ಎರಡು ಕಾರುಗಳ ಮುಖಾಮುಖಿ: ಧಗಧಗನೆ ಹೊತ್ತಿ ಉರಿದ ಸ್ವಿಫ್ಟ್ ಕಾರು

ಯಾದಗಿರಿ: ಸುರಪುರ ತಾಲೂಕಿನ ಕವಡಿಮಟ್ಟಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರು ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಸುರಪುರ ತಾಲೂಕಿನ ಪೇಟ ಅಮ್ಮಪುರ ಗ್ರಾಮದ ಕುಮಾರಸ್ವಾಮಿ ಎಂಬುವರಿಗೆ ಸೇರಿದ ಕಾರು ಬೆಂಕಿಗಾಹುತಿಯಾಗಿದೆ. ಡಿಕ್ಕಿಯ ರಭಸಕ್ಕೆ ಮತ್ತೊಂದು ಕಾರು ಸಹ ಜಖಂಗೊಂಡಿದೆ. ಅವಘಡದಲ್ಲಿ ಕಾರಿನಲ್ಲಿದ್ದ ಐದು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ಕಾರುಗಳ ಮುಖಾಮುಖಿ: ಧಗಧಗನೆ ಹೊತ್ತಿ ಉರಿದ ಸ್ವಿಫ್ಟ್ ಕಾರು
ಸಾಧು ಶ್ರೀನಾಥ್​

Updated on: Jan 26, 2020 | 7:35 PM

ಯಾದಗಿರಿ: ಸುರಪುರ ತಾಲೂಕಿನ ಕವಡಿಮಟ್ಟಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರು ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಸುರಪುರ ತಾಲೂಕಿನ ಪೇಟ ಅಮ್ಮಪುರ ಗ್ರಾಮದ ಕುಮಾರಸ್ವಾಮಿ ಎಂಬುವರಿಗೆ ಸೇರಿದ ಕಾರು ಬೆಂಕಿಗಾಹುತಿಯಾಗಿದೆ.

ಡಿಕ್ಕಿಯ ರಭಸಕ್ಕೆ ಮತ್ತೊಂದು ಕಾರು ಸಹ ಜಖಂಗೊಂಡಿದೆ. ಅವಘಡದಲ್ಲಿ ಕಾರಿನಲ್ಲಿದ್ದ ಐದು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us