಪತಿ ಮತ್ತು ಕುಲಸಚಿವರ ಮೇಲೆ‌ ಎಫ್ಐಆರ್ ದಾಖಲಾಗಿದೆ. ಕುಲಪತಿ ಬಟ್ಟೂ ಸತ್ಯನಾರಾಯಣ, ಕುಲ ಸಚಿವ ರುದ್ರಗೌಡ ಬಿರಾದಾರ್ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ವಿವಿಯ ಸಂಶೋಧನಾ ವಿದ್ಯಾರ್ಥಿ ನಂದಕುಮಾರ್ ಜಾತಿ ನಿಂದನೆ ಅಡಿಯಲ್ಲಿ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನರೋಣಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿದೆ.

ಆಗಸ್ಟ್ 1 ರಂದು ವಿವಿಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಸಲುವಾಗಿ ನಂದಕುಮಾರ್ ವಿವಿಗೆ ಆಗಮಿಸಿದ್ದರು. ಈ ವೇಳೆ ನಂದಕುಮಾರ್ ಅವರನ್ನಿ ವಿವಿಯ ಹೊರಗಡೆ ಗೇಟ್ ಬಳಿಯೇ ತಡೆದು ವಿವಿಯ ಆವರಣದ ಒಳಗಡೆ ಬಿಡದೆ ಸೆಕ್ಯೂರಿಟಿ ತಡೆದಿದ್ದಾರೆ. ವಿವಿಯ ಒಳಗಡೆ ಬಿಡದಂತೆ ಕುಲಪತಿ ಮತ್ತು ಕುಲ ಸಚಿವರು ಹೇಳಿದ್ದಾರೆ ಎಂದ ಸೆಕ್ಯೂರಿಟಿ ತಿಳಿಸಿದ್ದಾರೆ. ಕೀಳು ಜಾತಿಯವನು ಅಂತಾ ನನ್ನ‌ ಒಳಗಡೆ ಬಿಟ್ಟಿಲ್ಲ ಅಂತಾ ಆರೋಪಿಸಿ ನಂದ ಕುಮಾರ್ ದೂರು ನೀಡಿದ್ದಾರೆ. ದೂರಿನಲ್ಲಿ ಈ ಹಿಂದೆಯು ಕೂಡ ನನ್ನನ್ನ‌ ಕೀಳು ಜಾತಿಯವನು ಅಂತಾ ಕಿರುಕುಳ ನೀಡಿದ್ದಾರೆ ಅಂತ ಆರೋಪಿಸಿದ್ದಾರೆ.

ಕಳೆದ ವಾರವಷ್ಟೇ ಸಭೆಯಲ್ಲಿ RSS ಗೀತೆ ಮೊಳಗಿಸಲಾಗಿತ್ತು ಎಂದು ಈ ವಿವಿ ಸುದ್ದಿಯಾಗಿತ್ತು. ಇದೀಗ ಮತ್ತೊಂದು ವಿವಾದ ಮೈ ಮೇಲೆ ಏಳೆದುಕೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ