AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಶುರುವಾಯಿತು ಟಿಪ್ಪು, ಸಾವರ್ಕರ್ ವಾರ್: ವೃತ್ತದ ಹೆಸರು ಬದಲಾವಣೆಗೆ ಮುಂದಾದ ನಗರಸಭೆ ವಿರುದ್ಧ ಪ್ರತಿಭಟನೆ

ನಗರದಲ್ಲಿ ಟಿಪ್ಪು ಸುಲ್ತಾನ್ ಹಾಗೂ ವೀರ್ ಸಾವರ್ಕರ್ ವಾರ್ ಶುರುವಾದಂತ್ತಾಗಿದೆ. ಟಿಪ್ಪು ಸುಲ್ತಾನ್​ ವೃತ್ತದ ಹೆಸರು ಬದಲಾವಣೆಗೆ ಯಾದಗಿರಿ ನಗರಸಭೆ ಮುಂದಾಗಿದೆ ಎನ್ನಲಾಗುತ್ತಿದೆ.

ಯಾದಗಿರಿಯಲ್ಲಿ ಶುರುವಾಯಿತು ಟಿಪ್ಪು, ಸಾವರ್ಕರ್ ವಾರ್: ವೃತ್ತದ ಹೆಸರು ಬದಲಾವಣೆಗೆ ಮುಂದಾದ ನಗರಸಭೆ ವಿರುದ್ಧ ಪ್ರತಿಭಟನೆ
ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್​ ವೃತ್ತದ ಹೆಸರು ಬದಲಾವಣೆ?
TV9 Web
| Edited By: |

Updated on:Nov 28, 2022 | 5:13 PM

Share

ಯಾದಗಿರಿ: ನಗರದಲ್ಲಿ ಟಿಪ್ಪು ಸುಲ್ತಾನ್ (Tippu) ಹಾಗೂ ವೀರ್ ಸಾವರ್ಕರ್ (Savarkar) ವಾರ್ ಶುರುವಾದಂತ್ತಾಗಿದೆ. ಟಿಪ್ಪು ಸುಲ್ತಾನ್​ ವೃತ್ತದ ಹೆಸರು ಬದಲಾವಣೆಗೆ ಯಾದಗಿರಿ ನಗರಸಭೆ ಮುಂದಾಗಿದೆ ಎನ್ನಲಾಗುತ್ತಿದೆ. ಟಿಪ್ಪು ಸುಲ್ತಾನ್ ಹೆಸರು ಬದಲಾಗಿ ಸಾವರ್ಕರ್ ಹೆಸರಿಡಲು ನಿರ್ಧಾರ ಮಾಡಲಾಗಿದೆ. ನಗರಸಭೆ ಕಚೇರಿ ಮುಂದೆ ಅಧ್ಯಕ್ಷ ಸುರೇಶ್​ ಅಂಬಿಗರ ವಿರುದ್ಧ ಹಜರತ್​ ಟಿಪ್ಪು ಸುಲ್ತಾನ್​ ಸಂಯುಕ್ತ ರಂಗದಿಂದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ನಗರಸಭೆ ಅಧ್ಯಕ್ಷರ ವಿರುದ್ಧ ಕಿಡಿಕಾಡಿದ್ದಾರೆ. 2010ರಲ್ಲಿ ವೃತ್ತಕ್ಕೆ ಟಿಪ್ಪು ವೃತ್ತ ಹೆಸರಿಡಲು ನಿರ್ಧಾರ ಆಗಿತ್ತು. ಅಂದಿನ ಸಾಮಾನ್ಯ ಸಭೆಯಲ್ಲಿ ಟಿಪ್ಪು ಹೆಸರಿಡಲು ನಿರ್ಧಾರ ಮಾಡಲಾಗಿತ್ತು. ಈಗಿನ ಅಧ್ಯಕ್ಷರು ಸಾವರ್ಕರ್ ಹೆಸರಿಡಲು ಮುಂದಾಗಿದ್ದಾರೆ ಎಂದು ನಗರಸಭೆ ಅಧ್ಯಕ್ಷರ ವಿರುದ್ಧ ಮುಸ್ಲಿಮರು ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ: ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್, ಅವರ ಜಯಂತಿ ಮಾಡುತ್ತಿರುವುದು ನನಗೆ ಖುಷಿ ತಂದಿದೆ -ಹೆಚ್.ವಿಶ್ವನಾಥ್

ಹುಬ್ಬಳ್ಳಿ: ಸಿದ್ದರಾಮಯ್ಯ ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪು ಬೆಂಬಲಿಸಿ RSS​ ಬೈಯ್ಯುವುದೇ ಸಿದ್ದರಾಮಯ್ಯ ಅವರ ಕಾಯಕ. ಕಾಂಗ್ರೆಸ್​ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು ಎಂಬ ಹೇಳಿಕೆ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ವಿಪಕ್ಷನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದರು.

ಇದನ್ನೂ ಓದಿ: ಟಿಪ್ಪು ಸುಲ್ತಾನ್​​ ಬಂದಾಗಲೇ ಕೊಡವರು ಹೆದರಲಿಲ್ಲ: ಸಿದ್ದು ಸುಲ್ತಾನ್ ಬಂದರೆ ಹೆದರ್​ತೀವಾ: ಪ್ರತಾಪ್ ಸಿಂಹ

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯವರೊಂದಿಗೆ ಮಾತನಾಡಿದ ಅವರು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ? ಎನ್ನುವ ಮೂಲಕ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತದೆ ಎಂಬ ಸಿ.ಟಿ.ರವಿ ಹೇಳಿಕೆಯನ್ನು ಜಗದೀಶ್​​ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ಮೋದಿ ಸರ್ಕಾರ ಬಂದ ನಂತರ ಕೋಮು ಗಲಭೆಗಳು ನಿಂತಿವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಿಂದೂ ಮುಸ್ಲಿಂ ಗಲಭೆ ಇರತ್ತೆ, ಹೀಗಾಗಿ ಸಿಟಿ ರವಿ  ಆ ರೀತಿ ಹೇಳಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಲನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:13 pm, Mon, 28 November 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್