AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Surapura Assembly By Election Result 2024: ಸುರುಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಜಯ

Shorapur Assembly constituency: ಸುರುಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದೆ. ಬಿಜೆಪಿಯ ನರಸಿಂಹ ನಾಯಕ (ರಾಜುಗೌಡ) ಅವರನ್ನ ಕಾಂಗ್ರೆಸ್​ನ ದಿವಂಗತ ರಾಜಾ ವೆಂಕಟಪ್ಪ ನಾಯಕ್​ ಪುತ್ರ ರಾಜಾ ವೇಣುಗೋಪಾಲ ನಾಯಕ್​ ಅವರು ಸೋಲಿಸಿದ್ದಾರೆ. ಇಬ್ಬರ ಮಧ್ಯೆ ಪ್ರಭಲ ಪೈಪೋಟಿ ಏರ್ಪಟ್ಟಿತ್ತು. ಇದೀಗ ಮತದಾರ ಪ್ರಭುಗಳು ಕೈ ಹಿಡಿದಿದ್ದಾರೆ.

Surapura Assembly By Election Result 2024: ಸುರುಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಜಯ
ರಾಜಾ ವೇಣುಗೋಪಾಲ ನಾಯಕ್​, ರಾಜುಗೌಡ
ವಿವೇಕ ಬಿರಾದಾರ
| Edited By: |

Updated on:Jun 04, 2024 | 7:37 PM

Share

ಯಾದಗಿರಿ, ಜೂನ್​ 4: ಕಾಂಗ್ರೆಸ್​ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸುರಪುರ ಕ್ಷೇತ್ರ ವಿಧಾನಸಭೆ ಉಪಚುನಾವಣೆ (Surapura Assembly By Election) ಮತದಾನ ಮೇ7 ರಂದು ನಡೆದಿದೆ. ಇಂದು (ಜೂ 04) ಫಲಿತಾಂಶ  ಪ್ರಕಟವಾಗಿದ್ದು, ಕಾಂಗ್ರೆಸ್​ನ ರಾಜಾ ವೇಣುಗೋಪಾಲ ನಾಯಕ್​ ಅವರು ಗೆಲುವು ಸಾಧಿಸಿದ್ದಾರೆ. ರಾಜಾ ವೇಣುಗೋಪಾಲ ನಾಯಕ್ ಅವರಿಗೆ ಇದು ಮೊದಲನೇ ಚುನಾವಣೆಯಾಗಿದ್ದು ಬಿಜೆಪಿಯ ನರಸಿಂಹ ನಾಯಕ್ (ರಾಜುಗೌಡ) ಅವರನ್ನು ಸೋಲಿಸಿದ್ದಾರೆ. ಚುನಾವಣಾ ಆಯೋಗದ ಮಾಹಿತಿಯಂತೆ ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್‌ ಅವರು 1,14,886 ಮತಗಳನ್ನು ಪಡೆದರೆ, ಬಿಜೆಪಿಯ ರಾಜುಗೌಡ  ಅವರು 96,566 ಮತಗಳನ್ನು ಪಡೆದು ಸೋಲುಂಡರು.

2023ರಲ್ಲಿ ನಡೆದ ವಿಧಾಸಭೆ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ್​ ತಂದೆ, ದಿ. ರಾಜಾ ವೆಂಕಟಪ್ಪ ನಾಯಕ್​ ಅವರು 1,13,559 ಮತಗಳನ್ನು ಪಡೆದು ಗೆಲವು ಸಾಧಿಸಿದ್ದರು. ಬಿಜೆಪಿಯ ರಾಜುಗೌಡ 88,336 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ರಾಜಾ ವೆಂಕಟಪ್ಪ ನಾಯಕ್​ ಅವರು ರಾಜುಗೌಡ ಅವರನ್ನು 25 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ನರಸಿಂಹ ನಾಯಕ್​ (ರಾಜುಗೌಡ) ಅವರು 1,104,426 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ದಿ. ರಾಜಾ ವೆಂಕಟಪ್ಪ ನಾಯಕ್​ ಅವರು 81,858 ಮತಗಳನ್ನು ಪಡೆದಿದ್ದರು. ರಾಜುಗೌಡ ಅವರು ರಾಜಾ ವೆಂಕಟಪ್ಪ ನಾಯಕ್​ ಅವರನ್ನು 22 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 am, Tue, 4 June 24

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ