Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಸಂಚಲನ ಮೂಡಿಸಿದ ಯಾದಗಿರಿ ಎಸ್​ಪಿ ಇ-ಮೇಲ್​

ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಅನುದಾನದ ಕೊರತೆ ಎದುರಾಗಿದ್ಯಾ? ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಇದಕ್ಕೆ ಯಾದಗಿರಿ ಎಸ್​ಪಿ ಇ-ಮೇಲ್ ಸಂದೇಶ ಪುಷ್ಠಿ ನೀಡುವಂತಿದೆ .

ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಸಂಚಲನ ಮೂಡಿಸಿದ ಯಾದಗಿರಿ ಎಸ್​ಪಿ ಇ-ಮೇಲ್​
ಯಾದಗಿರಿ ಎಸ್​ಪಿ ಇ-ಮೇಲ್ ಸಂದೇ
Follow us
ಅಮೀನ್​ ಸಾಬ್​
| Updated By: ರಮೇಶ್ ಬಿ. ಜವಳಗೇರಾ

Updated on:Aug 03, 2023 | 2:46 PM

ಯಾದಗಿರಿ, (ಆಗಸ್ಟ್ 02): ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಇದೀಗ ಜಾರಿಗೆ ತಂದಿದ್ದು, ಇದಕ್ಕೆ ಅನುದಾನ ನೀಡಲು ಬೇರೆ-ಬೇರೆ ಮೂಲಗಳಿಂದ ಹಣ ಸಂಗ್ರಹಕ್ಕೆ ಮುಂದಾಗಿದೆ. ಅಲ್ಲದೇ ಈ ಗ್ಯಾರಂಟಿ ಯೋಜನೆಗಳಿಂದ ವಿವಿಧ ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಅಲ್ಲದೇ ಸರ್ಕಾರಿ ನೌಕರರಿಗೂ ವೇತನ ನೀಡದ ಸ್ಥಿತಿ ಬಂದೊದಗಿದೆ ಎಂದು ಟೀಕಿಸಿದೆ. ಇದೀಗ ಇದಕ್ಕೆ ಇ-ಮೇಲ್ ಸಂದೇಶ ಪುಷ್ಠಿ ನೀಡುವಂತಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದಿಷ್ಟು

ಅನುದಾನ ಕೊರತೆ ಕಾರಣ ಜುಲೈ ತಿಂಗಳ ವೇತನ ವಿಳಂಬವಾಗಲಿದೆ ಎಂದು ಜಿಲ್ಲೆಯ ಪೊಲೀಸ್​ ಸಿಬ್ಬಂದಿಗೆ ಯಾದಗಿರಿ ಎಸ್​ಪಿ ಡಾ.ಸಿ.ಬಿ.ವೇದಮೂರ್ತಿ ಇ-ಮೇಲೆ ಮಾಡಿದ್ದು, ಇದೀಗ ಅದು ವೈರಲ್ ಆಗಿದೆ. ಇದರೊಂದಿಗೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಅನುದಾನದ ಕೊರತೆ ಎದುರಾಗಿದ್ಯಾ? ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇನ್ನು ಈ ಇ-ಮೇಲ್ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರತಿಪಕ್ಷಗಳನ್ನು ಇದನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಅಲ್ಲದೇ ಕಾಂಗ್ರೆಸ್​ನ ಗ್ಯಾರಂಟಿ ಜಾರಿಗೆಯಿಂದಾಗಿ ಸರ್ಕಾರಿ ನೌಕರರಿಗೆ ವೇತನ ಕೊಡದ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ.

ಮೊದಲು ಅನುದಾನ ಕೊರತೆಯಿಂದ ವೇತನ ವಿಳಂಬವಾಗಲಿದೆ ಎಂದು ಸಿಬ್ಬಂದಿಗೆ ಇ-ಮೇಲ್​ ಮೂಲಕ ಸಂದೇಶ ರವಾನಿಸಿದ್ದರು. ಆದ್ರೆ, ಇದೀಗ ಅನುದಾನ ಕೊರತೆ ಇಲ್ಲ, ತಾಂತ್ರಿಕ ದೋಷವಾಗಿದೆ. ಹೆಚ್‌ಆರ್‌ಎಂಎಸ್ ತಾಂತ್ರಿಕ ದೋಷದಿಂದ ವಿಳಂಬವಾಗಲಿದೆ ಎಂದು ಮತ್ತೊಂದು ಸಂದೇಶ ಕಳುಹಿಸಿದ್ದಾರೆ. ಇದರೊಂದಿಗೆ ಸಿಬ್ಬಂದಿಗೆ ವೇತನದ ಬಗ್ಗೆ ಸಮಜಾಯಿಷಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:22 pm, Thu, 3 August 23

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ