ಯಾದಗಿರಿ: ನಿಂತ ಲಾರಿಗೆ ಟಂಟಂ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಯಾದಗಿರಿ: ರಸ್ತೆಬದಿ ನಿಂತಿದ್ದ ಲಾರಿಗೆ ಟಂಟಂ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ವಡಗೇರ ತಾಲೂಕಿನ ಹಾಲಗೇರ ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ಸಿದ್ದಮ್ಮ (50) ರಮೇಶ (25) ಭಾಷಪ್ಪ (55) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಹಾಗೂ ಐವರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟ ತಾಯಿ ಸಿದ್ದಮ್ಮ ಮಗ ರಮೇಶ್ ಇಬ್ಬರು ಹಲಕರ್ಟಿ ನಿವಾಸಿಗಳು. ಬೆಳಗ್ಗೆಯೇ ತಾಯಿ ಸಿದ್ದಮ್ಮ ತಮ್ಮ ಮಗನಿಗೆ ಕುಡಿತ ಬಿಡಿಸಲು ಹಾಲಗೇರಕ್ಕೆ ಹೊರಟಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದ್ದು, ವಡಗೇರ […]

ಯಾದಗಿರಿ: ನಿಂತ ಲಾರಿಗೆ ಟಂಟಂ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​

Updated on: Jan 10, 2020 | 10:05 AM

ಯಾದಗಿರಿ: ರಸ್ತೆಬದಿ ನಿಂತಿದ್ದ ಲಾರಿಗೆ ಟಂಟಂ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ವಡಗೇರ ತಾಲೂಕಿನ ಹಾಲಗೇರ ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ಸಿದ್ದಮ್ಮ (50) ರಮೇಶ (25) ಭಾಷಪ್ಪ (55) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಹಾಗೂ ಐವರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತಪಟ್ಟ ತಾಯಿ ಸಿದ್ದಮ್ಮ ಮಗ ರಮೇಶ್ ಇಬ್ಬರು ಹಲಕರ್ಟಿ ನಿವಾಸಿಗಳು. ಬೆಳಗ್ಗೆಯೇ ತಾಯಿ ಸಿದ್ದಮ್ಮ ತಮ್ಮ ಮಗನಿಗೆ ಕುಡಿತ ಬಿಡಿಸಲು ಹಾಲಗೇರಕ್ಕೆ ಹೊರಟಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದ್ದು, ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us