AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹೊಟ್ಟೆನೋವು, ವಾಂತಿಭೇದಿ: 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಇಂದು ಬೆಳಗ್ಗೆ ಶಾಲೆಯಲ್ಲಿ ಮಾಡಿದ್ದ ಬಿಸಿ ಉಪ್ಪಿಟ್ಟಿನಲ್ಲಿ ಹಲ್ಲಿಬಿದ್ದ ಪರಿಣಾಮ ಅದನ್ನು ಸೇವಿಸಿ 27ಕ್ಕೂ ಹೆಚ್ಚು ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ.

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹೊಟ್ಟೆನೋವು, ವಾಂತಿಭೇದಿ: 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ವಿದ್ಯಾರ್ಥಿಗಳು
ಅಮೀನ್​ ಸಾಬ್​
| Edited By: |

Updated on: Jul 08, 2023 | 3:51 PM

Share

ಯಾದಗಿರಿ: ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27ಕ್ಕೂ ಹೆಚ್ಚು ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು (students) ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಶಾಲೆಯಲ್ಲಿ ಮಾಡಿದ್ದ ಬಿಸಿ ಉಪ್ಪಿಟ್ಟು ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ವಾಂತಿಭೇದಿ ಕಾಣಿಸಿಕೊಂಡಿದೆ. ಬಳಿಕ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯತನದಿಂದ ಹೀಗಾಗಿದೆ ಎಂದು ಪೋಷಕರ ಆರೋಪ ಮಾಡಿದ್ದಾರೆ.

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 4 ವಿದ್ಯಾರ್ಥಿಗಳು ಅಸ್ವಸ್ಥ

ಇತ್ತೀಚೆಗೆ ರಾಯಚೂರು ತಾಲೂಕಿನ ಅಪ್ಪನದೊಡ್ಡಿ ಸರ್ಕಾರ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ ಪರಿಣಾಮ 4 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಕೂಡಲೇ ವೈದ್ಯರನ್ನು ಶಾಲೆಗೆ ಕರೆಸಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿತ್ತು. ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಹೀಗಾಗಲು ಕಾರಣ ಎಂದು ಪೋಷಕರು ಆರೋಪಿಸಿದ್ದರು.

ಇದನ್ನೂ ಓದಿ: Yadgir News: ಮಹಿಳೆಯರಿಗೆ ಉಚಿತ ಪ್ರಯಾಣ, ನಮಗೆ ಇನ್ನೂ ಆಗಿಲ್ಲ ವೇತನ; ಯಾದಗಿರಿಯಲ್ಲಿ ಸಾರಿಗೆ ಸಿಬ್ಬಂದಿ ಅಳಲು

ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳ ಆಗ್ರಹ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಿಂದ ಮಳಖೇಡ್ ಗ್ರಾಮಕ್ಕೆ ಬಸ್ ಸೌಲಭ್ಯಕ್ಕಾಗಿ ನೂರಾರು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ನಾನು ಹೂಡಾ ಬಿ ಗ್ರಾಮದಿಂದ ಮಳಖೇಡ್ ಗ್ರಾಮಕ್ಕೆ ಶಾಲೆ, ಕಾಲೇಜಿಗೆ ಹೋಗುತ್ತೇವೆ. ಆದರೆ ಬಸ್ ಇಲ್ಲದೇ ಇರೋದರಿಂದ ಇದೀಗ ನಡೆದುಕೊಂಡು ಹೋಗಬೇಕಾಗಿದೆ. ಬಸ್ ಸೌಲಭ್ಯ ಕಲ್ಪಿಸುವಂತೆ ಹತ್ತಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೂಡಾ ಪ್ರಯೋಜನವಾಗಿಲ್ಲಾ. ಕೂಡಲೇ ಬಸ್ ಸೌಲಭ್ಯ ಕಲ್ಪಿಸಬೇಕು ಅಂತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ನೆಚ್ಚಿನ ಶಿಕ್ಷಕರ ವರ್ಗಾವಣೆಗೆ ವಿದ್ಯಾರ್ಥಿಗಳು ಕಣ್ಣೀರು

ಗದಗ: ನಗರದ ಖಾನತೋಟ ಓಣಿಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂ 2 ರಲ್ಲಿ ದೈಹಿಕ ಶಿಕ್ಷಕ ವರ್ಗಾವಣೆಗೊಂಡಿದ್ದಾರೆ. ಇದರಿಂದ ತಮ್ಮ ನೆಚ್ಚಿನ ಶಿಕ್ಷಕನನ್ನು ತಬ್ಬಿಕೊಂಡು ಶಾಲೆಯ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ದೈಹಿಕ ಶಿಕ್ಷಕ ಎಸ್ ಬಿ ಪೂಜಾರ ಕಳೆದ ಒಂದೂವರೆ ವರ್ಷದಿಂದ ಈ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ: ವೈದ್ಯರನ್ನು ಕರೆಸಿ ಶಾಲೆಯಲ್ಲೇ ಮಕ್ಕಳಿಗೆ ಚಿಕಿತ್ಸೆ

ಈಗ ಗದಗ ತಾಲೂಕಿನ ವೆಂಕಟಾಪುರ ಗ್ರಾಮದ ಸರಕಾರಿ ಶಾಲೆಗೆ ವರ್ಗಾವಣೆಗೊಳಿಸಿ ಬಿಇಓ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರಿಂದ ಬೀಳ್ಕೊಡುವ ಸಮಾರಂಭ ಆಯೋಜನೆ ಮಾಡಲಾಗಿತ್ತು. ಬೀಳ್ಕೊಡುವ ಸಮಾರಂಭದಲ್ಲಿ ತಮ್ಮ ನೆಚ್ಚಿನ ಶಿಕ್ಷಕನನ್ನು ಸುತ್ತುವರೆದು ಮಕ್ಕಳು ಕಣ್ಣೀರು ಹಾಕಿದ್ದಾರೆ. ಮಕ್ಕಳನ್ನು ಸಮಾಧಾನಪಡಿಸಿ ಮತ್ತೆ ಇದೇ ಶಾಲೆಗೆ ಬರ್ತೀನಿ ಎಂದು ಶಿಕ್ಷಕ ತಮ್ಮ ಪ್ರೀತಿಯ ವಿಧ್ಯಾರ್ಥಿನಿಯರನ್ನು ಸಮಾಧಾನ ಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ