AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ವಿಚಿತ್ರ ಫಲಿತಾಂಶಕ್ಕೆ ಸಾಕ್ಷಿಯಾದ ಗ್ರಾಮ ಪಂಚಾಯತಿ ಚುನಾವಣೆ

Yadgir News: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಆ ಮೂಲಕ ವಿಚಿತ್ರ ಫಲಿತಾಂಶಕ್ಕೆ ಗ್ರಾಮ ಸಾಕ್ಷಿಯಾಗಿದೆ.

ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ವಿಚಿತ್ರ ಫಲಿತಾಂಶಕ್ಕೆ ಸಾಕ್ಷಿಯಾದ ಗ್ರಾಮ ಪಂಚಾಯತಿ ಚುನಾವಣೆ
ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 04, 2023 | 4:48 PM

Share

ಯಾದಗಿರಿ, ಆಗಸ್ಟ್​ 04: ಜಿಲ್ಲೆಯ ಸುರಪುರ ತಾಲೂಕಿನ ನಗನೂರ (Naganur) ಗ್ರಾಮದಲ್ಲಿ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಶುಕ್ರವಾರ ನಡೆದಿದ್ದು, ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಆ ಮೂಲಕ ವಿಚಿತ್ರ ಫಲಿತಾಂಶಕ್ಕೆ ನಗನೂರ ಗ್ರಾಮ ಪಂಚಾಯತ್ ಚುನಾವಣೆ ಸಾಕ್ಷಿಯಾಗಿದೆ.

ಒಂದು ಮತ ಅಸಿಂಧು

ಒಟ್ಟು 19 ಜನ ಸದಸ್ಯರಿಂದ ಮತ ಚಲಾವಣೆ ಮಾಡಲಾಗಿದ್ದು, ಅದರಲ್ಲಿ ಒಂದು ಮತ ಅಸಿಂಧುಗೊಂಡಿದೆ. ಹಾಗಾಗಗಿ ಚುನಾವಣಾ ಫಲಿತಾಂಶ ಭಾರೀ ಗೊಂದಲ ಸೃಷ್ಠಿ ಮಾಡಿತ್ತು. ಇದರಿಂದಾಗಿ ನಗನೂರು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದರು. ಬಳಿಕ ಅಸಿಂಧು ಮತದಿಂದಾಗಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ/ಉಪಾಧ್ಯಕ್ಷ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಬುಧವಾರ ದೆಹಲಿ ಹೈಕಮಾಂಡ್ ಸಭೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕರೆಲ್ಲ ಭ್ರಷ್ಟಾಚಾರದ ಆರೋಪಗಳ ಮೇಲೆ ಚರ್ಚೆ ನಡೆಯಲಿಲ್ಲ ಎನ್ನುತ್ತಾರೆ!

ಕಳೆದ ತಿಂಗಳು ಮೀಸಲಾತಿ ಘೋಷಣೆಯ ದಿನ ಇದೇ ಪಂಚಾಯತಿಯ ಇಬ್ಬರು ಸದಸ್ಯರು ನಾಪತ್ತೆಯಾಗಿದ್ದರು. ಮೂರು ದಿನಗಳ ಬಳಿಕ ಸದಸ್ಯರು ಪತ್ತಯಾಗಿದ್ದರು. ಬಳಿಕ ಘಟನೆ ಸುಖಾಂತ್ಯಗೊಂಡಿತ್ತು.

ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ

ಚುನಾವಣೆ ಹಿನ್ನಲೆ ಯಾದಗಿರಿಯಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿ‌ ಯಾದಗಿರಿ ಡಿಸಿ ಸುಶೀಲಾ ಬಿ ಆದೇಶ ಹೊರಡಿಸಿದ್ದರು. ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಸಂಚಲನ ಮೂಡಿಸಿದ ಯಾದಗಿರಿ ಎಸ್​ಪಿ ಇ-ಮೇಲ್​

ಚುನಾವಣೆ ವೇಳೆ ಗಲಾಟೆ ನಡೆಯುವ ಸಾಧ್ಯತೆ ಹಿನ್ನಲೆ ಹುಣಸಗಿ ಹಾಗೂ ಸುರಪುರ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿಂದೆ‌ ಎರಡು ತಾಲೂಕಿನ ಕೆಲ‌ ಕಡೆ ಗಲಾಟೆಗಳು ನಡೆದಿದ್ದವು. ಇವತ್ತು ಮತ್ತೆ ಗಲಾಟೆ ನಡೆಯಬಹುದು ಅಂತ ಜಾರಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:35 pm, Fri, 4 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ