AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರಾತ್ರಿಯಿಂದ ಸುರಪುರ ದೇವಿಕೇರಾ ಜಾತ್ರೆ; ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ

ಯಾದಗಿರಿಯ ಸುರಪುರ ತಾಲೂಕಿನಲ್ಲಿ ಇಂದು ಮತ್ತು ನಾಳೆ ದೇವಿಕೇರಾ ಜಾತ್ರೆ ನಡೆಯಲಿದೆ. ಈ ಜಾತ್ರೆಯಲ್ಲಿ ಕೋಣಗಳನ್ನು ಬಲಿ ಕೊಡುವ ಹಾಗೂ ಅದರ ಮಾಂಸವನ್ನು ದಲಿತರಿಗೆ ತಿನ್ನಬೇಕು, ಇಲ್ಲವಾದರೆ ಬಹಿಷ್ಕಾರ ಹಾಕುವ ಅನಿಷ್ಟ ಪದ್ಧತೆ ಚಾಲ್ತಿಯಲ್ಲಿದೆ. ಇದನ್ನು ವಿರೋಧಿಸಿ ದಲಿತ ಸಮುದಾಯವು ದೂರು ನೀಡಿದ್ದವು. ನಿನ್ನೆ ಗ್ರಾಮದಲ್ಲಿ ಶಾಂತಿ ಸಭೆ ನಡೆದಿದ್ದು, ಕೋಣಗಳ ಬಲಿ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

ಇಂದು ರಾತ್ರಿಯಿಂದ ಸುರಪುರ ದೇವಿಕೇರಾ ಜಾತ್ರೆ; ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ
ಇಂದು ಮತ್ತು ನಾಳೆ ನಡೆಯುವ ಸುರಪುರ ದೇವಿಕೇರಾ ಜಾತ್ರೆಯಲ್ಲಿ ಕೋಣಗಳ ಬಲಿ ತಡೆಯಲು ಪೊಲೀಸ್ ಭದ್ರತೆ
ಅಮೀನ್​ ಸಾಬ್​
| Edited By: |

Updated on: Dec 18, 2023 | 2:42 PM

Share

ಯಾದಗಿರಿ, ಡಿ.18: ಜಿಲ್ಲೆಯ (Yadgir) ಸುರಪುರ ತಾಲೂಕಿನ ದೇವಿಕೇರಾ ಜಾತ್ರೆ (Devikera fair) ಇಂದು ರಾತ್ರಿಯಿಂದ ಆರಂಭಗೊಳ್ಳಲಿದೆ. ಈ ಜಾತ್ರೆಯಲ್ಲಿ ಕೋಣಗಳನ್ನು ಬಲಿ ಕೊಡುವ ಹಾಗೂ ಅದರ ಮಾಂಸವನ್ನು ದಲಿತರಿಗೆ ತಿನ್ನಬೇಕು, ಇಲ್ಲವಾದರೆ ಬಹಿಷ್ಕಾರ ಹಾಕುವ ಅನಿಷ್ಟ ಪದ್ಧತೆ ಚಾಲ್ತಿಯಲ್ಲಿದ್ದು, ಇದನ್ನು ವಿರೋಧಿಸಿ ದಲಿತ ಸಮುದಾಯವು ದೂರು ನೀಡಿತ್ತು. ಅದರಂತೆ, ಜಾತ್ರೆಯಲ್ಲಿ ಕೋಣಗಳ ಬಲಿ ತಡೆಯಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ದೇವಿಕೇರ ಗ್ರಾಮದಲ್ಲಿ ಗ್ರಾಮ ದೇವತೆಯ ಜಾತ್ರೆ ಇಂದು ರಾತ್ರಿ ಮತ್ತು ನಾಳೆ ನಡೆಯಲಿದೆ. ಕೋಣಗಳನ್ನು ಬಲಿ ಕೊಡುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಕೋಣಗಳ ಬಲಿ ಕೊಡದಂತೆ ಗ್ರಾಮದಲ್ಲಿ 80 ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ದೇವಿಕೇರಾ ಜಾತ್ರೆ: ಕೋಣಗಳ ಬಲಿ ಹೆಸರಲ್ಲಿ ಚಂದಾ ವಸೂಲಿ

ದೇವಸ್ಥಾನ ಸೇರಿದಂತೆ ವಿವಿಧ ಕಡೆ ಬಂದೋಬಸ್ತ್​ಗಾಗಿ ಯಾದಗಿರಿ ಎಸ್​ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದಾರೆ. ದಲಿತ ಸಮುದಾಯದ ದೂರಿನ ಅನ್ವಯ ನಿನ್ನೆ ಸುರಪುರ ತಹಶೀಲ್ದಾರ್ ವಿಜಯ ಕುಮಾರ್ ಗ್ರಾಮಕ್ಕೆ ಹೋಗಿ ಶಾಂತಿ ಸಭೆ ನಡೆಸಿದ್ದರು.

ಬಲಿಕೊಟ್ಟ ಕೋಣಗಳ ಮಾಂಸ ತಿನ್ನದ ದಲಿತರಿಗೆ ಗ್ರಾಮದಿಂದ ಬಹಿಷ್ಕಾರ

ದೇವಿಕೇರಾ ಗ್ರಾಮದಲ್ಲಿ ನಡೆಯುವ ದ್ಯಾಮವ್ವ, ಮರೆಮ್ಮ, ಪಾಲ್ಕಮ್ಮ ಗ್ರಾಮದೇವತೆಗಳ ಜಾತ್ರೆಯಲ್ಲಿ ಹತ್ತಾರು ಕೋಣಗಳನ್ನು ಬಲಿ ಕೊಡಲಾಗುತ್ತದೆ. ಬಲಿಕೊಟ್ಟ ಕೋಣಗಳ ಮಾಂಸವನ್ನು ದಲಿತರು ತಿನ್ನಬೇಕು, ಇಲ್ಲವಾದರೆ ಅಂತಹವರನ್ನು ಗ್ರಾಮದಿಂದ ಬಹಿಷ್ಕಾರ ಹಾಕಲಾಗುತ್ತದೆ. ಇದರ ವಿರುದ್ಧ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ ಬಣ) ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಅವರು ಜಿಲ್ಲಾಧಿಕಾರಿ, ಎಸ್​ಪಿ​​ಗೆ ದೂರು ನೀಡಿ ಮೂಢನಂಬಿಕೆ ತಡೆಯುವಂತೆ ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ