AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ

ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್​​​ ಉಗ್ರನನ್ನು ಎನ್​ಐಎ ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ
ಬಂಧಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ ಯಾದಗಿರಿಯ ಶಹಾಪುರ ನಗರದ ವ್ಯಕ್ತಿಯ ಮನೆಗೆ ಆಗಮಿಸಿ ವಿಚಾರಣೆ ನಡೆಸಿದ ಎನ್​ಐಎ
ಅಮೀನ್​ ಸಾಬ್​
| Edited By: Rakesh Nayak Manchi|

Updated on:Sep 14, 2023 | 11:46 AM

Share

ಯಾದಗಿರಿ, ಸೆ.14: ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್ (ISIS)​​​ ಉಗ್ರನನ್ನು ಎನ್​ಐಎ (NIA) ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ(Yadgir) ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಬಂಧಿತ ಐಸಿಸ್​ ಉಗ್ರನ ಜೊತೆ ಇನ್​​ಸ್ಟಾಗ್ರಾಮ್​ನಲ್ಲಿ ಸಂಪರ್ಕ ಹೊಂದಿದ್ದ ಖಾಲಿದ್ ಅಹ್ಮದ್​​​ ಮನೆಗೆ ಭೇಟಿ ನೀಡಿದ ಸಚ್ಚಿದಾನಂದ ಶರ್ಮಾ ನೇತೃತ್ವದ ಎನ್​ಐಎ ತಂಡ, ಖಾಲಿದ್​ನನ್ನು ತೀವ್ರ ವಿಚಾರಣೆ ನಡೆಸಿತು. ಅಲ್ಲದೆ, ಸೆಪ್ಟೆಂಬರ್ 20 ರಂದು ರಾಂಚಿಯಲ್ಲಿರುವ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಚಾರಣೆ ವೇಳೆ ಖಾಲಿದ್ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಉಗ್ರರ ವಿರುದ್ಧದ ಹೋರಾಟದಲ್ಲಿ ಓರ್ವ ಪೊಲೀಸ್, ಇಬ್ಬರು ಸೇನಾಧಿಕಾರಿಗಳು ಹುತಾತ್ಮ

ಆಂಧ್ರ ಪ್ರದೇಶದ ಪಾಸಿಂಗ್ ಇರುವ ವಾಹನದಲ್ಲಿ ಎನ್​ಐಎ ತಂಡ ಆಗಮಿಸಿದೆ. ಇಂದು ಎರಡನೇ ಬಾರಿ ಖಾಲಿದ್ ಮನೆಗೆ ಭೇಟಿ ನೀಡಿದ ತಂಡ, ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿದೆ. ಈ ಹಿಂದೆಯೂ ಮನೆಗೆ ಭೇಟಿ ನೀಡಿ ಖಾಲಿದ್​ನನ್ನು ವಿಚಾರಣೆ ನಡೆಸಿತ್ತು.

ಜುಲೈ ತಿಂಗಳಲ್ಲಿ ರಾಂಚಿಯಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈತನ್ನು ವಿಚಾರಣೆ ನಡೆಸಿದಾಗ ಇನ್ಸ್ಟಾಗ್ರಾಮ್​ನಲ್ಲಿ ಶಹಾಪುರದ ಖಾಲಿದ್ ಸಂರ್ಪದಲ್ಲಿರುವುದು ತಿಳಿದುಬಂದಿತ್ತು. ಹೀಗಾಗಿ ಎನ್ಐಎ ಅಧಿಕಾರಿಗಳಳು ಖಾಲಿದ್​ನನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Thu, 14 September 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!