AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ದಿನಗಳಿಂದ ಊಟವಿಲ್ಲದೆ ಪರದಾಡಿದ ಅಲ್ಪಸಂಖ್ಯಾತ ಹಾಸ್ಟೆಲ್​ನ ವಿದ್ಯಾರ್ಥಿನಿಯರು

ಶಹಾಪುರದ ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ, ಶೌಚಾಲಯ ಸ್ವಚ್ಛತೆ, ರಕ್ಷಣೆ ಇಲ್ಲದೆ ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿನಿಯರು ಬುಧವಾರ ರಾತ್ರಿ ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿದರು.

8 ದಿನಗಳಿಂದ ಊಟವಿಲ್ಲದೆ ಪರದಾಡಿದ ಅಲ್ಪಸಂಖ್ಯಾತ ಹಾಸ್ಟೆಲ್​ನ ವಿದ್ಯಾರ್ಥಿನಿಯರು
ಮೂಲಭೂತ ಸೌಕರ್ಯ ಇಲ್ಲದೆ ವಿದ್ಯಾರ್ಥಿನಿಯರ ಪ್ರತಿಭಟನೆ
ಅಮೀನ್​ ಸಾಬ್​
| Edited By: |

Updated on: Jul 11, 2024 | 8:54 AM

Share

ಯಾದಗಿರಿ, ಜುಲೈ 11: ಶಹಾಪುರದ (Shapura) ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ (Post Metric Minorities Girls Hostel) ವಿದ್ಯಾರ್ಥಿನಿಯರು (Students) ಕಳೆದ ಎಂಟು ದಿನಗಳಿಂದ ಊಟವಿಲ್ಲದೆ ಪರದಾಡುತ್ತಿದ್ದಾರೆ. ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ, ಶೌಚಾಲಯ ಸ್ವಚ್ಛತೆ, ರಕ್ಷಣೆ ಇಲ್ಲದೆ ವಿದ್ಯಾರ್ಥಿನಿಯರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿನಿಯರು ಬುಧವಾರ ರಾತ್ರಿ ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿದರು.

ರಾತ್ರಿ 9 ಗಂಟೆಯಾದರೂ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಊಟ ನೀಡುವುದಿಲ್ಲ. ಅಡುಗೆ ಸಹಾಯಕಿಯರು ತಮ್ಮ ಸ್ವಂತ ಹಣದಲ್ಲಿ ತರಕಾರಿ ತಂದು ಅಡುಗೆ ಮಾಡುತ್ತಾರೆ. ಕಳೆದ ಆರು ತಿಂಗಳಿನಿಂದ ಶೌಚಾಲಯ ಸ್ವಚ್ಛ ಮಾಡಿಲ್ಲ. ಇದರಿಂದ ಶೌಚಾಲಯ ಗಬ್ಬೆದ್ದು ನಾರುತ್ತಿದೆ. ವಾಸನೆ ತಾಳಲಾರದೆ ಕೊನೆಗೆ ವಿದ್ಯಾರ್ಥಿನಿಯರೇ ಶೌಚಾಲಯ ಸ್ವಚ್ಛ ಮಾಡಿದ್ದಾರೆ. ವಸತಿ ನಿಲಯದಲ್ಲಿನ ಸಿಸಿ ಟಿವಿ ಕ್ಯಾಮೆರಾ ಕೆಟ್ಟು ಹೋಗಿ 6 ತಿಂಗಳಾಯಿತು. ವಾರ್ಡನ್ ಇಲ್ಲಿಯವರೆಗೆ ರಿಪೇರಿ ಮಾಡಿಸಿಲ್ಲ.

ಇದನ್ನೂ ಓದಿ: ಸರ್ಕಾರಿ ಶಾಲೆ ಮಕ್ಕಳಿಗೆ ಇನ್ನೂ ವಿತರಣೆ ಆಗದ ಶಾಲಾ ಸಮವಸ್ತ್ರ; ಕೆಲ ಮಕ್ಕಳಿಗೆ ಪಠ್ಯ ಪುಸ್ತಕವೂ ಇಲ್ಲ!

ಈ ಎಲ್ಲ ಸಮಸ್ಯೆಗಳಿಗೆ ತಿಲಾಂಜಲಿ ಹಾಡಬೇಕಾದ ವಸತಿ ನಿಲಯದ ಮೇಲ್ವಿಚಾರಕಿ ಶಾರದಾ ಈ ಕಡೆ ತಲೆ ಹಾಕುವುದಿಲ್ಲ. 15 ದಿನಗಳಿಗೊಮ್ಮೆ ಅಪರೂಪದ ಅತಿಥಿಯಂತೆ ಬಂದು ಹೋಗುತ್ತಾರೆ, ಬಿಟ್ಟರೆ ಸಮಸ್ಯೆಗಳನ್ನು ಗಮನಿಸುವುದಿಲ್ಲ. ಸಮಸ್ಯೆಗಳನ್ನು ಹೇಳು ಹೋದರೆ ವಾರ್ಡನ್​ ಶಾರದಾ ಮುಂದೆ ಹಿಂಸೆ ನೀಡುತ್ತಾರೆಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ವಾರ್ಡನ್ ಶಾರದಾ ಅವರು ನಮಗೆ ಬೇಕಾಗಿಲ್ಲ, ಬೇರೆಯವರನ್ನು ನೇಮಿಸಿ ಎಂದು ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದರು.

ವಾರ್ಡನ್ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹಿನ್ನೆಡೆಯಾಗುತ್ತಿದೆ. ಹೀಗಾಗಿ ವಸತಿ ನಿಲಯಕ್ಕೆ ಜಿಲ್ಲಾ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆಗೆ ಪರಿಹರಿಸುವಂತೆ ವಿದ್ಯಾರ್ಥಿನಿಯರು ಪಟ್ಟು ಹಿಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?