AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಸಂಚಲನ ಮೂಡಿಸಿದ ಯಾದಗಿರಿ ಎಸ್​ಪಿ ಇ-ಮೇಲ್​

ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಅನುದಾನದ ಕೊರತೆ ಎದುರಾಗಿದ್ಯಾ? ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಇದಕ್ಕೆ ಯಾದಗಿರಿ ಎಸ್​ಪಿ ಇ-ಮೇಲ್ ಸಂದೇಶ ಪುಷ್ಠಿ ನೀಡುವಂತಿದೆ .

ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಸಂಚಲನ ಮೂಡಿಸಿದ ಯಾದಗಿರಿ ಎಸ್​ಪಿ ಇ-ಮೇಲ್​
ಯಾದಗಿರಿ ಎಸ್​ಪಿ ಇ-ಮೇಲ್ ಸಂದೇ
ಅಮೀನ್​ ಸಾಬ್​
| Edited By: |

Updated on:Aug 03, 2023 | 2:46 PM

Share

ಯಾದಗಿರಿ, (ಆಗಸ್ಟ್ 02): ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಇದೀಗ ಜಾರಿಗೆ ತಂದಿದ್ದು, ಇದಕ್ಕೆ ಅನುದಾನ ನೀಡಲು ಬೇರೆ-ಬೇರೆ ಮೂಲಗಳಿಂದ ಹಣ ಸಂಗ್ರಹಕ್ಕೆ ಮುಂದಾಗಿದೆ. ಅಲ್ಲದೇ ಈ ಗ್ಯಾರಂಟಿ ಯೋಜನೆಗಳಿಂದ ವಿವಿಧ ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಅಲ್ಲದೇ ಸರ್ಕಾರಿ ನೌಕರರಿಗೂ ವೇತನ ನೀಡದ ಸ್ಥಿತಿ ಬಂದೊದಗಿದೆ ಎಂದು ಟೀಕಿಸಿದೆ. ಇದೀಗ ಇದಕ್ಕೆ ಇ-ಮೇಲ್ ಸಂದೇಶ ಪುಷ್ಠಿ ನೀಡುವಂತಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದಿಷ್ಟು

ಅನುದಾನ ಕೊರತೆ ಕಾರಣ ಜುಲೈ ತಿಂಗಳ ವೇತನ ವಿಳಂಬವಾಗಲಿದೆ ಎಂದು ಜಿಲ್ಲೆಯ ಪೊಲೀಸ್​ ಸಿಬ್ಬಂದಿಗೆ ಯಾದಗಿರಿ ಎಸ್​ಪಿ ಡಾ.ಸಿ.ಬಿ.ವೇದಮೂರ್ತಿ ಇ-ಮೇಲೆ ಮಾಡಿದ್ದು, ಇದೀಗ ಅದು ವೈರಲ್ ಆಗಿದೆ. ಇದರೊಂದಿಗೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಅನುದಾನದ ಕೊರತೆ ಎದುರಾಗಿದ್ಯಾ? ಸಿಬ್ಬಂದಿಗೆ ವೇತನ ಕೊಡಲು ಸಾಧ್ಯವಾಗದ ಸ್ಥಿತಿ ತಲುಪಿತಾ ಸರ್ಕಾರ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇನ್ನು ಈ ಇ-ಮೇಲ್ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರತಿಪಕ್ಷಗಳನ್ನು ಇದನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಅಲ್ಲದೇ ಕಾಂಗ್ರೆಸ್​ನ ಗ್ಯಾರಂಟಿ ಜಾರಿಗೆಯಿಂದಾಗಿ ಸರ್ಕಾರಿ ನೌಕರರಿಗೆ ವೇತನ ಕೊಡದ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ.

ಮೊದಲು ಅನುದಾನ ಕೊರತೆಯಿಂದ ವೇತನ ವಿಳಂಬವಾಗಲಿದೆ ಎಂದು ಸಿಬ್ಬಂದಿಗೆ ಇ-ಮೇಲ್​ ಮೂಲಕ ಸಂದೇಶ ರವಾನಿಸಿದ್ದರು. ಆದ್ರೆ, ಇದೀಗ ಅನುದಾನ ಕೊರತೆ ಇಲ್ಲ, ತಾಂತ್ರಿಕ ದೋಷವಾಗಿದೆ. ಹೆಚ್‌ಆರ್‌ಎಂಎಸ್ ತಾಂತ್ರಿಕ ದೋಷದಿಂದ ವಿಳಂಬವಾಗಲಿದೆ ಎಂದು ಮತ್ತೊಂದು ಸಂದೇಶ ಕಳುಹಿಸಿದ್ದಾರೆ. ಇದರೊಂದಿಗೆ ಸಿಬ್ಬಂದಿಗೆ ವೇತನದ ಬಗ್ಗೆ ಸಮಜಾಯಿಷಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:22 pm, Thu, 3 August 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ