AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ನೀರು; ಕೃಷ್ಣಾ, ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರ ಹಾಗೂ ಕೃಷ್ಣ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆರಾಯ ಆರ್ಭಟ ಮುಂದೆವರೆದಿದೆ. ಇದೆ ಕಾರಣಕ್ಕೆ ಕೃಷ್ಣ ನದಿ ತೀರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಇದರ ಜೊತೆಗೆ ಈಗ ಭೀಮಾ ನದಿ ತೀರದಲ್ಲೂ ಪ್ರವಾಹದ ಆತಂಕ ಸೃಷ್ಟಿಯಾಗಿದೆ. ನದಿಗೆ ಅಪಾರ ಪ್ರಮಾಣ ನೀರು ಹರಿದು ಬರ್ತಾಯಿದ್ದ ಹಿನ್ನಲೆ ನದಿ ದಡದ ದೇವಸ್ಥಾನಗಳಿಗೂ ಜಲದಿಗ್ಬಂಧನ ಉಂಟಾಗಿದೆ. ಖಾಲಿ ಖಾಲಿಯಾಗಿದ್ದ ನದಿ ಭರ್ತಿಯಾಗಿದ್ದು, ರೈತರ ಮೊಗದಲ್ಲೂ ಮಂದಹಾಸ ಮೂಡಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ನೀರು; ಕೃಷ್ಣಾ, ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ
ಕೃಷ್ಣಾ, ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ
ಅಮೀನ್​ ಸಾಬ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 25, 2024 | 6:27 PM

Share

ಯಾದಗಿರಿ, ಜು.25: ಕಳೆದ ಕೆಲ ದಿನಗಳಿಂದ ಕೃಷ್ಣಾ ನದಿ(Krishna River) ತೀರದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷ್ಣಾ ನದಿಯ ಭೋರ್ಗರೆತ ದಿಂದ ಸಾಕಷ್ಟು ಸೇತುವೆಗಳು ಮುಳುಗಡೆಯಾಗಿವೆ. ಯಾದಗಿರಿ ಜಿಲ್ಲೆಯಲ್ಲಿರುವ ನಾರಾಣಪುರದ ಬಸವಸಾಗರ ಜಲಾಶಯದಿಂದ 2.5 ಲಕ್ಷ ಕ್ಯೂಸೆಕ್ ನೀರು ರಿಲೀಸ್ ಮಾಡಿದ್ದಕ್ಕೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಇದು ಒಂದು ಕಡೆಯಾದ್ರೆ, ಜಿಲ್ಲೆಯಲ್ಲಿ ಹರಿಯುವ ಭೀಮಾ ನದಿ(Bhima River) ತೀರದಲ್ಲೂ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.

ದೇವಸ್ಥಾನಗಳಿಗೆ ಜಲದಿಗ್ಬಂಧನ

ನದಿಗೆ ಗುರುಸಣಗಿ ಬ್ಯಾರೇಜ್​ನಿಂದ ಸುಮಾರು 5 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣಕ್ಕೆ ಕಳೆದ ಒಂದು ತಿಂಗಳ ಹಿಂದೆಷ್ಟೇ ಖಾಲಿ ಖಾಲಿಯಾಗಿದ್ದ ನದಿ ಭರ್ತಿಯಾಗಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣಕ್ಕೆ ಯಾದಗಿರಿ ನಗರದ ಹೊರ ಭಾಗದಲ್ಲಿರುವ ಭೀಮಾ ನದಿ ದಡದಲ್ಲಿನ ವೀರಾಂಜನೇಯ ಹಾಗೂ ಕಂಗಾಳೇಶ್ವರ ದೇವಸ್ಥಾನಗಳಿಗೆ ಜಲದಿಗ್ಬಂಧನ ಉಂಟಾಗಿದೆ.

ಇದನ್ನೂ ಓದಿ:ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ; ಮೀನು ಹಿಡಿಯಲು ಹೋಗಿ ದುಸ್ಸಾಹಸ

ರೈತರ ಮೊಗದಲ್ಲಿ ಮೂಡಿದ ಸಂತಸ

ಇನ್ನು ಕಳೆದ ಒಂದು ತಿಂಗಳ ಹಿಂದೆಯಷ್ಟೇ ನದಿ ಸಂಪೂರ್ಣವಾಗಿ ಖಾಲಿಯಾಗಿತ್ತು. ನದಿಯಲ್ಲಿದ್ದ ಬೃಹತ್ ಗಾತ್ರದ ಕಲ್ಲು ಬಂಡೆಗಳು ತೇಲಿ ಬಂದಿದ್ದವು. ನದಿ ಖಾಲಿಯಾಗಿದ್ದಕ್ಕೆ ಕುಡಿಯುವ ನೀರಿನ ಸಮಸ್ಯೆ ಕೂಡ ಉಂಟಾಗಿತ್ತು. ಆದ್ರೆ, ಈಗ ನಾಲ್ಕೈದು ದಿನಗಳ ಅಂತರದಲ್ಲೇ ಖಾಲಿಯಾಗಿದ್ದ ನದಿ ಸಂಪೂರ್ಣವಾಗಿ ಭರ್ತಿಯಾಗಿದೆ. ಇನ್ನು ನದಿ ಸಂಪೂರ್ಣವಾಗಿ ಭರ್ತಿಯಾಗಿದ್ದರಿಂದ ಜಿಲ್ಲೆಯಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೂರು ಬ್ಯಾರೇಜ್​ಗಳು ಸಹ ತುಂಬಿವೆ. ಹೀಗಾಗಿ ರೈತರಿಗೆ ಭತ್ತ ಬೆಳೆಯುವುದಕ್ಕೆ ಅನುಕೂಲವಾಗಿದೆ.

ನದಿಯಲ್ಲಿ ನೀರು ಇಲ್ಲದ ಕಾರಣಕ್ಕೆ ಒಂದು ತಿಂಗಳುಗಳ ಕಾಲ ಭತ್ತ ನಾಟಿ ಮಾಡುವುದು ತಡ ಮಾಡಿದ್ದರು. ಈಗ ನದಿಯಲ್ಲಿ ನೀರು ಬಂದಿದ್ದಕ್ಕೆ ಭತ್ತ ನಾಟಿ ಮಾಡಲು ಸಹ ಅನುಕೂಲವಾಗಿದೆ. ಇದರ ಜೊತೆಗೆ ರೈತರು ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೇರೆ ಬೇರೆ ಬೆಳೆಗಳನ್ನು ಸಹ ಬೆಳೆಯುತ್ತಾರೆ. ಕಳೆದ ವರ್ಷ ನದಿಯಲ್ಲಿ ನೀರು ಇಲ್ಲದ ಕಾರಣಕ್ಕೆ ಹಿಂಗಾರು ಬೆಳೆಯಾಗಿ ಭತ್ತದ ಬೆಳೆಯನ್ನ ಬೆಳೆದಿರಲಿಲ್ಲ. ಆದ್ರೆ, ಈ ಬಾರಿ ಎರಡು ಬೆಳೆಗಳು ಬೆಳೆಯೋಕೆ ರೈತರು ಸಿದ್ದರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ