ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಹನಿ ನೀರಿಗೂ ಹಾಹಾಕಾರ; ಹಣಕೊಟ್ಟು ಬಾಟಲಿ ನೀರು ಖರೀದಿಸುವ ಸ್ಥಿತಿ

ಜಿಲ್ಲಾಸ್ಪತ್ರೆಯಲ್ಲಿ ಜೀವ ಜಲಕ್ಕಾಗಿ ಹಾಹಾಕಾರ ಶುರುವಾಗಿದೆ. ಹನಿ ಹನಿ ನೀರಿಗೂ ತತ್ವಾರ ತಲೆದೊರಿದೆ. ರೋಗಿಗಳಿಗೆ ಒಂದು ಹನಿ ನೀರು ಸಿಗದೆ ಪರದಾಡುವಂತಾಗಿದೆ. ರೋಗಿ, ಸಿಬ್ಬಂದಿ ಹಾಗೂ ಜನರಿಗೆ ಖರೀದಿ ನೀರೆ ಗತಿಯಾಗಿದೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ತಲೆದೊರಿದ ಜೀವ ಜಲದ ಸಂಕಷ್ಟದ ಕಹಾನಿ ಇಲ್ಲಿದೆ.

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಹನಿ ನೀರಿಗೂ ಹಾಹಾಕಾರ; ಹಣಕೊಟ್ಟು ಬಾಟಲಿ ನೀರು ಖರೀದಿಸುವ ಸ್ಥಿತಿ
ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಹನಿ ನೀರಿಗೂ ಹಾಹಾಕಾರ
Follow us
| Updated By: ಆಯೇಷಾ ಬಾನು

Updated on: Jun 25, 2024 | 3:12 PM

ಯಾದಗಿರಿ, ಜೂನ್.25: ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ( Yadgir District Hospital) ಹನಿ ಹನಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ (Water Crisis). ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅಂದಿನ ಸಿಎಂ, ಯಾದಗಿರಿ ಜಿಲ್ಲೆಯ ಜನರ ಆರೋಗ್ಯಕ್ಕಾಗಿ ಸುಸಜ್ಜಿತ ಆಸ್ಪತ್ರೆಯನ್ನು 2021 ರಲ್ಲಿ ಮಾಡಿದ್ರು. ಆಸ್ಪತ್ರೆ ಉದ್ಘಾಟನೆ ಮಾಡಿ ಮೂರು ವರ್ಷ ಕಳೆದಿದೆ. ಆದ್ರೆ, ಆಸ್ಪತ್ರೆಯಲ್ಲಿ ಅಧಿಕಾರಿಗಳು ಶುದ್ಧ ನೀರು ಸೌಲಭ್ಯ ಕಲ್ಪಿಸುವ ಕಾಳಜಿ ತೋರಿಲ್ಲ.

ಜಿಲ್ಲಾಸ್ಪತ್ರೆಯು ವೈಧ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಬರುತ್ತದೆ. ಯಾದಗಿರಿ ನಗರದ ಮುದ್ನಾಳ ಸಮೀಪದಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ನೀರಿಗಾಗಿ ಪರದಾಡುವಂತಾಗಿದೆ. ರೋಗಿಗಳಿಗು ನೀರಿನ ಸೌಕರ್ಯ ಕಲ್ಪಿಸಿಲ್ಲ. ಅದೇ ರೀತಿ ಆಸ್ಪತ್ರೆಯಲ್ಲಿ ಕಾರ್ಯ ಮಾಡುವ ಸಿಬ್ಬಂದಿ ಹಾಗೂ ಸಾರ್ವಜನರಿಗೆ ನೀರಿನ ಸೌಕರ್ಯ ಕಲ್ಪಿಸಿಲ್ಲ. ಇದರಿಂದ ಆಸ್ಪತ್ರೆಯಲ್ಲಿ ರೋಗಿಗಳು,ಸಿಬ್ಬಂದಿ ವರ್ಗ ಹಾಗೂ ಜನರು ನೀರಿಗಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ರೋಗಿಗಳು ನೀರಿನ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ

ಆಸ್ಪತ್ರೆಯಲ್ಲಿ ನೀರಿನ ಸೌಲಭ್ಯ ಸರಿಯಾಗಿ ಕಲ್ಪಿಸದ ಹಿನ್ನಲೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸಮಸ್ಯೆ ಆಗುತ್ತಿದೆ. ರೋಗಿಗಳ ಸಂಬಂಧಿಕರು ಆಸ್ಪತ್ರೆ ಹೊರಭಾಗದ ಹೋಟೆಲ್​ಗೆ ತೆರಳಿ ಬಾಟಲ್ ನೀರು ಖರೀದಿ ಮಾಡಿ ನೀರಿನ ದಾಹ ತಿರಿಸಿಕೊಳ್ಳುತ್ತಿದ್ದಾರೆ. ಬಡ ರೋಗಿಗಳು ನೀರಿಗಾಗಿ ನಿತ್ಯವು ನೂರಾರು ರೂಪಾಯಿ ಹಣ ವೆಚ್ಚ ಮಾಡುವಂತಾಗಿದೆ. ಆಸ್ಪತ್ರೆಯಲ್ಲಿ ಕೇವಲ ಎರಡು ಶುದ್ದ ನೀರು ಪೂರೈಕೆ ಮಾಡುವ ಘಟಕಗಳಿವೆ. ಅದರಲ್ಲಿ ಒಂದು ಘಟಕದಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಮತ್ತೊಂದು ಘಟಕ ಬಂದ್ ಆಗಿದೆ. ಆದ್ರೆ, ಈ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕಿ ಹಾಗೂ ಆಸ್ಪತ್ರೆಯ ಅಧೀಕ್ಷಕಿ ಡಾ.ರಿಜ್ವಾನ್ ಅವರು, ಆಸ್ಪತ್ರೆ ಮೇಲೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ನೀರು ಪೂರೈಕೆ ಮಾಡುವ ಪೈಪ್ ಕೆಟ್ಟು ಹೋಗಿದ್ದು. ಕಾಮಗಾರಿ ನಡೆಯುತ್ತಿರುವದರಿಂದ ಪೈಪ್ ಲೈನ್ ನೀರು ಪೂರೈಕೆ ಬಂದ್ ಮಾಡಲಾಗಿದೆ. ನೀರಿನ ಕ್ಯಾನ್ ಗಳನ್ನು ಇಟ್ಟು ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೃಹತ್ ನೀರಿನ ಘಟಕ ಅಳವಡಿಕೆ ಮಾಡಲಾಗುತ್ತದೆಂದರು.

ನೀರಿನ ಕ್ಯಾನ್ ಗಳನ್ನು ಇಡಲಾಗಿದೆ ಎಂದು ಅಧಿಕಾರಿಗಳು ಸುಳ್ಳು ಹೇಳುತ್ತಿದಾರೆಂಬುದು, ಆಸ್ಪತ್ರೆಯಲ್ಲಿನ ನೀರಿನ ಸಮಸ್ಯೆ ನಿದರ್ಶನವಾಗಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ