AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ವಿಚಿತ್ರ ಫಲಿತಾಂಶಕ್ಕೆ ಸಾಕ್ಷಿಯಾದ ಗ್ರಾಮ ಪಂಚಾಯತಿ ಚುನಾವಣೆ

Yadgir News: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಆ ಮೂಲಕ ವಿಚಿತ್ರ ಫಲಿತಾಂಶಕ್ಕೆ ಗ್ರಾಮ ಸಾಕ್ಷಿಯಾಗಿದೆ.

ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ವಿಚಿತ್ರ ಫಲಿತಾಂಶಕ್ಕೆ ಸಾಕ್ಷಿಯಾದ ಗ್ರಾಮ ಪಂಚಾಯತಿ ಚುನಾವಣೆ
ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ
ಅಮೀನ್​ ಸಾಬ್​
| Edited By: |

Updated on:Aug 04, 2023 | 4:48 PM

Share

ಯಾದಗಿರಿ, ಆಗಸ್ಟ್​ 04: ಜಿಲ್ಲೆಯ ಸುರಪುರ ತಾಲೂಕಿನ ನಗನೂರ (Naganur) ಗ್ರಾಮದಲ್ಲಿ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಶುಕ್ರವಾರ ನಡೆದಿದ್ದು, ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಆ ಮೂಲಕ ವಿಚಿತ್ರ ಫಲಿತಾಂಶಕ್ಕೆ ನಗನೂರ ಗ್ರಾಮ ಪಂಚಾಯತ್ ಚುನಾವಣೆ ಸಾಕ್ಷಿಯಾಗಿದೆ.

ಒಂದು ಮತ ಅಸಿಂಧು

ಒಟ್ಟು 19 ಜನ ಸದಸ್ಯರಿಂದ ಮತ ಚಲಾವಣೆ ಮಾಡಲಾಗಿದ್ದು, ಅದರಲ್ಲಿ ಒಂದು ಮತ ಅಸಿಂಧುಗೊಂಡಿದೆ. ಹಾಗಾಗಗಿ ಚುನಾವಣಾ ಫಲಿತಾಂಶ ಭಾರೀ ಗೊಂದಲ ಸೃಷ್ಠಿ ಮಾಡಿತ್ತು. ಇದರಿಂದಾಗಿ ನಗನೂರು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದರು. ಬಳಿಕ ಅಸಿಂಧು ಮತದಿಂದಾಗಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ/ಉಪಾಧ್ಯಕ್ಷ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಬುಧವಾರ ದೆಹಲಿ ಹೈಕಮಾಂಡ್ ಸಭೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕರೆಲ್ಲ ಭ್ರಷ್ಟಾಚಾರದ ಆರೋಪಗಳ ಮೇಲೆ ಚರ್ಚೆ ನಡೆಯಲಿಲ್ಲ ಎನ್ನುತ್ತಾರೆ!

ಕಳೆದ ತಿಂಗಳು ಮೀಸಲಾತಿ ಘೋಷಣೆಯ ದಿನ ಇದೇ ಪಂಚಾಯತಿಯ ಇಬ್ಬರು ಸದಸ್ಯರು ನಾಪತ್ತೆಯಾಗಿದ್ದರು. ಮೂರು ದಿನಗಳ ಬಳಿಕ ಸದಸ್ಯರು ಪತ್ತಯಾಗಿದ್ದರು. ಬಳಿಕ ಘಟನೆ ಸುಖಾಂತ್ಯಗೊಂಡಿತ್ತು.

ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ

ಚುನಾವಣೆ ಹಿನ್ನಲೆ ಯಾದಗಿರಿಯಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿ‌ ಯಾದಗಿರಿ ಡಿಸಿ ಸುಶೀಲಾ ಬಿ ಆದೇಶ ಹೊರಡಿಸಿದ್ದರು. ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಸಂಚಲನ ಮೂಡಿಸಿದ ಯಾದಗಿರಿ ಎಸ್​ಪಿ ಇ-ಮೇಲ್​

ಚುನಾವಣೆ ವೇಳೆ ಗಲಾಟೆ ನಡೆಯುವ ಸಾಧ್ಯತೆ ಹಿನ್ನಲೆ ಹುಣಸಗಿ ಹಾಗೂ ಸುರಪುರ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿಂದೆ‌ ಎರಡು ತಾಲೂಕಿನ ಕೆಲ‌ ಕಡೆ ಗಲಾಟೆಗಳು ನಡೆದಿದ್ದವು. ಇವತ್ತು ಮತ್ತೆ ಗಲಾಟೆ ನಡೆಯಬಹುದು ಅಂತ ಜಾರಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:35 pm, Fri, 4 August 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ