AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ

ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್​​​ ಉಗ್ರನನ್ನು ಎನ್​ಐಎ ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ
ಬಂಧಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ ಯಾದಗಿರಿಯ ಶಹಾಪುರ ನಗರದ ವ್ಯಕ್ತಿಯ ಮನೆಗೆ ಆಗಮಿಸಿ ವಿಚಾರಣೆ ನಡೆಸಿದ ಎನ್​ಐಎ
Follow us
ಅಮೀನ್​ ಸಾಬ್​
| Updated By: Rakesh Nayak Manchi

Updated on:Sep 14, 2023 | 11:46 AM

ಯಾದಗಿರಿ, ಸೆ.14: ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್ (ISIS)​​​ ಉಗ್ರನನ್ನು ಎನ್​ಐಎ (NIA) ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ(Yadgir) ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಬಂಧಿತ ಐಸಿಸ್​ ಉಗ್ರನ ಜೊತೆ ಇನ್​​ಸ್ಟಾಗ್ರಾಮ್​ನಲ್ಲಿ ಸಂಪರ್ಕ ಹೊಂದಿದ್ದ ಖಾಲಿದ್ ಅಹ್ಮದ್​​​ ಮನೆಗೆ ಭೇಟಿ ನೀಡಿದ ಸಚ್ಚಿದಾನಂದ ಶರ್ಮಾ ನೇತೃತ್ವದ ಎನ್​ಐಎ ತಂಡ, ಖಾಲಿದ್​ನನ್ನು ತೀವ್ರ ವಿಚಾರಣೆ ನಡೆಸಿತು. ಅಲ್ಲದೆ, ಸೆಪ್ಟೆಂಬರ್ 20 ರಂದು ರಾಂಚಿಯಲ್ಲಿರುವ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಚಾರಣೆ ವೇಳೆ ಖಾಲಿದ್ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಉಗ್ರರ ವಿರುದ್ಧದ ಹೋರಾಟದಲ್ಲಿ ಓರ್ವ ಪೊಲೀಸ್, ಇಬ್ಬರು ಸೇನಾಧಿಕಾರಿಗಳು ಹುತಾತ್ಮ

ಆಂಧ್ರ ಪ್ರದೇಶದ ಪಾಸಿಂಗ್ ಇರುವ ವಾಹನದಲ್ಲಿ ಎನ್​ಐಎ ತಂಡ ಆಗಮಿಸಿದೆ. ಇಂದು ಎರಡನೇ ಬಾರಿ ಖಾಲಿದ್ ಮನೆಗೆ ಭೇಟಿ ನೀಡಿದ ತಂಡ, ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿದೆ. ಈ ಹಿಂದೆಯೂ ಮನೆಗೆ ಭೇಟಿ ನೀಡಿ ಖಾಲಿದ್​ನನ್ನು ವಿಚಾರಣೆ ನಡೆಸಿತ್ತು.

ಜುಲೈ ತಿಂಗಳಲ್ಲಿ ರಾಂಚಿಯಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈತನ್ನು ವಿಚಾರಣೆ ನಡೆಸಿದಾಗ ಇನ್ಸ್ಟಾಗ್ರಾಮ್​ನಲ್ಲಿ ಶಹಾಪುರದ ಖಾಲಿದ್ ಸಂರ್ಪದಲ್ಲಿರುವುದು ತಿಳಿದುಬಂದಿತ್ತು. ಹೀಗಾಗಿ ಎನ್ಐಎ ಅಧಿಕಾರಿಗಳಳು ಖಾಲಿದ್​ನನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Thu, 14 September 23

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ