AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ವೈದ್ಯರ ನಿರ್ಲಕ್ಷ್ಯ ಆರೋಪ, ಹೊಟ್ಟೆಯಲ್ಲಿ ಮಗು ಸಹಿತ ತುಂಬು ಗರ್ಭಿಣಿ ಸಾವು

ಹೆರಿಗೆಗೆಂದು ಹೋಗಿದ್ದ ಗರ್ಭಿಣಿ(Pregnant) ಸಾವನ್ನಪ್ಪಿರುವ ಘಟನೆ ಜಿಲ್ಲಾಸ್ಪತ್ರೆಯ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತ ರ್ದುದೈವಿ.

ಯಾದಗಿರಿ: ವೈದ್ಯರ ನಿರ್ಲಕ್ಷ್ಯ ಆರೋಪ, ಹೊಟ್ಟೆಯಲ್ಲಿ ಮಗು ಸಹಿತ ತುಂಬು ಗರ್ಭಿಣಿ ಸಾವು
ಮೃತ ಗರ್ಭಿಣಿ
ಕಿರಣ್ ಹನುಮಂತ್​ ಮಾದಾರ್
|

Updated on:May 05, 2023 | 12:00 PM

Share

ಯಾದಗಿರಿ: ಹೆರಿಗೆಗೆಂದು ಹೋಗಿದ್ದ ಗರ್ಭಿಣಿ(Pregnant) ಸಾವನ್ನಪ್ಪಿರುವ ಘಟನೆ ಜಿಲ್ಲಾಸ್ಪತ್ರೆ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತ ರ್ದುದೈವಿ. ಮೇ 3ರಂದು ಹೆರಿಗೆಗೆಂದು ಸಂಗೀತಾ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿ ನಾರ್ಮಲ್ ಹೆರಿಗೆ ಮಾಡೋದಾಗಿ ವೈದ್ಯರು ಹೇಳಿದ್ದರು. ಇಡೀ ದಿನ ಆರೋಗ್ಯವಾಗಿಯೇ ಇದ್ದ ಸಂಗೀತಾ ನಿನ್ನೆ(ಮೇ.4) ಸಂಜೆ ಮೃತಪಟ್ಟಿದ್ದಾರೆಂದು ವೈದ್ಯರು ಹೇಳಿದ್ದಾರೆ. ಇದನ್ನ ಕೇಳಿದ ಪೋಷಕರು ಶಾಕ್​ ಆಗಿದ್ದು, ವೈದ್ಯರ ನಿರ್ಲಕ್ಷ್ಯವೇ ಮಗಳ ಸಾವಿಗೆ ಕಾರಣ ಎಂದು ಪೋಷಕರು, ಕುಟುಂಬಸ್ಥರು ಯಾದಗಿರಿ ಜಿಲ್ಲಾಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ವೈದ್ಯರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Delhi Crime: ಗರ್ಭಿಣಿ ಮೇಲೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣ, ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಕರ್ಕಶ ಸಂಗೀತವನ್ನು ನಿಲ್ಲಿಸಿ ಎಂದು ಹೇಳಿದ್ದಕ್ಕೆ ಗರ್ಭಿಣಿ ಎಂದೂ ನೋಡದೆ ಗುಂಡು ಹಾರಿಸಿ ಗರ್ಭಪಾತವಾಗಿದ್ದ ಪ್ರಕರಣದಲ್ಲಿ, ಮಹಿಳೆಯೂ ಕೊನೆಯುಸಿರೆಳೆದಿದ್ದರು. ದೆಹಲಿಯ ಸಿರಸ್​ಪುರದಲ್ಲಿ ಈ ಘಟನೆ ನಡೆದಿತ್ತು, ಪಕ್ಕದ ಮನೆಯಲ್ಲಿ ಕರ್ಕಶ ಮ್ಯೂಸಿಕ್ ಹಾಕಲಾಗಿತ್ತು, ಅದನ್ನು ವಿರೋಧಿಸಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ್ದರು. ಏಪ್ರಿಲ್ 3 ರಂದು ಘಟನೆ ನಡೆದಿತ್ತು.

ಇದನ್ನೂ ಓದಿ:ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ, ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಮಹಿಳೆಯ ಸ್ಥಿತಿ ಚಿಂತಾಜನಕವಾಗಿತ್ತು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಪೊಲೀಸರು ಆರೋಪ್ ಹರೀಶ್ ವಿರುದ್ಧ ಸೆಕ್ಷನ್ 302(ಕೊನೆ) ಪ್ರಕರಣವನ್ನೂ ದಾಖಲಿಸಿದ್ದಾರೆ. ಏಪ್ರಿಲ್ 3 ರಂದು ಘಟನೆಗೆ ಸಂಬಂಧಿಸಿದಂತೆ ಪಿಸಿಆರ್​ಗೆ ಕರೆ ಬಂದಿತ್ತು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ರಂಜು ಅವರನ್ನು ಶಾಲಿಮಾರ್​ ಬಾಗ್​ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಕುತ್ತಿಗೆಗೆ ಗುಂಡೇಟು ತಗುಲಿತ್ತು. ಬಳಿಕ ಗರ್ಭಪಾತವೂ ಆಗಿತ್ತು. ಹರೀಶ್ ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್ ಎಂಬಾತನಿಂದ ಗನ್ ತೆಗೆದುಕೊಂಡು ಆಕೆಯ ಮೇಲೆ ಗುಂಡು ಹಾರಿಸಿದ್ದನು. ಮಹಿಳೆಯ ಪತಿ ಕೂಲಿ ಕೆಲಸ ಮಾಡುತ್ತಿದ್ದು, ಬಿಹಾರ ಮೂಲದ ಕುಟುಂಬ ಅಲ್ಲಿ ನೆಲೆಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:51 am, Fri, 5 May 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್