AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಮಗನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಂದೆ ಬಸವರಾಜ ಬಿರಾದಾರ (55) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಯಾದಗಿರಿ: ಮಗನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡ ತಂದೆ
ಸಾವನ್ನಪ್ಪಿದ್ದ ಮಗ ಶಿವಕುಮಾರ ಬಿರಾದರ ( 34), ತಂದೆ ಬಸವರಾಜ ಬಿರಾದಾರ (55)
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 04, 2023 | 12:48 PM

ಯಾದಗಿರಿ: ಮಗನ ಸಾವಿನ ಸುದ್ದಿ ಕೇಳಿ ತಂದೆ ಬಸವರಾಜ ಬಿರಾದಾರ (55) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ನಡೆದಿದೆ. ನಿನ್ನೆ(ಮಾ.3) ರಾತ್ರಿ ಮದ್ದರಕಿ ಗ್ರಾಮದ ಹೊರಭಾಗದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತವಾಗಿತ್ತು. ಇದರಲ್ಲಿ ಬಸವರಾಜ ಅವರ ಮಗ ಶಿವಕುಮಾರ ಬಿರಾದರ ( 34) ಸಾವನ್ನಪ್ಪಿದ್ದರು.

ಈ ಘಟನೆಯಿಂದ ತೀವ್ರ ಮನನೊಂದಿದ್ದ ತಂದೆ ಬಸವರಾಜ ಮಗ ಹೋದ ಮೇಲೆ ನಾನು ಇರಲ್ಲ ಎಂದು ನೋವು ತೊಡಿಕೊಂಡಿದ್ದನಂತೆ. ಇಂದು(ಮಾ.4) ಬೆಳಿಗ್ಗಿನ ಜಾವ ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:‘ಬೆಂಗಳೂರು: ಪತ್ನಿ, ಮಕ್ಕಳಿಬ್ಬರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಸಾವಿನಲ್ಲೂ ಒಂದಾದ ತಾಯಿ ಮಗ

ಬಾಗಲಕೋಟೆ: ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ನಿನ್ನೆ(ಮಾ.3) ಮನಕಲುಕುವ ಘಟನೆಯೊಂದು ನಡೆದಿದೆ. ಮಗ ದಶರಥ ದುರ್ವೆ (60) ಎಂಬಾತ ಕಳೆದ ಒಂದು ವಾರದಿಂದ ಅನಾರೋಗ್ಯಕ್ಕೀಡಾಗಿದ್ದು, ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾನೆ. ಮಗನ ಅಗಲಿಕೆ ನೋವು ಸಹಿಸದೇ ತಾಯಿ ಶಾವಕ್ಕ ದುರ್ವೆ (90) ಸಂಜೆ ಹೃದಯಾಘತಾದಿಂದ ಸಾವೀಗಿಡಾಗಿದ್ದಾಳೆ. ಇವತ್ತು ಸಾವಿನಲ್ಲೂ ಒಂದಾದ ತಾಯಿ ಮಗನ ಇಬ್ಬರ ಅಂತ್ಯಕ್ರಿಯೆಯನ್ನ ನೆರೆವೇರಿಸಲಾಯಿತು.

ಬಯಲು ಬಹಿರ್ದೆಸೆ ಹೋಗುವ ವಿಚಾರಕ್ಕೆ ಮಾರಣಾಂತಿಕ ಹಲ್ಲೆ

ಯಾದಗಿರಿ: ಬಯಲು ಬಹಿರ್ದೆಸೆ ಹೋಗುವ ವಿಚಾರಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ರಾಯನಪಾಳ್ಯ ಗ್ರಾಮದಲ್ಲಿ ನಡೆದಿದೆ. ನಮ್ಮ ಮನೆ ಹತ್ತಿರ ಬಹಿರ್ದೆಸೆಗೆ ಯಾಕೆ ಬರ್ತಿರಾ ಎಂದು ರೊಚ್ಚಿಗೆದ್ದು ಹನುಮಂತ, ರಾಮಪ್ಪ ಹಾಗೂ ಲಚಮಪ್ಪ ಸೇರಿ 11 ಜನರು, ಒಂದೆ‌ ಕುಟುಂಬದ ಲಕ್ಷ್ಮಣ್, ಕೃಷ್ಣಮೂರ್ತಿ, ರವಿ, ನಾಗರಾಜ್ ಹಾಗೂ ನಿಂಗಮ್ಮ ಸೇರಿ ಐವರ ಮೇಲೆ ಕೊಡಲಿ, ಕಬ್ಬಿಣದ ರಾಡ್ ಹಾಗೂ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಗಾಯಾಳುಗಳನ್ನ ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Sat, 4 March 23

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ