AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ ಹಸುಗೂಸನ್ನೇ ಕೊಂದ ಮಲತಾಯಿ!

ದಂಪತಿಗೆ ದೀರ್ಘ ಕಾಲದ ದಾಂಪತ್ಯದ ನಂತರೆ, ಐದು ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಇನ್ನು ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಾಗಿದ್ದವು. ಹಾಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿ ಐದು ತಿಂಗಳ ಮಗಳು ಸಂಗೀತಾಗೆ ಪಾಲು ಹೋಗುತ್ತದೆ ಎಂದು ಕೊಲೆ ಮಾಡಿರುವ ಆರೋಪ ಇದೀಗ ಕೇಳಿಬಂದಿದೆ.

ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ ಹಸುಗೂಸನ್ನೇ ಕೊಂದ ಮಲತಾಯಿ!
ವಿಷ ಬೆರೆಸಿ ಹಸುಗೂಸನ್ನೇ ಕೊಂದ ಮಲತಾಯಿ!
ಅಮೀನ್​ ಸಾಬ್​
| Edited By: |

Updated on: Sep 01, 2023 | 11:40 AM

Share

ಯಾದಗಿರಿ, ಸೆಪ್ಟೆಂಬರ್​​ 1 : ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ ಐದು ತಿಂಗಳ ಹಸುಗೂಸನ್ನೇ ಮಲತಾಯಿ ಕೊಂದ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಬಲಾದ ಗ್ರಾಮದಲ್ಲಿ ( babalada village in vadagera in yadgiri) ಈ ಅಮಾನವೀಯ ಪ್ರಕರಣ ನಡೆದಿದ್ದು, ದೇವಮ್ಮ ಚೆಟ್ಟಿಗೇರಿ ಎಂಬ ಮಲತಾಯಿ ಹಸುಗೂಸಿಗೆ (toddler) ಹಾಲಿನಲ್ಲಿ ವಿಷ ಬೆರೆಸಿ ಸಾಯಿಸಿರುವ ಆರೋಪ ಕೇಳಿಬಂದಿದೆ. ಸಂಗೀತಾ ಚೆಟ್ಟಿಗೇರಿ, ಸಾವನ್ನಪ್ಪಿದ ಐದು ತಿಂಗಳ ಹಸುಗೂಸು. ಮೃತ ಹಸುಗೂಸು ಸಂಗೀತಾಳ ತಾಯಿ ಶ್ರೀದೇವಿ ಎಂಬಾಕೆ ಹಾಲು ಕುಡಿಸುತ್ತಿದ್ದಾಗ ಒತ್ತಾಯ ಮಾಡಿ, ತಾನೇ ಹಾಲುಣಿಸುತ್ತೇನೆ ಅಂತಾ ದೇವಮ್ಮ (step mother) ದುಂಬಾಲು ಬಿದ್ದು ಕರೆದೊಯ್ದಿದ್ದಳು.

ಬಳಿಕ ದೇವಮ್ಮ ಮನೆಯ ರೂಮಿಗೆ ಕರೆದುಕೊಂಡು ಹೋಗಿ ಡೋರ್ ಮುಚ್ಚಿ ಹಾಲಿನ ಬಾಟಲ್ ನಲ್ಲಿ ವಿಷ ಬೆರೆಸಿ ಕೂಸಿಗೆ ಕೂಡಿಸಿದ್ದಾಳೆ. ವಿಷಬೆರೆತ ಹಾಲು ಕುಡಿದ ಮೂರು ಗಂಟೆ ನಂತರ ಬಾಯಲ್ಲಿ ನೊರೆ ಬಂದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಹಸುಗೂಸು ಸಂಗೀತಾ ಸಾವನ್ನಪ್ಪಿದೆ. ಮೊನ್ನೆ ಬುಧವಾರ ಆಗಸ್ಟ್​ 30ರಂದು ಬಬಲಾದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ವಡಗೇರ ಪೊಲೀಸ್ರು ಆರೋಪಿ ದೇವಮ್ಮಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿನ್ನೆಲೆ: ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ ಎಂಬಾತ ಎರಡು ಮದುವೆಯಾಗಿದ್ದ. 11 ವರ್ಷಗಳ ಹಿಂದೆ ಶ್ರೀದೇವಿ ಎಂಬಾಕೆಯನ್ನು ಸಿದ್ದಪ್ಪ ಮದುವೆಯಾಗಿದ್ದ. ದಂಪತಿಗೆ ಮಕ್ಕಳಾಗದ ಹಿನ್ನೆಲೆ 7 ವರ್ಷದ ಹಿಂದೆ ದೇವಮ್ಮಳನ್ನು ಸಿದ್ದಪ್ಪ ಮದುವೆಯಾಗಿದ್ದ. ಅತ್ತ ದೇವಮ್ಮಳನ್ನ ಮದುವೆಯಾದ ನಂತರ ಶ್ರೀದೇವಿ ತನ್ನ ಗಂಡನ ಮನೆ ಬಿಟ್ಟು ಚಾಮನಳ್ಳಿಯ ತವರು ಮನೆಯಲ್ಲಿ ವಾಸವಿದ್ದಳು.

ಹಿರಿಯರ ರಾಜಿ ಸಂಧಾನದ ನಂತರ ಕಳೆದ ಮೂರು ವರ್ಷಗಳ ಹಿಂದೆ ಬಬಲಾದ ಗ್ರಾಮದ ಗಂಡನ ಮನೆಗೆ ವಾಪಸಾಗಿ, ಅಲ್ಲಿಯೇ ವಾಸವಾಗಿದ್ದಳು. ದಂಪತಿಗೆ ದೀರ್ಘ ಕಾಲದ ದಾಂಪತ್ಯದ ನಂತರೆ, ಐದು ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಇನ್ನು ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಾಗಿದ್ದವು. ಹಾಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿ ಐದು ತಿಂಗಳ ಮಗಳು ಸಂಗೀತಾಗೆ ಪಾಲು ಹೋಗುತ್ತದೆ ಎಂದು ಕೊಲೆ ಮಾಡಿರುವ ಆರೋಪ ಇದೀಗ ಕೇಳಿಬಂದಿದೆ.

ಯಾದಗಿರಿ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?