AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ

ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್​​​ ಉಗ್ರನನ್ನು ಎನ್​ಐಎ ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ
ಬಂಧಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ ಯಾದಗಿರಿಯ ಶಹಾಪುರ ನಗರದ ವ್ಯಕ್ತಿಯ ಮನೆಗೆ ಆಗಮಿಸಿ ವಿಚಾರಣೆ ನಡೆಸಿದ ಎನ್​ಐಎ
ಅಮೀನ್​ ಸಾಬ್​
| Edited By: |

Updated on:Sep 14, 2023 | 11:46 AM

Share

ಯಾದಗಿರಿ, ಸೆ.14: ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್ (ISIS)​​​ ಉಗ್ರನನ್ನು ಎನ್​ಐಎ (NIA) ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ(Yadgir) ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಬಂಧಿತ ಐಸಿಸ್​ ಉಗ್ರನ ಜೊತೆ ಇನ್​​ಸ್ಟಾಗ್ರಾಮ್​ನಲ್ಲಿ ಸಂಪರ್ಕ ಹೊಂದಿದ್ದ ಖಾಲಿದ್ ಅಹ್ಮದ್​​​ ಮನೆಗೆ ಭೇಟಿ ನೀಡಿದ ಸಚ್ಚಿದಾನಂದ ಶರ್ಮಾ ನೇತೃತ್ವದ ಎನ್​ಐಎ ತಂಡ, ಖಾಲಿದ್​ನನ್ನು ತೀವ್ರ ವಿಚಾರಣೆ ನಡೆಸಿತು. ಅಲ್ಲದೆ, ಸೆಪ್ಟೆಂಬರ್ 20 ರಂದು ರಾಂಚಿಯಲ್ಲಿರುವ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಚಾರಣೆ ವೇಳೆ ಖಾಲಿದ್ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಉಗ್ರರ ವಿರುದ್ಧದ ಹೋರಾಟದಲ್ಲಿ ಓರ್ವ ಪೊಲೀಸ್, ಇಬ್ಬರು ಸೇನಾಧಿಕಾರಿಗಳು ಹುತಾತ್ಮ

ಆಂಧ್ರ ಪ್ರದೇಶದ ಪಾಸಿಂಗ್ ಇರುವ ವಾಹನದಲ್ಲಿ ಎನ್​ಐಎ ತಂಡ ಆಗಮಿಸಿದೆ. ಇಂದು ಎರಡನೇ ಬಾರಿ ಖಾಲಿದ್ ಮನೆಗೆ ಭೇಟಿ ನೀಡಿದ ತಂಡ, ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿದೆ. ಈ ಹಿಂದೆಯೂ ಮನೆಗೆ ಭೇಟಿ ನೀಡಿ ಖಾಲಿದ್​ನನ್ನು ವಿಚಾರಣೆ ನಡೆಸಿತ್ತು.

ಜುಲೈ ತಿಂಗಳಲ್ಲಿ ರಾಂಚಿಯಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈತನ್ನು ವಿಚಾರಣೆ ನಡೆಸಿದಾಗ ಇನ್ಸ್ಟಾಗ್ರಾಮ್​ನಲ್ಲಿ ಶಹಾಪುರದ ಖಾಲಿದ್ ಸಂರ್ಪದಲ್ಲಿರುವುದು ತಿಳಿದುಬಂದಿತ್ತು. ಹೀಗಾಗಿ ಎನ್ಐಎ ಅಧಿಕಾರಿಗಳಳು ಖಾಲಿದ್​ನನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Thu, 14 September 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!