AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಪಿಎಸ್​ಐ ಅನುಮಾನಾಸ್ಪದ ಸಾವು ಪ್ರಕರಣ; ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಮಾಜಿ ಸಚಿವ ರಾಜುಗೌಡ ಆರೋಪ

ಯಾದಗಿರಿ ಸೈಬರ್​ ಠಾಣೆ ಪಿಎಸ್​ಐ ಪರಶುರಾಮ (PSI Parashuram) ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಪಿಎಸ್​​ಐ ಪತ್ನಿ ಶ್ವೇತಾ ದೂರು ಆಧರಿಸಿ ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಕುರಿತು ಇದೀಗ ಹಲವು ನಾಯಕರು ಕಿಡಿಕಾರಿದ್ದು, ತನಿಖೆಗೆ ಆಗ್ರಹಿಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಯಾದಗಿರಿ ಪಿಎಸ್​ಐ ಅನುಮಾನಾಸ್ಪದ ಸಾವು ಪ್ರಕರಣ; ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಮಾಜಿ ಸಚಿವ ರಾಜುಗೌಡ ಆರೋಪ
ಬಿಜೆಪಿ ಮಾಜಿ ಶಾಸಕ ರಾಜುಗೌಡ, ಮೃತ ಪಿಎಸ್​ಐ
Anil Kalkere
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 03, 2024 | 3:01 PM

Share

ಬೆಂಗಳೂರು, ಆ.03: ಯಾದಗಿರಿ (Yadgiri) ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ(PSI)ಪರಶುರಾಮ (34) ಇಂದು(ಶನಿವಾರ) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಮಾಜಿ ಶಾಸಕ ರಾಜುಗೌಡ, ‘ಇದು ಆತ್ಮಹತ್ಯೆ ಅಲ್ಲ, ಹತ್ಯೆ ಎಂದು ಆರೋಪಿಸಿದ್ದಾರೆ. ಪಿಎಸ್ಐ ಆತ್ಮಹತ್ಯೆ ಹಿಂದೆ ಸ್ಥಳೀಯ ಶಾಸಕರು ಮತ್ತು ಅವರ ಪುತ್ರ ಇದ್ದಾರೆ. ಮೃತ ಪರಶುರಾಮ್​ರಿಂದ 30 ಲಕ್ಷ ಪಡೆದಿದ್ದಾರೆ ಎನ್ನುತ್ತಿದ್ದಾರೆ. ಕೂಡಲೇ ಯಾದಗಿರಿ ಶಾಸಕ, ಅವರ ಪುತ್ರನನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ರೆ ಯಾದಗಿರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ಗೃಹ ಸಚಿವರಿಗೆ ಪತ್ರ- JDS ಶಾಸಕ ಶರಣಗೌಡ ಕಂದಕೂರು

ಇನ್ನು ಈ ಕುರಿತು ಯಾದಗಿರಿಯಲ್ಲಿ ಗುರುಮಠಕಲ್ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಮಾತನಾಡಿ, ‘ಮೂರು ದಿನಗಳ ಹಿಂದೆಯಷ್ಟೇ ವರ್ಗಾವಣೆ ಬಗ್ಗೆ ನನ್ನ ಜತೆ ಮಾತಾಡಿದ್ದ. 1 ವರ್ಷ ಕೂಡ ಆಗಿಲ್ಲ, ಮತ್ತೆ ವರ್ಗಾವಣೆ ಮಾಡಿದ್ದಾರೆ ಎಂದು ಹೇಳಿದ್ದ. ಮೃತ ಪಿಎಸ್​ಐ ಪರಶುರಾಮ್ ಪತ್ನಿ ಈಗ ತುಂಬು ಗರ್ಭಿಣಿ ಇದ್ದಾರೆ. ಈ ರೀತಿ ಆದರೆ ಪ್ರಾಮಾಣಿಕ ಅಧಿಕಾರಿಗಳು ಏನು ಮಾಡಬೇಕು?. ಸದನದೊಳಗೆ ಮತ್ತು ಹೊರಗೂ ಯಾದಗಿರಿ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಪ್ರಸ್ತಾಪಿಸಿದ್ದೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು, ಆದರೂ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ:ಯಾದಗಿರಿ ಪಿಎಸ್​ಐ ಪರಶುರಾಮ ಸಹಜ ಸಾವು ಎಂದ ಪರಮೇಶ್ವರ್​: ಎ1 ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ

ನನ್ನ 2 ತಿಂಗಳ ಸಂಬಳ ಮೃತ ಪರಶುರಾಮ ಕುಟುಂಬಕ್ಕೆ ನೀಡುತ್ತೇನೆ

ಪರಶುರಾಮ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. PSI ಸಾವಿಗೆ ಅಧಿಕಾರಿಗಳು ಹೊಣೆನಾ, ಮೇಲಾಧಿಕಾರಿಗಳು ಹೊಣೆನಾ?. ನಾನು ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್​ಗೆ ಪತ್ರ ಬರೆದಿದ್ದೇನೆ. ಉನ್ನತಮಟ್ಟದ ತನಿಖೆಗೆ ಆಗ್ರಹಿಸಿದ್ದೇನೆ. ಮೃತ ಪರಶುರಾಮ್ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಬೇಕು. ನನ್ನ 2 ತಿಂಗಳ ಸಂಬಳ ಮೃತ ಪರಶುರಾಮ ಕುಟುಂಬಕ್ಕೆ ನೀಡುತ್ತೇನೆ ಎಂದರು.

ಘಟನೆ ಖಂಡಿಸಿ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್

ಈ ಘಟನೆ ಖಂಡಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್ ಮಾಡಿದ್ದು, ‘ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾ ರೆಡ್ಡಿ, ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜನಪ್ರತಿನಿಧಿಯಾಗಿ ಮಾದರಿಯಾಗಿರಬೇಕಾಗಿದ್ದ ಶಾಸಕರು, ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಚನ್ನಾ ರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕು ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Anil Kalkere
Anil Kalkere
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?