AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರಾತ್ರಿಯಿಂದ ಸುರಪುರ ದೇವಿಕೇರಾ ಜಾತ್ರೆ; ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ

ಯಾದಗಿರಿಯ ಸುರಪುರ ತಾಲೂಕಿನಲ್ಲಿ ಇಂದು ಮತ್ತು ನಾಳೆ ದೇವಿಕೇರಾ ಜಾತ್ರೆ ನಡೆಯಲಿದೆ. ಈ ಜಾತ್ರೆಯಲ್ಲಿ ಕೋಣಗಳನ್ನು ಬಲಿ ಕೊಡುವ ಹಾಗೂ ಅದರ ಮಾಂಸವನ್ನು ದಲಿತರಿಗೆ ತಿನ್ನಬೇಕು, ಇಲ್ಲವಾದರೆ ಬಹಿಷ್ಕಾರ ಹಾಕುವ ಅನಿಷ್ಟ ಪದ್ಧತೆ ಚಾಲ್ತಿಯಲ್ಲಿದೆ. ಇದನ್ನು ವಿರೋಧಿಸಿ ದಲಿತ ಸಮುದಾಯವು ದೂರು ನೀಡಿದ್ದವು. ನಿನ್ನೆ ಗ್ರಾಮದಲ್ಲಿ ಶಾಂತಿ ಸಭೆ ನಡೆದಿದ್ದು, ಕೋಣಗಳ ಬಲಿ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

ಇಂದು ರಾತ್ರಿಯಿಂದ ಸುರಪುರ ದೇವಿಕೇರಾ ಜಾತ್ರೆ; ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ
ಇಂದು ಮತ್ತು ನಾಳೆ ನಡೆಯುವ ಸುರಪುರ ದೇವಿಕೇರಾ ಜಾತ್ರೆಯಲ್ಲಿ ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ
ಅಮೀನ್​ ಸಾಬ್​
| Edited By: |

Updated on: Dec 18, 2023 | 2:42 PM

Share

ಯಾದಗಿರಿ, ಡಿ.18: ಜಿಲ್ಲೆಯ (Yadgir) ಸುರಪುರ ತಾಲೂಕಿನ ದೇವಿಕೇರಾ ಜಾತ್ರೆ (Devikera fair) ಇಂದು ರಾತ್ರಿಯಿಂದ ಆರಂಭಗೊಳ್ಳಲಿದೆ. ಈ ಜಾತ್ರೆಯಲ್ಲಿ ಕೋಣಗಳನ್ನು ಬಲಿ ಕೊಡುವ ಹಾಗೂ ಅದರ ಮಾಂಸವನ್ನು ದಲಿತರಿಗೆ ತಿನ್ನಬೇಕು, ಇಲ್ಲವಾದರೆ ಬಹಿಷ್ಕಾರ ಹಾಕುವ ಅನಿಷ್ಟ ಪದ್ಧತೆ ಚಾಲ್ತಿಯಲ್ಲಿದ್ದು, ಇದನ್ನು ವಿರೋಧಿಸಿ ದಲಿತ ಸಮುದಾಯವು ದೂರು ನೀಡಿತ್ತು. ಅದರಂತೆ, ಜಾತ್ರೆಯಲ್ಲಿ ಕೋಣಗಳ ಬಲಿ ತಡೆಯಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ದೇವಿಕೇರ ಗ್ರಾಮದಲ್ಲಿ ಗ್ರಾಮ ದೇವತೆಯ ಜಾತ್ರೆ ಇಂದು ರಾತ್ರಿ ಮತ್ತು ನಾಳೆ ನಡೆಯಲಿದೆ. ಕೋಣಗಳನ್ನು ಬಲಿ ಕೊಡುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಕೋಣಗಳ ಬಲಿ ಕೊಡದಂತೆ ಗ್ರಾಮದಲ್ಲಿ 80 ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ದೇವಿಕೇರಾ ಜಾತ್ರೆ: ಕೋಣಗಳ ಬಲಿ ಹೆಸರಲ್ಲಿ ಚಂದಾ ವಸೂಲಿ

ದೇವಸ್ಥಾನ ಸೇರಿದಂತೆ ವಿವಿಧ ಕಡೆ ಬಂದೋಬಸ್ತ್​ಗಾಗಿ ಯಾದಗಿರಿ ಎಸ್​ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದಾರೆ. ದಲಿತ ಸಮುದಾಯದ ದೂರಿನ ಅನ್ವಯ ನಿನ್ನೆ ಸುರಪುರ ತಹಶೀಲ್ದಾರ್ ವಿಜಯ ಕುಮಾರ್ ಗ್ರಾಮಕ್ಕೆ ಹೋಗಿ ಶಾಂತಿ ಸಭೆ ನಡೆಸಿದ್ದರು.

ಬಲಿಕೊಟ್ಟ ಕೋಣಗಳ ಮಾಂಸ ತಿನ್ನದ ದಲಿತರಿಗೆ ಗ್ರಾಮದಿಂದ ಬಹಿಷ್ಕಾರ

ದೇವಿಕೇರಾ ಗ್ರಾಮದಲ್ಲಿ ನಡೆಯುವ ದ್ಯಾಮವ್ವ, ಮರೆಮ್ಮ, ಪಾಲ್ಕಮ್ಮ ಗ್ರಾಮದೇವತೆಗಳ ಜಾತ್ರೆಯಲ್ಲಿ ಹತ್ತಾರು ಕೋಣಗಳನ್ನು ಬಲಿ ಕೊಡಲಾಗುತ್ತದೆ. ಬಲಿಕೊಟ್ಟ ಕೋಣಗಳ ಮಾಂಸವನ್ನು ದಲಿತರು ತಿನ್ನಬೇಕು, ಇಲ್ಲವಾದರೆ ಅಂತಹವರನ್ನು ಗ್ರಾಮದಿಂದ ಬಹಿಷ್ಕಾರ ಹಾಕಲಾಗುತ್ತದೆ. ಇದರ ವಿರುದ್ಧ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ ಬಣ) ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಅವರು ಜಿಲ್ಲಾಧಿಕಾರಿ, ಎಸ್​ಪಿ​​ಗೆ ದೂರು ನೀಡಿ ಮೂಢನಂಬಿಕೆ ತಡೆಯುವಂತೆ ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ