AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಿಗಷ್ಟೇ ಸೀಮಿತವಾದ ಸಿಸಿಟಿವಿ ಕ್ಯಾಮರಾ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ

ಯಾದಗಿರಿ ನಗರದಲ್ಲಿ ಕಳ್ಳತನ ಪ್ರಕರಣ ಹಾಗೂ ಅಪಘಾತ ಪ್ರಕರಣಗಳು ನಡೆದರೆ ಶೀಘ್ರವೇ ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮರಾಗಳು ಅನುಕೂಲ ಆಗುತ್ತದೆ ಎನ್ನುವ ಉದ್ದೇಶಕ್ಕೆ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಆದರೆ ಸಿಸಿಟಿವಿ ಇದ್ದರೂ ಕಳ್ಳತನ ಪ್ರಕರಣಗಳು ನಡೆಯುತ್ತಿವೆ.

ಹೆಸರಿಗಷ್ಟೇ ಸೀಮಿತವಾದ ಸಿಸಿಟಿವಿ ಕ್ಯಾಮರಾ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ
ಸಿಸಿಟಿವಿ ಕ್ಯಾಮರಾ (ಪ್ರಾತನಿಧಿಕ ಚಿತ್ರ)
TV9 Web
| Updated By: preethi shettigar|

Updated on: Dec 13, 2021 | 1:08 PM

Share

ಯಾದಗಿರಿ: ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಿಸಿಟಿವಿ ಕ್ಯಾಮರಾಗಳನ್ನು (CCTV Camera) ಅಳವಡಿಸಲಾಗಿದ್ದು, ಅದು ಕೆಲಸಕ್ಕೆ ಬಾರದಂತಾಗಿವೆ. ಏಕೆಂದರೆ ಯಾದಗಿರಿ ನಗರದ ಪ್ರಮುಖ ಸರ್ಕಲ್​ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ಐದು ವರ್ಷ ಕಳೆದರೂ ಅವುಗಳು ಮಾತ್ರ ಕಾರ್ಯನಿರ್ವಹಿಸುತ್ತಿಲ್ಲ. ಯಾದಗಿರಿ ಜಿಲ್ಲಾ ಕೇಂದ್ರವಾದ ಬಳಿಕ ದಿನೇ ದಿನೇ ಅಭಿವೃದ್ಧಿ ಹೊಂದುತ್ತಿದೆ. ಇನ್ನು ನಗರ ಕೂಡ ದೊಡ್ಡದಾಗಿ ಬೆಳೆಯುತ್ತಿದ್ದು, ಕಳ್ಳತನ ಸೇರಿದಂತೆ ಸಾಕಷ್ಟು ಅಪರಾಧ ಪ್ರಕರಣಗಳು ನಡೆಯುತ್ತಿದೆ. ಇದೇ ಕಾರಣಕ್ಕೆ ಯಾದಗಿರಿ ಜಿಲ್ಲಾ ಪೊಲೀಸರು ಯಾದಗಿರಿ ನಗರಸಭೆ ಸಹಕಾರದೊಂದಿಗೆ 8 ಕಡೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಆದರೆ 8 ಕ್ಯಾಮರಾಗಳು ಇದ್ದರೂ ಒಂದೆ ಒಂದು ಕ್ಯಾಮರಾ ಕಾರ್ಯನಿರ್ವಹಿಸುತ್ತಿಲ್ಲ. ಇದು ಸಹಜವಾಗಿಯೇ ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಎಂಟು ಕಡೆ ಸಿಸಿಟಿವಿ ಕ್ಯಾಮರಾ ಯಾದಗಿರಿ ನಗರದ ಜನ ಸಂದಣಿ ಇರುವಂತ ಎಂಟು ಕಡೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಗರದ ಸುಭಾಷ್ ವೃತ್ತ, ಶಾಸ್ತ್ರೀ ವೃತ್ತ, ಗಂಜ್ ಏರಿಯಾ, ಗಾಂಧಿ ವೃತ್ತ, ಕನಕ ಸರ್ಕಲ್ ಸೇರಿದಂತೆ ಎಂಟು ಕಡೆ ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸಿದ್ದಾರೆ. ಆದರೆ ಕೇವಲ ಸಿಸಿಟಿವಿ ಕ್ಯಾಮರಗಳನ್ನು ಕುರಿಸಿ ಕೈ ತೊಳೆದುಕೊಂಡು ಬಿಟ್ಟಿದ್ದಾರೆ ಬಿಟ್ಟರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ.

ಲಕ್ಷಾಂತರ ರೂ. ಖರ್ಚು ಕಳೆದ ಐದು ವರ್ಷಗಳ ಹಿಂದೆ ಯಾದಗಿರಿ ನಗರಸಭೆ ವತಿಯಿಂದ 8 ಹೈಟೇಕ್ ಸಿಸಿಟಿವಿ ಕ್ಯಾಮರಾಗಳನ್ನು ಕುರಿಸಲಾಗಿದೆ. ಇದಕ್ಕಾಗಿ ಲಕ್ಷಾಂತರ ರೂ. ಸಾರ್ವಜನಿಕರ ತೆರಿಗೆ ಹಣವನ್ನು ಬಳಕೆ ಮಾಡಲಾಗಿದೆ. ಆದರೆ ಹಣ ಖರ್ಚು ಮಾಡಿ ಕ್ಯಾಮರಾಗಳನ್ನು ಕುರಿಸಿದರೂ ಸಾರ್ವಜನಿಕರಿಗೆ ನಯಾ ಪೈಸೆಯಷ್ಟು ಉಪಯೋಗವಾಗುತ್ತಿಲ್ಲ ಎಂದು ಕರವೇ ಮುಖಂಡ ಮಲ್ಲು ಮಾಳಿಕೇರಿ ಹೇಳಿದ್ದಾರೆ.

ಸಿಸಿಟಿವಿ ಇದ್ದರೂ ಬೇಧಿಸಲಾಗುತ್ತಿಲ್ಲ ಕಳ್ಳತನ ಪ್ರಕರಣ ಯಾದಗಿರಿ ನಗರದಲ್ಲಿ ಕಳ್ಳತನ ಪ್ರಕರಣ ಹಾಗೂ ಅಪಘಾತ ಪ್ರಕರಣಗಳು ನಡೆದರೆ ಶೀಘ್ರವೇ ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮರಾಗಳು ಅನುಕೂಲ ಆಗುತ್ತದೆ ಎನ್ನುವ ಉದ್ದೇಶಕ್ಕೆ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಆದರೆ ಸಿಸಿಟಿವಿ ಇದ್ದರೂ ಕಳ್ಳತನ ಪ್ರಕರಣಗಳು ನಡೆಯುತ್ತಿವೆ. ಇನ್ನು ಪೊಲೀಸರಿಗೆ ಕಳ್ಳತನ ಪ್ರಕರಣಗಳನ್ನು ಬೇಧಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಸಿಸಿಟಿವಿ ಕ್ಯಾಮರಾವಿದ್ದರು ರಿಕಾರ್ಡ್ ಮಾತ್ರ ಆಗುತ್ತಿಲ್ಲ. ಹೀಗಾಗಿ ಪೊಲೀಸರು ಕಳ್ಳತನ ಕೇಸ್ ಬೇಧಿಸಲು ಹರಸಹಾಸ ಪಡುವಂತಾಗಿದೆ.

ಯಾದಗಿರಿ ನಗರದಲ್ಲಿ ನಡೆಯುವ ಪ್ರಕರಣಗಳನ್ನು ಬೇಧಿಸಲು ಅನುಕೂಲ ಆಗುತ್ತದೆ ಎನ್ನುವ ಕಾರಣಕ್ಕೆ ಸಿಸಿಟಿವಿ ಕ್ಯಾಮರಗಳನ್ನು ಕುರಿಸಲಾಗಿದೆ. ಆದರೆ ಕ್ಯಾಮರಗಳು ವರ್ಕ್ ಆಗುತ್ತಿಲ್ಲ ಎನ್ನುವ ಬಗ್ಗೆ ಗಮನಕ್ಕೆ ಬಂದಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಕ್ಯಾಮರಾಗಳನ್ನು ಕಾರ್ಯನಿರ್ವಹಿಸುವಂತೆ ಮಾಡಲಾಗುತ್ತದೆ ಎಂದು ಯಾದಗಿರಿ ಎಸ್ ಪಿ ಡಾ.ಸಿ ಬಿ ವೇದಮೂರ್ತಿ ಹೇಳಿದ್ದಾರೆ.

ವರದಿ: ಅಮೀನ್ ಹೊಸುರ್

ಇದನ್ನೂ ಓದಿ: ಮಂಗಳೂರಿನಲ್ಲಿ ಮಗನ ಮೇಲೆ ಅಪ್ಪನಿಂದ ಫೈರಿಂಗ್ ಪ್ರಕರಣ; ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ

ವಿಜಯಪುರ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್​ಪೋಸ್ಟ್; ತಪಾಸಣೆ ನಡೆಸದೆ ಸಿಬ್ಬಂದಿ ನಿರ್ಲಕ್ಷ್ಯ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ