ನೀರಿನ ವಿಚಾರಕ್ಕೆ ಕ್ವಾರಂಟೈನ್ ವಲಸೆ ಕಾರ್ಮಿಕರ ನಡುವೆ ಮಾರಾಮಾರಿ
ಯಾದಗಿರಿ: ಬೋರ್ವೆಲ್ನಲ್ಲಿ ನೀರಿಗಾಗಿ ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರು ಕಲ್ಲು ಎಸೆದು ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿಯ ಡಿಡಿಯು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ವಾಪಸಾಗಿದ್ದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಮುಂಭಾಗದಲ್ಲಿರುವ ಬೋರವೆಲ್ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಮಹಿಳೆಯರ ನಡುವೆ ಜಗಳ ಶುರುವಾಗಿದೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಜಗಳ ಬಿಡಿಸಲು ಹೋಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಕಲ್ಲನ್ನು ಎಸೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕರ ಮಾರಾಮಾರಿ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ.

ಯಾದಗಿರಿ: ಬೋರ್ವೆಲ್ನಲ್ಲಿ ನೀರಿಗಾಗಿ ಕ್ವಾರಂಟೈನ್ ಕೇಂದ್ರದಲ್ಲಿ ವಲಸೆ ಕಾರ್ಮಿಕರು ಕಲ್ಲು ಎಸೆದು ಹೊಡೆದಾಡಿಕೊಂಡಿರುವ ಘಟನೆ ಯಾದಗಿರಿಯ ಡಿಡಿಯು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದಿಂದ ವಾಪಸಾಗಿದ್ದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಮುಂಭಾಗದಲ್ಲಿರುವ ಬೋರವೆಲ್ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಮಹಿಳೆಯರ ನಡುವೆ ಜಗಳ ಶುರುವಾಗಿದೆ. ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ.
ಈ ವೇಳೆ ವ್ಯಕ್ತಿಯೋರ್ವ ಜಗಳ ಬಿಡಿಸಲು ಹೋಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಕಲ್ಲನ್ನು ಎಸೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕರ ಮಾರಾಮಾರಿ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ.
Published On - 11:24 am, Thu, 28 May 20




