ಯಾದಗಿರಿ, (ನವೆಂಬರ್ 12): ದೀಪಾವಳಿ ನರಕ ಚತುರ್ದಶಿದಂದು ಯಾದಗಿರಿಯ ಕಾಲಜ್ಞಾನಿ ಕೊಡೇಕಲ್ ಬಸವಣ್ಣನ ಭವಿಷ್ಯ(Kodekal Basavanna prediction:) ನುಡಿ ಹೊರಬಿದ್ದಿದೆ. ಪಕ್ಷಗಳಲ್ಲಿನ ಗೊಂದಲಗಳನ್ನು ಸರಿಪಡಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ಕಂಟಕ ಎದುರಾಗಲಿದೆ. ಒಂದು ವೇಳೆ ಎಲ್ಲರೂ ವಿಶ್ವಾದಿಂದ ಹೋಗದಿದ್ರೆ ಅಧಿಕಾರ ತ್ಯಾಗ ಮಾಡಬೇಕಾಗುತ್ತದೆ. ಇದು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಕಾಲಜ್ಞಾನಿ ಬಸವಣ್ಣನ ಭವಿಷ್ಯ ನುಡಿಯಾಗಿದೆ. ರಾಜ್ಯದಲ್ಲಿ ಏರ್ಪಟ್ಟಿರುವ ಪಕ್ಷಗಳಲ್ಲಿನ ಗೊಂದಲಗಳ ಮಧ್ಯೆ ಈ ಕಾಲಜ್ಞಾನಿ ಕೊಡೇಕಲ್ ಬಸವಣ್ಣನ ಭವಿಷ್ಯ ಅಚ್ಚರಿ ಮೂಡಿಸಿದೆ.
ಹಲವು ಪಕ್ಷಗಳು(ಮನಸ್ಥಿತಿ) ಸೇರಿ ಅಧಿಕಾರ ಪಡೆಯಲು ಯತ್ನಿಸಿವೆ. ಹಲವರು ಸೇರಿ ಅಧಿಕಾರ ಪಡೆಯಲು ಮುಂದಾಗಿರುವವರು ಸಹ ಎಚ್ಚರಿಕೆ ಹೆಜ್ಜೆ ಇಡಬೇಕು. ಇಲ್ಲದಿದ್ದರೆ ಅವರವರೇ ಘಾತಕತನ(ಮೋಸ) ಮಾಡುವವರು. ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಯಾರನ್ನು ಸಹ ನಂಬದಂತಹ ದಿನಮಾನಗಳು ನಡೆಯುತ್ತವೆ. ಎಂದು ದೀಪಾವಳಿ ಹಬ್ಬದಂದು ಕಾಲಜ್ಞಾನಿ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಮೊದಲೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಲ್ಲಿ ನಾಯಕರ ಮಧ್ಯೆಯೇ ಗೊಂದಲಗಳು ಏರ್ಪಟ್ಟಿವೆ. ಅದರಲ್ಲೂ ಆಡಳಿತರೂಢ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಜೋರಾಗಿದೆ. ಒಂದು ಕಡೆ ಡಿಕೆ ಶಿವಕುಮಾರ್ ಬಣ ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಬಣ ರಾಜಕೀಯ ನಡೆಯುತ್ತಿದ್ದು, ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಶುರುವಾಗಿದೆ. ಇದರ ಮಧ್ಯೆ ಶಾಸಕ ಹಾಗೂ ಸಚಿವರ ಅಸಮಾಧಾನ ಸಹ ಭುಗಿಲೆದ್ದಿದೆ. ಅದರಲ್ಲೂ ಪ್ರಮುಖವಾಗಿ ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ನಲ್ಲಿ ಕಂಪನ ಸೃಷ್ಟಿಸಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಆಪರೇಷನ್ ಕಮಲದ ಮಾತುಗಳು ಕೇಳಿಬರುತ್ತಿವೆ.
ಹತ್ತು ಹದಿನೈದು ಜನ ಶಾಸಕರು ಕಾಂಗ್ರೆಸ್ ತೊರೆದ ಸರ್ಕಾರಕ್ಕೆ ಏನು ಪೆಟ್ಟು ಬೀಳುವುದಿಲ್ಲ. ಬದಲಿಗೆ ಪಕ್ಷ ವಿಬ್ಭಾಗವಾಗಿ ಮಹಾರಾಷ್ಟ್ರ ರಾಜಕೀಯದಂತೆ ಬದಲಾವಣೆ ಸುದ್ದಿ ಹರಿದಾಡುತ್ತಿದೆ. ಇದೆಲ್ಲದರ ಮಧ್ಯೆ ಈ ಬಗ್ಗೆಯೇ ಕಾಲಜ್ಞಾನಿ ಬಸವಣ್ಣನ ಭವಿಷ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಗೊಂದಲಗಳು ಬಗೆಹರಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ಕಂಟಕ ಎನ್ನುವ ಭವಿಷ್ಯ ಹೊರಬಿದ್ದಿದೆ. ಅಲ್ಲದೇ ಅಧಿಕಾರಕ್ಕೇರಲು ಪ್ರಯತ್ನಿಸುವವರಿಗೂ ಕಾಲಜ್ಞಾನಿ ಬಸವಣ್ಣನ ಭವಿಷ್ಯವಾಣಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:26 pm, Sun, 12 November 23