AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ ಸೇವಾಲಾಲ್ ಜಯಂತಿಗೆ ಹೊಸ ಮೆರುಗು: ಡಿಜೆ ಸದ್ದಿಗೆ ಲಲನೆಯರ ಸ್ಟೆಪ್ಸ್​

ಯಾದಗಿರಿ: ತಾವಾಯ್ತು.. ತಮ್ಮ ಕೆಲ್ಸ ಆಯ್ತು. ತಮ್ಮ ತಾಂಡಾ ಆಯ್ತು.. ಇಷ್ಟೇ ಅವ್ರ ಬದುಕು.. ಆದ್ರೆ ವರ್ಷಕ್ಕೊಮ್ಮೆ ಅವ್ರನ್ನೆಲ್ಲಾ ಒಟ್ಟುಗೂಡಿಸೋಕೇ ಅಂತಾನೆ ಸೇವಾಲಾಲ್ ಜಯಂತಿ ಬರುತ್ತೆ. ಆ ಜಯಂತಿಯಲ್ಲಿ ಮಾತ್ರ ಎಲ್ರೂ ಒಟ್ಟಿಗೆ ಸೇರಿ ಸಂಭ್ರಮಿಸ್ತಾರೆ. ಆದ್ರೆ ಆ ಸಂಭ್ರಮ ಅವ್ರಿಗೆ ಮಾತ್ರವಲ್ದೇ ನೋಡೋರಿಗೂ ಖುಷಿ ಕೊಡುತ್ತೆ. ಫುಲ್ ಜೋಶ್.. ಎಲ್ಲರ ಮುಖದಲ್ಲೂ ಖುಷಿಯೋ ಖುಷಿ. ವರ್ಷಕ್ಕೊಮ್ಮೆ ಸಿಗೋ ಇಂಥಾ ಚಾನ್ಸ್​ನ ಮಿಸ್ ಮಾಡ್ಕೊಳ್ಳೋ ಮಾತೇ ಇಲ್ಲ. ಹಿಂಗಾಗೇ ಆಗಿದ್ದಾಗ್ಲಿ ಅಂತಾ ಎಲ್ರೂ ಕುಣಿದು ಕುಪ್ಪಳಿಸ್ತಿದ್ರು. ಯಾದಗಿರಿ ಜಿಲ್ಲೆ […]

ಸಂತ ಸೇವಾಲಾಲ್ ಜಯಂತಿಗೆ ಹೊಸ ಮೆರುಗು: ಡಿಜೆ ಸದ್ದಿಗೆ ಲಲನೆಯರ ಸ್ಟೆಪ್ಸ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 16, 2020 | 4:04 PM

Share

ಯಾದಗಿರಿ: ತಾವಾಯ್ತು.. ತಮ್ಮ ಕೆಲ್ಸ ಆಯ್ತು. ತಮ್ಮ ತಾಂಡಾ ಆಯ್ತು.. ಇಷ್ಟೇ ಅವ್ರ ಬದುಕು.. ಆದ್ರೆ ವರ್ಷಕ್ಕೊಮ್ಮೆ ಅವ್ರನ್ನೆಲ್ಲಾ ಒಟ್ಟುಗೂಡಿಸೋಕೇ ಅಂತಾನೆ ಸೇವಾಲಾಲ್ ಜಯಂತಿ ಬರುತ್ತೆ. ಆ ಜಯಂತಿಯಲ್ಲಿ ಮಾತ್ರ ಎಲ್ರೂ ಒಟ್ಟಿಗೆ ಸೇರಿ ಸಂಭ್ರಮಿಸ್ತಾರೆ. ಆದ್ರೆ ಆ ಸಂಭ್ರಮ ಅವ್ರಿಗೆ ಮಾತ್ರವಲ್ದೇ ನೋಡೋರಿಗೂ ಖುಷಿ ಕೊಡುತ್ತೆ. ಫುಲ್ ಜೋಶ್.. ಎಲ್ಲರ ಮುಖದಲ್ಲೂ ಖುಷಿಯೋ ಖುಷಿ. ವರ್ಷಕ್ಕೊಮ್ಮೆ ಸಿಗೋ ಇಂಥಾ ಚಾನ್ಸ್​ನ ಮಿಸ್ ಮಾಡ್ಕೊಳ್ಳೋ ಮಾತೇ ಇಲ್ಲ. ಹಿಂಗಾಗೇ ಆಗಿದ್ದಾಗ್ಲಿ ಅಂತಾ ಎಲ್ರೂ ಕುಣಿದು ಕುಪ್ಪಳಿಸ್ತಿದ್ರು.

ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣ ನಿನ್ನೆ ಅಕ್ಷರಶಃ ಬಂಜಾರ ಮಯವಾಗಿತ್ತು. ಎತ್ತ ನೋಡಿದ್ರು ಕಲರ್ ಫುಲ್ ಉಡುಗೆ ತೊಟ್ಟ ಯುವಕ ಯುವತಿಯರೆ ಕಾಣ್ತಿದ್ರು. ಡಿಜೆ ಸೌಂಡಿಗೆ ಮನಬಿಚ್ಚಿ ಕುಣಿದಿದ್ರು. ಸಂತ ಸೇವಾಲಾಲ್​ರ 281ನೇ ಜಯಂತ್ಯೋತ್ಸವದ ಹಿನ್ನೆಲೆಯಲ್ಲಿ ಸೇವಾಲಾಲ್ ಭಾವಚಿತ್ರವನ್ನ ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಸರ್ಕಾರಿ ಫ್ರೌಡಶಾಲೆಯ ಮೈದಾನದವರೆಗೆ ಮೆರವಣಿಗೆ ಮಾಡಲಾಯ್ತು.

ಮೆರವಣಿಗೆಗೆ ರಂಗು ನೀಡಿದ ಗೋಧಿ ಸಸಿ: ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧ ತಾಂಡಾಗಳಿಂದ ಬಂದಿದ್ದ ಸಾವಿರಾರು ಮಂದಿ ಭಾಗಿಯಾಗಿದ್ರು. ಅದ್ರಲ್ಲೂ ಕಲರ್​ಫುಲ್ ಡ್ರೆಸ್​ಗಳಲ್ಲಿ ರೆಡಿಯಾಗಿ ಕುಂಭ ಮತ್ತು ಸಸಿಗಳನ್ನ ಹೊತ್ತು ಸಾಗುತ್ತಿದ್ದ ನೋಟವಂತೂ ಎಲ್ಲರ ಗಮನ ಸೆಳೆದಿತ್ತು. ಇನ್ನು ಜಯಂತ್ಯೋತ್ಸವ ದಿನಕ್ಕಿಂತ ಮೊದಲು 21 ದಿನಗಳ ಕಾಲ ಮಹಿಳೆಯರು ಉಪವಾಸವಿದ್ದು ಗೋಧಿ ಸಸಿ ಬೆಳೆಯುತ್ತಾರೆ. ಜಯಂತಿ ದಿನ ಗೋದಿ ಸಸಿಯನ್ನ ತಲೆ ಮೇಲೆ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆ ರಂಗು ನೀಡುತ್ತಾರೆ. ಪ್ರತಿಯೊಂದು ತಾಂಡಾದ ಹೆಣ್ಮಕ್ಕಳು ಬಣ್ಣದ ಬಟ್ಟೆಗಳನ್ನ ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಾರೆ.

ಇನ್ನೊಂದು ವಿಶೇಷ ಅಂದ್ರೆ ಒಂದು ತಾಂಡಾದ ಯುವತಿಯರು ಧರಿಸುವ ಬಣ್ಣದ ಬಟ್ಟೆಯನ್ನ ಇನ್ನೊಂದು ತಾಂಡಾದ ಯುವತಿಯರು ಧರಿಸುವ ಹಾಗಿಲ್ಲ. ಹೀಗಾಗಿ ಜಿಲ್ಲೆಯ ಎಲ್ಲಾ ತಾಂಡಾ ನಿವಾಸಿಗಳು ಒಂದೊಂದು ರೀತಿ ರೆಡಿಯಾಗಿರ್ತಾರೆ. ಜೊತೆಗೆ ನಾಸಿಕ್​ನಿಂದ ಬಂದಿದ್ದ ಡೋಲು ಟೀಂ ಕೂಡ ಇವ್ರ ಖುಷಿಯನ್ನ ಮತ್ತಷ್ಟು ಹೆಚ್ಚಿಸಿತ್ತು. ಸದ್ಯ ಸೇವಾಲಾಲ್ ಜಯಂತಿ ಹೆಸ್ರಲ್ಲಿ ಜಿಲ್ಲೆಯ ಎಲ್ಲಾ ತಾಂಡಾ ನಿವಾಸಿಗಳು ಒಟ್ಟಿಗೆ ಸೇರಿದ್ರು. ಕುಂಭ ಹಾಗೂ ಗೋಧಿ ಸಸಿ ಮೆರವಣಿಗೆ ಒಂದ್ಕಡೆಯಾದ್ರೆ ಕುಣಿದು ಕುಪ್ಪಳಿಸೋರ ನೋಟ ಮತ್ತಷ್ಟು ಖುಷಿ ಕೊಟ್ಟಿತ್ತು.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ