AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ದಾಖಲೆ ಪತ್ರಕ್ಕೆ ಸತಾಯಿಸುತ್ತಿರುವ ಅಧಿಕಾರಿಗಳು, ಬಸ್ ನಿಲ್ದಾಣದಲ್ಲೇ‌ ವಾಸ ಮಾಡಿರುವ ಕುಟುಂಬ

ಜಮೀನು ವರ್ಗಾವಣೆಯ ಮೂಲ ನಕಲು ಪ್ರತಿ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಅಧಿಕಾರಿಗಳ‌ ನಿರ್ಲಕ್ಷ್ಯ ಖಂಡಿಸಿ ಕುಟುಂಬದ ಸದಸ್ಯರು ಬಸ್ ನಿಲ್ದಾಣದಲ್ಲೇ‌ ವಾಸ ಮಾಡ್ತಾಯಿದ್ದಾರೆ.

ಜಮೀನು ದಾಖಲೆ ಪತ್ರಕ್ಕೆ ಸತಾಯಿಸುತ್ತಿರುವ ಅಧಿಕಾರಿಗಳು, ಬಸ್ ನಿಲ್ದಾಣದಲ್ಲೇ‌ ವಾಸ ಮಾಡಿರುವ ಕುಟುಂಬ
ಜಮೀನು ದಾಖಲೆ ಪತ್ರಕ್ಕೆ ಸತಾಯಿಸುತ್ತಿರುವ ಅಧಿಕಾರಿಗಳು, ಬಸ್ ನಿಲ್ದಾಣದಲ್ಲೇ‌ ವಾಸ ಮಾಡಿರುವ ಕುಟುಂಬ
TV9 Web
| Updated By: ಸಾಧು ಶ್ರೀನಾಥ್​|

Updated on:Sep 24, 2021 | 8:51 AM

Share

ಯಾದಗಿರಿ: ಜಮೀನು ವರ್ಗಾವಣೆಯ ಮೂಲ ನಕಲು ಪ್ರತಿ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಅಧಿಕಾರಿಗಳ‌ ನಿರ್ಲಕ್ಷ್ಯ ಖಂಡಿಸಿ ಕುಟುಂಬದ ಸದಸ್ಯರು ಬಸ್ ನಿಲ್ದಾಣದಲ್ಲೇ‌ ವಾಸ ಮಾಡ್ತಾಯಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಪ್ರಮೀಳಾ ಹಾಗೂ ವೆಂಕಟರಡ್ಡಿ ದಂಪತಿ ಬಸ್ ನಿಲ್ದಾಣದಲ್ಲೇ ವಾಸ್ತವ್ಯ ಹೂಡಿದ್ದಾರೆ. ಇವರು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆಡಪಳ್ಳಿ ನಿವಾಸಿಗಳು.

ಏನಿದರ ವೃತ್ತಾಂತ: ಪ್ರಮೀಳಾ ಅವರ ತಂದೆ- ತಾಯಿಗೆ ಇಬ್ಬರು ಹೆಣ್ಣು ಮಕ್ಕಳು ಮಾತ್ರ ಇದ್ದಾರೆ. ಹೀಗಾಗಿ ‌ಪಿತ್ರಾರ್ಜಿತ ಆಸ್ತಿಯ ದಾಖಲೆ ಪಡೆಯಲು ಪ್ರಮೀಳಾ ಅರ್ಜಿ ಸಲ್ಲಿಸಿದ್ದಾರೆ. ಪ್ರಮೀಳಾ ಪಿತ್ರಾರ್ಜಿತ ಆಸ್ತಿ ಗುರುಮಠಕಲ್‌ ತಾಲೂಕಿನ ಹಿಮಾಲಪುರ ಗ್ರಾಮದಲ್ಲಿದೆ. ಪ್ರಮೀಳಾ- ವೆಂಕಟರಡ್ಡಿ ದಂಪತಿ ಹೈದರಾಬಾದ್ ನಲ್ಲಿ ಕೂಲಿ ಕೆಲಸ‌ ಮಾಡಿಕೊಂಡು ಜೀವನ ಕಟ್ಟಿಕೊಳ್ಳುತ್ತಿದ್ದಾರೆ.

ಇದೆ ಸೆಪ್ಟೆಂಬರ್ 6 ರಂದು ಗುರುಮಠಕಲ್‌ ತಹಸೀಲ್ದಾರ ಕಚೇರಿಯಲ್ಲಿ ಜಮೀನು ದಾಖಲೆ ಪಡೆಲು ದಂಪತಿ ಅರ್ಜಿ ಹಾಕಿದ್ದರು. ಆದರೆ ಇಲ್ಲಿನ ಅಧಿಕಾರಿಗಳು ದಾಖಲೆಗಳನ್ನ ನೀಡದೆ ದಂಪತಿಯನ್ನು ದಿನಾ ಕಚೇರಿಗೆ ಅಲೆದಾಡಿಸುತ್ತಿದ್ದಾರೆ. ಹಾಗಾಗಿ ಪ್ರಮೀಳಾ- ವೆಂಕಟರಡ್ಡಿ ದಂಪತಿ 16 ದಿನಗಳಿಂದ ಬಸ್ ನಿಲ್ದಾಣದಲ್ಲೇ ವಾಸ್ತವ್ಯ ಹೂಡಿದ್ದಾರೆ.

ಬಸ್ ನಿಲ್ದಾಣದಲ್ಲೇ ಇದ್ದು ನಿತ್ಯ ತಹಸೀಲ್ ಕಚೇರಿಗೆ ಅಲೆಯುತ್ತಿದ್ದಾರೆ ಈ ದಂಪತಿ. ಆದರೆ ದಂಪತಿ ಬಸ್ ನಿಲ್ದಾಣದಲ್ಲಿ ನರಕಯಾತನೆ ಅನುಭವಿಸುತ್ತಿದ್ದರೂ ಅಧಿಕಾರಿಗಳು ಇವರತ್ತ ತಿರುಗಿ ನೋಡಿಲ್ಲ.

Also Read: ಸರ್ ನಮ್ಮ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನಿಯೋಜನೆ ಮಾಡಿ ಎಂದು ಶಿಕ್ಷಣಾಧಿಕಾರಿ ಕಾಲು ಹಿಡಿದ ವಿದ್ಯಾರ್ಥಿಗಳು

ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡಲು ಹಣವಿಲ್ಲವೆಂದು ಆತ್ಮಹತ್ಯೆ ದೊಡ್ಡಬಳ್ಳಾಪುರ ಪ್ರಿಯದರ್ಶಿನಿ ಬಡಾವಣೆಯಲ್ಲಿ ಘಟನೆ

(revenue department officials fail to provide documents couple reside in the middle of bus stand in gurmitkal yadgir)

Published On - 8:20 am, Fri, 24 September 21

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ