Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರಾತ್ರಿಯಿಂದ ಸುರಪುರ ದೇವಿಕೇರಾ ಜಾತ್ರೆ; ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ

ಯಾದಗಿರಿಯ ಸುರಪುರ ತಾಲೂಕಿನಲ್ಲಿ ಇಂದು ಮತ್ತು ನಾಳೆ ದೇವಿಕೇರಾ ಜಾತ್ರೆ ನಡೆಯಲಿದೆ. ಈ ಜಾತ್ರೆಯಲ್ಲಿ ಕೋಣಗಳನ್ನು ಬಲಿ ಕೊಡುವ ಹಾಗೂ ಅದರ ಮಾಂಸವನ್ನು ದಲಿತರಿಗೆ ತಿನ್ನಬೇಕು, ಇಲ್ಲವಾದರೆ ಬಹಿಷ್ಕಾರ ಹಾಕುವ ಅನಿಷ್ಟ ಪದ್ಧತೆ ಚಾಲ್ತಿಯಲ್ಲಿದೆ. ಇದನ್ನು ವಿರೋಧಿಸಿ ದಲಿತ ಸಮುದಾಯವು ದೂರು ನೀಡಿದ್ದವು. ನಿನ್ನೆ ಗ್ರಾಮದಲ್ಲಿ ಶಾಂತಿ ಸಭೆ ನಡೆದಿದ್ದು, ಕೋಣಗಳ ಬಲಿ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

ಇಂದು ರಾತ್ರಿಯಿಂದ ಸುರಪುರ ದೇವಿಕೇರಾ ಜಾತ್ರೆ; ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ
ಇಂದು ಮತ್ತು ನಾಳೆ ನಡೆಯುವ ಸುರಪುರ ದೇವಿಕೇರಾ ಜಾತ್ರೆಯಲ್ಲಿ ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ
Follow us
ಅಮೀನ್​ ಸಾಬ್​
| Updated By: Rakesh Nayak Manchi

Updated on: Dec 18, 2023 | 2:42 PM

ಯಾದಗಿರಿ, ಡಿ.18: ಜಿಲ್ಲೆಯ (Yadgir) ಸುರಪುರ ತಾಲೂಕಿನ ದೇವಿಕೇರಾ ಜಾತ್ರೆ (Devikera fair) ಇಂದು ರಾತ್ರಿಯಿಂದ ಆರಂಭಗೊಳ್ಳಲಿದೆ. ಈ ಜಾತ್ರೆಯಲ್ಲಿ ಕೋಣಗಳನ್ನು ಬಲಿ ಕೊಡುವ ಹಾಗೂ ಅದರ ಮಾಂಸವನ್ನು ದಲಿತರಿಗೆ ತಿನ್ನಬೇಕು, ಇಲ್ಲವಾದರೆ ಬಹಿಷ್ಕಾರ ಹಾಕುವ ಅನಿಷ್ಟ ಪದ್ಧತೆ ಚಾಲ್ತಿಯಲ್ಲಿದ್ದು, ಇದನ್ನು ವಿರೋಧಿಸಿ ದಲಿತ ಸಮುದಾಯವು ದೂರು ನೀಡಿತ್ತು. ಅದರಂತೆ, ಜಾತ್ರೆಯಲ್ಲಿ ಕೋಣಗಳ ಬಲಿ ತಡೆಯಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ದೇವಿಕೇರ ಗ್ರಾಮದಲ್ಲಿ ಗ್ರಾಮ ದೇವತೆಯ ಜಾತ್ರೆ ಇಂದು ರಾತ್ರಿ ಮತ್ತು ನಾಳೆ ನಡೆಯಲಿದೆ. ಕೋಣಗಳನ್ನು ಬಲಿ ಕೊಡುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಕೋಣಗಳ ಬಲಿ ಕೊಡದಂತೆ ಗ್ರಾಮದಲ್ಲಿ 80 ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ದೇವಿಕೇರಾ ಜಾತ್ರೆ: ಕೋಣಗಳ ಬಲಿ ಹೆಸರಲ್ಲಿ ಚಂದಾ ವಸೂಲಿ

ದೇವಸ್ಥಾನ ಸೇರಿದಂತೆ ವಿವಿಧ ಕಡೆ ಬಂದೋಬಸ್ತ್​ಗಾಗಿ ಯಾದಗಿರಿ ಎಸ್​ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದಾರೆ. ದಲಿತ ಸಮುದಾಯದ ದೂರಿನ ಅನ್ವಯ ನಿನ್ನೆ ಸುರಪುರ ತಹಶೀಲ್ದಾರ್ ವಿಜಯ ಕುಮಾರ್ ಗ್ರಾಮಕ್ಕೆ ಹೋಗಿ ಶಾಂತಿ ಸಭೆ ನಡೆಸಿದ್ದರು.

ಬಲಿಕೊಟ್ಟ ಕೋಣಗಳ ಮಾಂಸ ತಿನ್ನದ ದಲಿತರಿಗೆ ಗ್ರಾಮದಿಂದ ಬಹಿಷ್ಕಾರ

ದೇವಿಕೇರಾ ಗ್ರಾಮದಲ್ಲಿ ನಡೆಯುವ ದ್ಯಾಮವ್ವ, ಮರೆಮ್ಮ, ಪಾಲ್ಕಮ್ಮ ಗ್ರಾಮದೇವತೆಗಳ ಜಾತ್ರೆಯಲ್ಲಿ ಹತ್ತಾರು ಕೋಣಗಳನ್ನು ಬಲಿ ಕೊಡಲಾಗುತ್ತದೆ. ಬಲಿಕೊಟ್ಟ ಕೋಣಗಳ ಮಾಂಸವನ್ನು ದಲಿತರು ತಿನ್ನಬೇಕು, ಇಲ್ಲವಾದರೆ ಅಂತಹವರನ್ನು ಗ್ರಾಮದಿಂದ ಬಹಿಷ್ಕಾರ ಹಾಕಲಾಗುತ್ತದೆ. ಇದರ ವಿರುದ್ಧ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ ಬಣ) ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಅವರು ಜಿಲ್ಲಾಧಿಕಾರಿ, ಎಸ್​ಪಿ​​ಗೆ ದೂರು ನೀಡಿ ಮೂಢನಂಬಿಕೆ ತಡೆಯುವಂತೆ ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ