AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಕೆಇಎ ಪರೀಕ್ಷೆ ವೇಳೆ ಅಕ್ರಮ: ಬಂಧನಕೊಳ್ಳಗಾದ ಆರೋಪಿಗಳು ಬಿಚ್ಚಿಟ್ಟ ರಹಸ್ಯವೇನು?

ನಿನ್ನೆ ನಡೆದ ಕೆಇಎ ಪರೀಕ್ಷೆಯಲ್ಲಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಪರೀಕ್ಷಾರ್ಥಿಗಳನ್ನ ಪೊಲೀಸರ ವಶಕ್ಕೆ ಪಡೆದು ಬಂಧಿಸಿದ್ದಾರೆ. 9 ಜನರನ್ನ ಬಂಧಿಸಿದ ಪೊಲೀಸರು ತನಿಖೆ ನಡೆಸಿ ಇವತ್ತು ಜೈಲಿಗೆ ಕಳುಹಿಸಿದ್ದಾರೆ. ಈ ಕುರಿತಾಗಿ ಯಾದಗಿರಿ ಎಸ್​ಪಿ ಜಿ.ಸಂಗೀತ ಪ್ರತಿಕ್ರಿಯಿಸಿದ್ದು, 9 ಜನರನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಬಳಿಕ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಯಾದಗಿರಿ: ಕೆಇಎ ಪರೀಕ್ಷೆ ವೇಳೆ ಅಕ್ರಮ: ಬಂಧನಕೊಳ್ಳಗಾದ ಆರೋಪಿಗಳು ಬಿಚ್ಚಿಟ್ಟ ರಹಸ್ಯವೇನು?
ಯಾದಗಿರಿ ಎಸಿ,ಪಿ ಜಿ.ಸಂಗೀತ
ಅಮೀನ್​ ಸಾಬ್​
| Edited By: |

Updated on: Oct 29, 2023 | 7:46 PM

Share

ಯಾದಗಿರಿ, ಅಕ್ಟೋಬರ್​​​​ 29: ನಿನ್ನೆ ನಡೆದ ಕೆಇಎ (KAE) ಪರೀಕ್ಷೆಯಲ್ಲಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಪರೀಕ್ಷಾರ್ಥಿಗಳನ್ನ ಪೊಲೀಸರ ವಶಕ್ಕೆ ಪಡೆದು ಬಂಧಿಸಿದ್ದಾರೆ. 9 ಜನರನ್ನ ಬಂಧಿಸಿದ ಪೊಲೀಸರು ತನಿಖೆ ನಡೆಸಿ ಇವತ್ತು ಜೈಲಿಗೆ ಕಳುಹಿಸಿದ್ದಾರೆ. ಈ ಕುರಿತಾಗಿ ಯಾದಗಿರಿ ಎಸ್​ಪಿ ಜಿ.ಸಂಗೀತ ಪ್ರತಿಕ್ರಿಯಿಸಿದ್ದು, ಏಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿತ್ತು. ಡಿವೈಸ್ ಬಳಕೆ‌ ಮಾಡಿ ಪರೀಕ್ಷೆ ಬರೆಯುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಕೂಡಲೇ ಅಧಿಕಾರಿಗಳ ಒಂದು ತಂಡ ಮಾಡಿ ಕಾರ್ಯ ಪ್ರವೃತರಾಗಿ, 9 ಜನರನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಬಳಿಕ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಒಂಬತ್ತು ಜನರಿಂದ ಬ್ಲೂಟೂತ್, ಸೀಮ್ ಕಾರ್ಡ್,ಬ್ಯಾಟರಿಗಳನ್ನ ವಶಕ್ಕೆ ಪಡೆಯಲಾಗಿದೆ. ಶರ್ಟ್​ನ ಕಾಲರನಲ್ಲಿ ಪ್ಯಾಕೇಟ್ ಮಾಡಿಕೊಂಡು ಬಂದಿದ್ದರು. ಬನಿಯನ್, ಅಂಡರ್​ ವೆರ್‌ನಲ್ಲಿ ಬ್ಲೂಟೂತ್ ಇಟ್ಟುಕೊಂಡು ಬಂದಿದ್ದರು. ಎಂಟು ಜನರು ಕಲಬುರ್ಗಿ ಜಿಲ್ಲೆಯ ಮೂಲದವರು. ಒಬ್ಬರು ವಿಜಯಪುರ ಮೂಲದವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಯಾದಗಿರಿ: ಬ್ಲೂಟೂತ್ ಬಳಸಿ ಕೆಪಿಎಸ್​ಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ

ನಿನ್ನೆ ಮಧ್ಯಾಹ್ನದಿಂದ ಒಬ್ಬೊಬ್ಬರು ಅರೆಸ್ಟ್ ಆಗಿದ್ದಾರೆ. ಇನ್ನು ತನಿಖೆ ನಡೆಯುತ್ತಿದೆ‌‌. ಎಲ್ಲರನ್ನ ಪರೀಕ್ಷಾ ಕೇಂದ್ರದಲ್ಲಿ ವಶಕ್ಕೆ ಪಡೆದುಕೊಂಡಿದ್ದೇವೆ. ಸಿದ್ದರಾಮ ಅಲಿಯಾಸ್ ಪುಟ್ಟಪ್ಪ ಎಂಬಾತನನ್ನ ವಶಕ್ಕೆ ಪಡೆದಾಗ ಉಳಿದವರ ಬಗ್ಗೆ ಮಾಹಿತಿ ಸಿಕ್ಕಿದೆ. ಪಿಎಸ್ಐ ಅಕ್ರಮದ ಕಿಂಗ್ ಪಿನ್ ಆರ್.ಡಿ ಪಾಟೀಲ್​ ಸಂಬಂಧಿಕರು ಇರುವ ಮಾಹಿತಿ ಇದೆ ಇನ್ನು ಸಿಕ್ಕಿಲ್ಲ.

ಕೆಲವರು 6,8,10 ಲಕ್ಷ‌ ರೂ. ಕೊಟ್ಟಿದ್ದೆವೆ ಅಂತ ವಿಚಾರಣೆಯಲ್ಲಿ ಮಾಹಿತಿ ಸಿಕ್ಕಿದೆ. ಲಾಡ್ಜ್​ನಲ್ಲಿ ಕುಳಿತುಕೊಂಡು ಉತ್ತರ ಹೇಳುತ್ತಿದ್ದರು. ಆದ್ರೆ ಲಾಡ್ಜ್ ಮೇಲೆ ದಾಳಿ ಮಾಡಿದ್ದಾಗ ಎಸ್ಕೇಪ್ ಆಗಿದ್ದಾರೆ. ಬ್ಲೂಟೂತ್ 4, ರೀಷಿವರ್ 5 ಸೇರಿದಂತೆ ನಾನಾ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: KPSC ಪರೀಕ್ಷೆ ವೇಳೆ ಅಕ್ರಮ: ಫುಲ್ ತೋಳಿನ ಶರ್ಟ್ ಧರಿಸಿದವರಿಗೆ ನೋ ಎಂಟ್ರಿ, ತೋಳಿಗೆ ಕತ್ತರಿ ಹಾಕಿದ ಅಭ್ಯರ್ಥಿಗಳು

ಇಎನ್‌ಟಿ ಡಾಕ್ಟರ್​ಗೆ ಕರೆಸಿ ಕಿವಿಯಲ್ಲಿ ಹಾಕಿದ್ದ ರಿಷಿವರ್ ತೆಗೆಸಲಾಗಿದೆ. ನಿನ್ನೆ ಬೆಳಗ್ಗೆ ನಡೆದ ಪರೀಕ್ಷೆ ವೇಳೆ ನಾವು ಮೆಟಲ್ ಡಿಟೆಕ್ಟರ್ ಬಳಕೆ ಮಾಡಿಲ್ಲ. ಅಕ್ರಮ ಬಯಲು ಆಗಿದ್ದ ಕೂಡಲೇ ಮೆಟಲ್ ಡಿಟೆಕ್ಟರ್ ಬಳಕೆ ಮಾಡಿದ್ದೇವೆ. ಮೆಟಲ್ ಡಿಟೆಕ್ಟರ್​ನಿಂದ ಟ್ರೇಸ್ ಮಾಡಲು ಆಗಿಲ್ಲ. ಕಿವಿಯಲ್ಲಿ ಬಳಕೆ ಮಾಡಿದ್ದ ರಿಷಿವರ್ ಮಾತ್ರ ಡಿಟೆಕ್ಟ್ ಆಗಿಲ್ಲ ಎಂದು ಹೇಳಿದ್ದಾರೆ.

ಇದೆ ಮೊದಲ ಬಾರಿಗೆ ಯಾದಗಿರಿ ಜಿಲ್ಲೆಯಲ್ಲಿ ಇಷ್ಟು ಮಟ್ಟದಲ್ಲಿ ಪರೀಕ್ಷೆ ವೇಳೆ ಅಕ್ರಮವೆಸಗಿ ಪರೀಕ್ಷೆ ಬರೆದಿರುವ ಘಟನೆ ನಡೆದಿದೆ. ಹೀಗಾಗಿ ಪೊಲೀಸರು 9 ಜನರ ಜೊತೆ ಇನ್ನು ಎಷ್ಟು ಜನ ಶಾಮೀಲಾಗಿದ್ದಾರೆ ಜೊತೆಗೆ ಇದರ ಕಿಂಗ್ ಪಿನ್ ಯಾರು ಪತ್ತೆ ಹಚ್ಚಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!