ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ

ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್​​​ ಉಗ್ರನನ್ನು ಎನ್​ಐಎ ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಜಾರ್ಖಂಡ್​ನಲ್ಲಿ ಬಂಧಿತನಾದ ಉಗ್ರನಿಗೆ ಯಾದಗಿರಿ ನಂಟು, ಎರಡನೇ ಬಾರಿ ಶಹಾಪುರ ನಗರಕ್ಕೆ ಎನ್​ಐಎ ಎಂಟ್ರಿ
ಬಂಧಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ ಯಾದಗಿರಿಯ ಶಹಾಪುರ ನಗರದ ವ್ಯಕ್ತಿಯ ಮನೆಗೆ ಆಗಮಿಸಿ ವಿಚಾರಣೆ ನಡೆಸಿದ ಎನ್​ಐಎ
Edited By: Rakesh Nayak Manchi

Updated on: Sep 14, 2023 | 11:46 AM

ಯಾದಗಿರಿ, ಸೆ.14: ಜಾರ್ಖಂಡ್​ನ ರಾಂಚಿಯಲ್ಲಿ ಐಸಿಸ್ (ISIS)​​​ ಉಗ್ರನನ್ನು ಎನ್​ಐಎ (NIA) ಬಂಧಿಸಿ ವಿಚಾರಣೆ ಕೈಗೊಂಡಿತ್ತು. ಈ ವೇಳೆ ಕರ್ನಾಟಕದ ಯಾದಗಿರಿ(Yadgir) ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮಾಹಿತಿ ತಿಳಿದುಬಂದಿತ್ತು. ಅದರಂತೆ, ಜಿಲ್ಲೆಗೆ ಆಗಮಿಸಿದ್ದ ಎನ್​ಐಎ ತಂಡ, ಇದೀಗ ಎರಡನೇ ಬಾರಿ ಆಗಮಿಸಿ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಬಂಧಿತ ಐಸಿಸ್​ ಉಗ್ರನ ಜೊತೆ ಇನ್​​ಸ್ಟಾಗ್ರಾಮ್​ನಲ್ಲಿ ಸಂಪರ್ಕ ಹೊಂದಿದ್ದ ಖಾಲಿದ್ ಅಹ್ಮದ್​​​ ಮನೆಗೆ ಭೇಟಿ ನೀಡಿದ ಸಚ್ಚಿದಾನಂದ ಶರ್ಮಾ ನೇತೃತ್ವದ ಎನ್​ಐಎ ತಂಡ, ಖಾಲಿದ್​ನನ್ನು ತೀವ್ರ ವಿಚಾರಣೆ ನಡೆಸಿತು. ಅಲ್ಲದೆ, ಸೆಪ್ಟೆಂಬರ್ 20 ರಂದು ರಾಂಚಿಯಲ್ಲಿರುವ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಚಾರಣೆ ವೇಳೆ ಖಾಲಿದ್ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಉಗ್ರರ ವಿರುದ್ಧದ ಹೋರಾಟದಲ್ಲಿ ಓರ್ವ ಪೊಲೀಸ್, ಇಬ್ಬರು ಸೇನಾಧಿಕಾರಿಗಳು ಹುತಾತ್ಮ

ಆಂಧ್ರ ಪ್ರದೇಶದ ಪಾಸಿಂಗ್ ಇರುವ ವಾಹನದಲ್ಲಿ ಎನ್​ಐಎ ತಂಡ ಆಗಮಿಸಿದೆ. ಇಂದು ಎರಡನೇ ಬಾರಿ ಖಾಲಿದ್ ಮನೆಗೆ ಭೇಟಿ ನೀಡಿದ ತಂಡ, ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿದೆ. ಈ ಹಿಂದೆಯೂ ಮನೆಗೆ ಭೇಟಿ ನೀಡಿ ಖಾಲಿದ್​ನನ್ನು ವಿಚಾರಣೆ ನಡೆಸಿತ್ತು.

ಜುಲೈ ತಿಂಗಳಲ್ಲಿ ರಾಂಚಿಯಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈತನ್ನು ವಿಚಾರಣೆ ನಡೆಸಿದಾಗ ಇನ್ಸ್ಟಾಗ್ರಾಮ್​ನಲ್ಲಿ ಶಹಾಪುರದ ಖಾಲಿದ್ ಸಂರ್ಪದಲ್ಲಿರುವುದು ತಿಳಿದುಬಂದಿತ್ತು. ಹೀಗಾಗಿ ಎನ್ಐಎ ಅಧಿಕಾರಿಗಳಳು ಖಾಲಿದ್​ನನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Thu, 14 September 23

Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
Follow Us