AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ಪರಶುರಾಮ ಸಾವು: ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿಯನ್ನು ಬಂಧಿಸುವಂತೆ ಸಿಎಂಗೆ ಪತ್ರ

ಯಾದಗಿರಿ ಪಿಎಸ್​ಐ ಪರಶುರಾಮ ಸಾವು ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ರಾಜಕೀಯ ವಾಗ್ಯುದ್ಧಗಳಿಗೂ ಕಾರಣವಾಗಿತ್ತು. ಪಿಎಸ್​ಐ ಪರಶುರಾಮ ಮೃತಪಟ್ಟು 45 ದಿನಗಳು ಕಳೆದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ವಿಧಾನ ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಿಎಸ್​ಐ ಪರಶುರಾಮ ಸಾವು: ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿಯನ್ನು ಬಂಧಿಸುವಂತೆ ಸಿಎಂಗೆ ಪತ್ರ
ಛಲುವಾದಿ ನಾರಾಯಣಸ್ವಾಮಿ, ಪಿಎಸ್​ಐ ಪರಶುರಾಮ
ಅಮೀನ್​ ಸಾಬ್​
| Edited By: |

Updated on:Sep 23, 2024 | 2:56 PM

Share

ಯಾದಗಿರಿ, ಸೆಪ್ಟೆಂಬರ್​ 23: ಪಿಎಸ್ಐ ಪರಶುರಾಮ (PSI Parashuram) ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ (Chenna Reddy) ಹಾಗೂ ಪುತ್ರ ಪಂಪನಗೌಡರನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ವಿಧಾನ ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಪತ್ರ ಬರೆದಿದ್ದಾರೆ. ಅಲ್ಲದೇ, ಪಿಎಸ್​ಐ ಪರಶುರಾಮ ಅವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದರು. ಆದರೆ ಇನ್ನುವರೆಗೂ ಪರಿಹಾರ ನೀಡಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಪಿಎಸ್‌ಐ ಪರಶುರಾಮ್ ಅವರ ಸ್ವಗ್ರಾಮಕ್ಕೆ ಆಗಸ್ಟ್ 08 ರಂದು ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ಸೂಕ್ತ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿರುವುದು ಗಮನಿಸಿದ್ದೇನೆ. ಆದರೆ ಆಶ್ವಾಸನೆಯನ್ನು ನೀಡಿ ಸುಮಾರು 45 ದಿನಗಳು ಕಳೆದರೂ ಕೂಡ ಅವರಿಗೆ ಯಾವುದೇ ರೀತಿಯ ಪರಿಹಾರ ನೀಡಿದೇ ಇರುವುದು ಮತ್ತು ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಇರುವುದೇ ಖೇಧಕರ ವಿಷಯವಾಗಿದೆ.

ಮೃತ ಪಿಎಸ್‌ಐ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ಇವರುಗಳ ವಿರುದ್ಧ ಜಾತಿ ನಿಂದನೆ (ಭಾರತೀಯ ನೀತಿ ಸಂಹಿತೆ  2023 (ಯು/ಎಸ್​-352, 108, 3(5)); ಅಟ್ರಾಸಿಟಿ ಕಾಯ್ದೆ, 1989 (ಯು/ಎಸ್​- 3(2(ವಿ), 3(1)(ಆರ್​(ಎಸ್​)) ಅಡಿಯಲ್ಲಿ ದೂರು ದಾಖಲಾದರೂ ಸಹ ಇದುವರೆಗೂ ಅವರ ವಿಚಾರಣೆ ನಡೆದಿಲ್ಲ ಹಾಗೂ ಅವರನ್ನು ಬಂಧಿಸಿ ವಿಚಾರಣೆಯನ್ನು ನಡೆಸುವ ಕಾರ್ಯವು ಆಗಿಲ್ಲ.

ಇದನ್ನೂ ಓದಿ: ಪಿಎಸ್​ಐ ಪರಶುರಾಮ ಸಾವು ಕೇಸ್​: ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಆದ್ದರಿಂದ ಮೃತ ಪಿಎಸ್‌ಐ ಪರಶುರಾಮ್ ಅವರ ಕುಟುಂಬಕ್ಕೆ ಅಪಾರವಾದ ಅನ್ಯಾಯವಾಗಿದೆ. ಹೀಗಾಗಿ ತಾವುಗಳು ನೀಡಿರುವ ಆಶ್ವಾಸನೆಗಳನ್ನು ಹಾಗೂ ಪರಿಹಾರಗಳನ್ನು ತಕ್ಷಣ ಪೂರೈಸಬೇಕು ಮತ್ತು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ಇವರ ವಿರುದ್ಧ ವಿಳಂಬ ನೀತಿ ಅನುಸರಿಸದೇ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಏನಿದು ಪ್ರಕರಣ?

ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಸಾವು ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗುತ್ತಿದೆ. ಪಿಎಸ್‌ಐ ವರ್ಗಾವಣೆ ವಿಚಾರವಾಗಿ ಶಾಸಕ ಚೆನ್ನಾರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ವರ್ಗಾವಣೆಗಾಗಿ ಭಾರೀ ಲಂಚದ ಬೇಡಿಕೆ ಇಡಲಾಗಿತ್ತು. ಈ ವಿಚಾರವಾಗಿಯೇ ಪಿಎಸ್​ಐ ಪರಶುರಾಮ ಮೃತಪಟ್ಟಿದ್ದಾರೆ ಎಂದು ಪರಶುರಾಮ ಅವರ ಕುಟುಂಬಸ್ಥರು ಆರೋಪಿಸಿದ್ದರು. ಹೀಗಾಗಿ, ಈ ನಿಗೂಢ ಸಾವಿನ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Mon, 23 September 24

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್