AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ

ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿದ್ದ ಮುತ್ಯಾ ಮೊದಲು ವಿಡಿಯೋ ಬಿಡುಗಡೆ ಮಾಡಿ ತಾವು ಎಲ್ಲೂ ಹೋಗಿಲ್ಲ. ಭಯಪಡಬೇಡಿ ಎಂದು ಭಕ್ತರಿಗೆ ಸಂದೇಶ ರವಾನಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮುತ್ಯಾ ಪೊಲೀಸರ ಮುಂದೆ ಪ್ರತ್ಯಕ್ಷರಾಗಿದ್ದಾರೆ.

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ
ಮಲ್ಲಿಕಾರ್ಜುನ ಮುತ್ಯಾImage Credit source: Tv9 Kannada
ಅಮೀನ್​ ಸಾಬ್​
| Edited By: |

Updated on:Mar 05, 2026 | 3:06 PM

Share

ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ (pocso Case) ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿ(Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.

ನೋಟಿಸ್ ನೀಡಿ ಇಂದು (ಮಾರ್ಚ್ 05) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದು, ಅದರಂತೆ ಮುತ್ಯಾ ಹಾಜರಾದ ಬಳಿಕ ಮೆಡಿಕಲ್ ಟೆಸ್ಟ್​​ಗೆ ಒಳಪಡಿಸಲಾಗುತ್ತದೆ. ಬಳಿಕ ಪ್ರಕರಣದ ತನಿಖಾಧಿಕಾರಿ ಶಹಾಪುರ ಗ್ರಾಮೀಣ ಸರ್ಕಲ್ ಇನ್ಸ್ಪೆಕ್ಟರ್ ಶರಣಗೌಡ ನ್ಯಾಮಣ್ಣನವರ ನೇತೃತ್ವದಲ್ಲಿ ಮುತ್ಯಾ ಅವರನ್ನ ವಿಚಾರಣೆ ನಡೆಯಲಿದೆ. ಇನ್ನು ಒಂದು ವೇಳೆ ವಿಚಾರಣೆಗೆ ಸಹಕಾರ ನೀಡದಿದ್ದರೆ ಮುತ್ಯಾನನ್ನು ಬಂಧಿಸುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಫೋಕ್ಸೋ ಕೇಸ್​​ನಲ್ಲಿ 2 ಬೆಳವಣಿಗೆ: ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ

ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮುತ್ಯಾ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಯಾದಗಿರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿತ್ತು. ಈ ಪತ್ರದ ಬಳಿಕ ಫೆಬ್ರವರಿ 25ರಂದು ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಮುತ್ಯಾ ನಾಪತ್ತೆಯಾಗಿದ್ದ.

ಇನ್ನು ಪ್ರಕರಣ ಸಂಬಂಧ ಮುತ್ಯಾ ಯಾದಗಿರಿ ಜಿಲ್ಲಾ ಕೋರ್ಟ್​​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇದಕ್ಕೆ ಸರ್ಕಾರಿ ಪರ ವಕೀಲರು ಆಕ್ಷೇಪ ಸಲ್ಲಿಸಿದ್ದಾರೆ. ಹೀಗಾಗಿ ನ್ಯಾಯಾಲಯವು ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿದ್ದು, ಜಾಮೀನು ಸಿಗುತ್ತಾ ಇಲ್ಲಾ ಮುತ್ಯಾ ಜೈಲು ಪಾಲಾಗುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:21 pm, Thu, 5 March 26

Follow Us