AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಮೆರವಣಿಗೆ ತೆರಳುವಾಗ ಮುಸಲ್ಮಾನರಂತೆ ಸನ್ನದ್ಧರಾಗಿ ಹೋಗುವಂತೆ ಕರೆ

ಯಾದಗಿರಿಯ ಶಹಾಪುರದಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ ಸಿಂಹ, ‘ಹಿಂದೂಗಳಿಗೆ ಎಚ್ಚರಿಕೆ ಹಾಗೂ ಸಲಹೆ ಕೊಡಲು ಬಯಸ್ತೀನಿ. ಈ ಸರ್ಕಾರ ನಿಮ್ಮನ್ನ ರಕ್ಷಣೆ ‌ಮಾಡೋದಿಲ್ಲ, ಹೀಗಾಗಿ ಮುಸ್ಲಿಮರು ಹೇಗೆ ಪೆಟ್ರೋಲ್ ಬಾಂಬ್, ತಲ್ವಾರ್ ಬಳಸುತ್ತಾರೋ, ಹಾಗೇ ನೀವು ಕೂಡ ಸನ್ನದ್ಧರಾಗಿ‌ ಮೆರವಣಿಗೆ ಹೋಗಿ ಎಂದು ಕರೆ ಕೊಟ್ಟಿದ್ದಾರೆ.

ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಮೆರವಣಿಗೆ ತೆರಳುವಾಗ ಮುಸಲ್ಮಾನರಂತೆ ಸನ್ನದ್ಧರಾಗಿ ಹೋಗುವಂತೆ ಕರೆ
ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ
ಅಮೀನ್​ ಸಾಬ್​
| Edited By: |

Updated on:Sep 21, 2024 | 9:00 PM

Share

ಯಾದಗಿರಿ, ಸೆ.21: ಮುಸಲ್ಮಾನರಂತೆ ಪೆಟ್ರೋಲ್ ‌ಬಾಂಬ್, ಕಲ್ಲು ಹಿಡಿದು ಶೋಭಾಯಾತ್ರೆಗೆ ಹೋಗುವಂತೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹಿಂದೂಗಳಿಗೆ ಕರೆ ಕೊಟ್ಟಿದ್ದು, ಈ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. ಇಂದು(ಶನಿವಾರ) ಯಾದಗಿರಿಯ ಶಹಾಪುರದಲ್ಲಿ ಮಾತನಾಡಿದ ಅವರು, ‘ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗದಲ್ಲಿ ಬಹಳ ದೊಡ್ಡ ಶೋಭಾಯಾತ್ರೆ ಇದೆ. ಲಕ್ಷಾಂತರ ಜನ ಹಿಂದೂಗಳು ಭಾಗಿ ಆಗುತ್ತಾರೆ. ಹಿಂದೂಗಳಿಗೆ ಎಚ್ಚರಿಕೆ ಹಾಗೂ ಸಲಹೆ ಕೊಡಲು ಬಯಸ್ತೀನಿ. ಈ ಸರ್ಕಾರ ನಿಮ್ಮನ್ನ ರಕ್ಷಣೆ ‌ಮಾಡೋದಿಲ್ಲ, ಹೀಗಾಗಿ ಮುಸ್ಲಿಮರು ಹೇಗೆ ಪೆಟ್ರೋಲ್ ಬಾಂಬ್, ತಲ್ವಾರ್ ಬಳಸುತ್ತಾರೋ, ಹಾಗೇ ನೀವು ಕೂಡ ಸನ್ನದ್ಧರಾಗಿ‌ ಮೆರವಣಿಗೆ ಹೋಗಿ ಎಂದು ಕರೆ ಕೊಟ್ಟಿದ್ದಾರೆ.

ಇನ್ನು ನಾಗಮಂಗಲದಲ್ಲಿ ಒಂದು ವಾರದ ಹಿಂದೆ ನಡೆದ ಘಟನೆ ನೋಡಿದರೆ ರಾಜ್ಯ ಸರ್ಕಾರಕ್ಕೆ ಗಣೇಶ ಮೆರವಣಿಗೆ, ಹಿಂದೂಗಳ ಹಬ್ಬ ಹರಿದಿನ ನಡೆಯುವುದು ಇಷ್ಟವಿಲ್ಲ ಎಂಬ ಸಂದೇಶವನ್ನ ನಾಗಮಂಗಲ ಘಟನೆ ‌ಮೂಲಕ ಹೊರ ಹಾಕಿದೆ. ಕಳೆದ ವರ್ಷ ನಾಗಮಂಗಲದ ಮೈಸೂರು ರಸ್ತೆ ಬಳಿ ದರ್ಗಾ ಎದುರು ಗಲಾಟೆ ಆಗಿತ್ತು. ಅನಗತ್ಯವಾಗಿ ಮುಸಲ್ಮಾನರು ಕಲ್ಲು ತೂರಾಟ ಮಾಡಿದ್ದರು. ಈ ವರ್ಷ ಅದೇ ರಸ್ತೆಯಲ್ಲಿ ಗಣೇಶ ಮೆರವಣಿಗೆ ಹೋಗುತ್ತದೆ ಎಂದು  ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಬೇಕಿತ್ತು. ಆದ್ರೆ, ಅದೇ ರಸ್ತೆಯಲ್ಲಿ ಈ ಬಾರಿ ಮೆರವಣಿಗೆ ಹೋಗಬೇಕಾದರೆ ಕಲ್ಲು ತೂರಾಟ ಮಾತ್ರವಲ್ಲ, ಪೆಟ್ರೋಲ್ ಬಾಂಬ್ ಹಾಕಿ ಕಲ್ಲು, ಚಪ್ಪಲಿ ಬಿಸಾಡಿ ತಲ್ವಾರ್ ತೋರಿಸಿದರು. ಹಾಗೇ ಹಿಂದೂಗಳ ಅಂಗಡಿ ಟಾರ್ಗೆಟ್ ‌ಮಾಡಿ ಸುಟ್ಟು ಹಾಕಿದರು. ಇಷ್ಟಾದರೂ ಸಹ ಅದೇನೂ ಆಕಸ್ಮಿಕ ಘಟನೆ ಎನ್ನುವ ರೀತಿ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಇತ್ತು.

ಇದನ್ನೂ  ಓದಿ:ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವು ಹಿಡಿಯಬೇಕಾಗುತ್ತೆ: ಪ್ರತಾಪ್ ಸಿಂಹ

ಈ ರಾಜ್ಯದ ಗೃಹ ಸಚಿವ ಪರಮೇಶ್ವರ ಹಾಗೂ ರಾಜ್ಯದ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ಅವರಿಗೆ ಹಿಂದೂಗಳ ಬಗ್ಗೆ ಯಾವುದೇ ಸದಾಭಿಪ್ರಾಯವಿಲ್ಲ. ನಿಷ್ಠುರ ಭಾವನೆ ಇಟ್ಟಕೊಂಡು ನಿಷ್ಠೂರವಾಗಿಯೇ ನಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲೂ ಸಿದ್ದರಾಮಯ್ಯ ಅವರಿಗೆ ಗಣೇಶ ಮೆರವಣಿಗೆ ನಡೆಯೋದು ಇಷ್ಟವಿಲ್ಲ. ಸಿದ್ದರಾಮಯ್ಯ ‌ಮೊದಲಿನಿಂದಲೂ ಮುಸಲ್ಮಾನರ ಓಲೈಕೆ ಮಾಡ್ತಿದ್ದಾರೆ. ಸಿಎಂ ಅವರೇ ನಿಮಗೆ ಹಿಂದೂಗಳು ಓಟ್ ಹಾಕಿಲ್ವಾ?, 39 ಜನ ವೀರಶೈವ ಸಮಾಜದ ಶಾಸಕರು ನಿಮಗೆ ಬೆಂಬಲ ಕೊಟ್ಟಿಲ್ವಾ? ಆದ್ರೂ ನೀವು‌ ಮಾತೇತ್ತಿದ್ದರೆ ಹಿಂದೂಳಿದವರು ಎಂದು ಮಾತಾಡುತ್ತೀರಿ. ಹಿಂದೂಗಳ ಬಗ್ಗೆ ಧ್ವನಿ ಎತ್ತುವವರನ್ನ ಜಿಲ್ಲೆಗೆ ಬಾರದಂತೆ ನಿಷೇದಾಜ್ಞೆ ಹೊರಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಸೀದಿಗಳಿಂದ‌, ಮೂಲ್ಲಾಗಳಿಂದ ಎಂಥಂತಹ ಪ್ರಚೋದನಾಕಾರಿ ಹೇಳಿಕೆ ಬಂದರೂ ಕೂಡ ರಾಜ್ಯ ಸರ್ಕಾರ ಒಂದೇ ಒಂದು ದಿನಕ್ಕೂ‌ ಅವರ ವಿರುದ್ಧ ಆ್ಯಕ್ಷನ್ ತೆಗೆದುಕೊಳ್ಳಲಿಲ್ಲ. ಮೊನ್ನೆ ‌ಪುನೀತ್, ಶರಣ ಪಂಪ್ ವೆಲ್ ಹುಡುಕಿಕೊಂಡು ಆರ್ ಎಸ್ ಎಸ್ ಕಚೇರಿಗೆ ನುಗ್ಗಿದರು. ಆದರೆ, ನಾಗಮಂಗಲ ಗಲಾಟೆಯಲ್ಲಿ ಪೆಟ್ರೋಲ್ ಬಾಂಬ್, ತಲ್ವಾರ್ ಎಲ್ಲಿಂದ ಬಂತು ಎಂದು ಮಸೀದಿಗೆ ನುಗ್ಗಿದ್ರಾ?. ಮಸೀದಿಗೆ ನುಗ್ಗೋಕೆ ಇವರ ಕೈ ಯಿಂದ ಆಗೋಲ್ಲ. ಆದರೆ ಹಿಂದೂಗಳನ್ನ ಟಾರ್ಗೆಟ್ ‌ಮಾಡೋಕೆ ಪ್ರಯತ್ನ ‌ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Sat, 21 September 24

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು